Advertisement
ಜಿಲ್ಲೆ

ಸಾಮಾಜಿಕ ಜಾಲತಾಣ ಬಿಡಿ, ಎನ್ ಸಿ ಸಿ ಸೇರಿ

Share

ಮಡಿಕೇರಿ  : ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದ ಮೇಲಿನ ಒಲವನ್ನು ಬಿಟ್ಟು ಶೈಕ್ಷಣಿಕ ಗುರಿ ಸಾಧಿಸಲು ಪುಸ್ತಕದ ಕಡೆ ಹೆಚ್ಚಿನ ಗಮನ ಹರಿಸಬೇಕು ಮತ್ತು ಶಿಸ್ತುಬದ್ಧ ಜೀವನ ನಡೆಸಲು ಎನ್ ಸಿ ಸಿ ಸೇರಿ ಎಂದು  ಎನ್‍ಸಿಸಿ ಕಮಾಂಡಿಂಗ್ ಆಫೀಸರ್ ಕರ್ನಲ್ ವಿ.ಎಂ.ನಾಯಕ್ ಕರೆ ನೀಡಿದ್ದಾರೆ.

ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಾಗೂ ಎನ್‍ಸಿಸಿ ಸಹಯೋಗದಲ್ಲಿ ಕಾಲೇಜ್‍ನಲ್ಲಿ ನಡೆದ “ಎನ್‍ಸಿಸಿ ಸೇರ್ಪಡೆ” ದಿಕ್ಸೂಚಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.  ಎನ್‍ಸಿಸಿ ತನ್ನದೇ ಆದ ಮೌಲ್ಯ ಹಾಗೂ ಮಹತ್ವವನ್ನು ಹೊಂದಿದ್ದು, ಇದರಲ್ಲಿ ತೊಡಗಿಸಿಕೊಂಡ ವಿದ್ಯಾರ್ಥಿಗಳು ಇತರರಿಗಿಂತ ಭಿನ್ನವಾಗಿರುತ್ತಾರೆ. ಕೇವಲ ವಿದ್ಯಾರ್ಥಿ ಜೀವನದಲ್ಲಿ ಮಾತ್ರ ಶಿಸ್ತನ್ನು ಅಳವಡಿಸಿಕೊಳ್ಳದೆ ಜೀವನದುದ್ದಕ್ಕೂ ಮೈಗೂಡಿಸಿಕೊಳ್ಳುವಂತೆ ಸಲಹೆ ನೀಡಿದರು. ಎನ್‍ಸಿಸಿ ಬೆಳೆದು ಬಂದ ಹಾದಿ ಹಾಗೂ ಅದರ ಕಾರ್ಯವೈಖರಿಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದ ಕರ್ನಲ್ ನಾಯಕ್, ಎನ್‍ಸಿಸಿ ಯಲ್ಲಿ ವಿಫುಲ ಅವಕಾಶಗಳಿದ್ದು, ಶಿಬಿರವನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಕರೆ ನೀಡಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜ್‍ನ ಪ್ರಾಂಶುಪಾಲ ಡಾ.ಟಿ.ಡಿ.ತಿಮ್ಮಯ್ಯ ಅವರು ಎನ್‍ಸಿಸಿ ವಿದ್ಯಾರ್ಥಿಗಳು ತಮ್ಮ ಶಿಸ್ತುಬದ್ಧ ಜೀವನ ಶೈಲಿಯ ಮೂಲಕವೇ ಇತರರಿಗೆ ಮಾದರಿಯಾಗಬೇಕೆಂದರು.
ಎನ್‍ಸಿಸಿ ಅಧಿಕಾರಿ ಮೇಜರ್ ಡಾ.ಬಿ.ರಾಘವ ಮಾತನಾಡಿ, ಎನ್‍ಸಿಸಿ ಗೆ ತನ್ನದೇ ಆದ ಇತಿಹಾಸವಿದ್ದು, ಬಹಳಷ್ಟು ವಿದ್ಯಾರ್ಥಿಗಳು ಇದರಲ್ಲಿ ತೊಡಗಿಸಿಕೊಂಡು ಶಿಸ್ತು ಮತ್ತು ಸಂಯಮವನ್ನು ಬೆಳೆಸಿಕೊಂಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

4 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

4 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

4 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

5 days ago