Advertisement
ಸುದ್ದಿಗಳು

ಸಾಮಾನ್ಯ ಕಾರ್ಯಕರ್ತನಾಗಿ ಬಿಜೆಪಿಯಲ್ಲೇ ಇದ್ದೇನೆ – ಕೃಪಾಶಂಕರ್ ತುದಿಯಡ್ಕ

Share
ಸುಳ್ಯ: ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಡೆದ ಅಡ್ಡಮತದಾನದ ಹಿನ್ನೆಲೆಯಲ್ಲಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿದ ಎಲ್ಲರೂ ರಾಜೀನಾಮೆ ನೀಡುವಂತೆ ಬಿಜೆಪಿ ಹಾಗೂ ಸಂಘಪರಿವಾರ ನೀಡಿದ ಸೂಚನೆಯ ನಂತರ ಪಕ್ಷದ ಹಾಗೂ ಸಂಘಟನೆಯ ವಿವಿಧ ಜವಾಬ್ದಾರಿಯಿಂದ ಮುಕ್ತಿಗೊಳಿಸಿ ಮಂಡಲ ಬಿಜೆಪಿ ಹೇಳಿಕೆ ಬಳಿಕ  ಸುಳ್ಯನ್ಯೂಸ್.ಕಾಂ ಗೆ ಪ್ರತಿಕ್ರಿಯೆ ನೀಡಿದ ಆಲೆಟ್ಟಿ ಪ್ರಾ.ಕೃ.ಪ.ಸ.ಸಂಘದ.ಅಧ್ಯಕ್ಷ ಕೃಪಾಶಂಕರ ತುದಿಯಡ್ಕ, “ನಾನು ಬಿಜೆಪಿಯಲ್ಲೇ ಇದ್ದೇನೆ, ಸಾಮಾನ್ಯ ಕಾರ್ಯಕರ್ತನಾಗಿ ಮುಂದುವರಿಯುತ್ತೇನೆ. ಪಕ್ಷದ ವಿರೋಧಿ, ಪಕ್ಷಾಂತರ ಕೆಲಸ ಮಾಡಿಲ್ಲ, ಮಾಡುವುದೂ ಇಲ್ಲ. ಸಹಕಾರಿ ಸಂಘಕ್ಕೆ ರಾಜೀನಾಮೆ ನೀಡಲು ಸ್ಥಾನೀಯ ಸಮಿತಿ ಅಥವಾ ಗ್ರಾಮ ಸಮಿತಿ ತೀರ್ಮಾನದ ಬಳಿಕವೇ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಹೇಳಿದ್ದಾರೆ.
ಆಲೆಟ್ಟಿ ಪ್ರಾ.ಕೃ.ಪ.ಸ.ಸಂಘದ.ಅಧ್ಯಕ್ಷ ಕೃಪಾಶಂಕರ ತುದಿಯಡ್ಕ ಅವರು ರಾಜೀನಾಮೆಯ ಕುರಿತು  ಸ್ಪಷ್ಟ ನಿಲುವು ವ್ಯಕ್ತಪಡಿಸಿ, ಸಹಕಾರಿ ಸಂಘಕ್ಕೆ ನಿರ್ದೇಶಕನನ್ನಾಗಿ ಗ್ರಾಮದ ಜನತೆ ಮತದಾನ ಮಾಡುವ ಮೂಲಕ ಜವಾಬ್ದಾರಿ ನೀಡಿದ್ದಾರೆ. ನಿರ್ದೇಶಕರು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿ 5 ವರ್ಷದ ಅವಧಿಗೆ ಅಧಿಕಾರ ನೀಡಿದ್ದಾರೆ. ಅವಧಿ ಮುಗಿಯುವ ತನಕ ಅಧ್ಯಕ್ಷ ಸ್ಥಾನದಲ್ಲಿರುತ್ತೇನೆ ಹಾಗೂ ಒಂದು ವೇಳೆ ಆಡಳಿತ ಮಂಡಳಿಯ ನಿರ್ದೇಶಕರು ಮತ್ತು ಗ್ರಾಮದ ಪಕ್ಷದ ಕಾರ್ಯಕರ್ತರು, ಸ್ಥಾನೀಯ ಸಮಿತಿ ರಾಜೀನಾಮೆ ನೀಡುವಂತೆ ಹೇಳಿದರೆ ರಾಜೀನಾಮೆ ನೀಡಲು ಬದ್ದನಾಗಿರುತ್ತೇನೆ.
ಸುಮಾರು 26 ವರ್ಷಗಳ ರಾಜಕೀಯ ಜೀವನದಲ್ಲಿ ಪಕ್ಷದ ವಿವಿಧ ಜವಾಬ್ದಾರಿಯನ್ನು ಸಂಘಟನೆಯ  ಮತ್ತು ಪಕ್ಷದ ಸೂಚನೆಯ ಪ್ರಕಾರ ನಿರ್ವಹಿಸಿದ್ದೇನೆ. ಮುಂದಿನ ದಿನಗಳಲ್ಲಿ ಪಕ್ಷದ ಜವಾಬ್ದಾರಿಯಿಂದ ವಿಮುಕ್ತಿಗೊಳಿಸುವುದಾದರೆ ಅದನ್ನು ಸ್ವಾಗತಿಸುತ್ತೇನೆ. ಪ್ರಸ್ತುತ ಪಕ್ಷದ ಜವಾಬ್ದಾರಿಯುತ ಹುದ್ದೆಯಲ್ಲಿಲ್ಲ. ವೈಯುಕ್ತಿಕವಾಗಿ ಹೇಳುವುದಾದರೆ ಪಕ್ಷದಿಂದ ಮತ್ತು ಸಂಘಟನೆಯಿಂದ ಸಮಾಜಮುಖಿಯಾಗಿ ಗುರುತಿಸಿಕೊಂಡಿದ್ದೇನೆ.ಜನಪ್ರತಿನಿಧಿಯಾಗಿ ಸೇವೆ ಸಲ್ಲಿಸುವ ಅವಕಾಶವು ಒದಗಿ ಬಂದಿದೆ ಅದಕ್ಕಾಗಿ ಸಂಘಟನೆಯ ಹಿರಿಯರಿಗೆ ಮತ್ತು ಪಕ್ಷದ ಪ್ರಮುಖರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತಿದ್ದೇನೆ ಎಂದು ಹೇಳಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್

ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…

9 hours ago

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

10 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

15 hours ago

ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…

17 hours ago

ಮುಂಗಾರು ಮೇ 26ಕ್ಕೆ ಕೇರಳ ಪ್ರವೇಶ ಸಾಧ್ಯ : ಕರ್ನಾಟಕದ ಹಲವೆಡೆ ಭಾರೀ ಮಳೆ ಎಚ್ಚರಿಕೆ – ರೈತರಿಗೆ ಸಲಹೆ ಏನು..?

ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…

17 hours ago

ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ

ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…

19 hours ago