Advertisement
Political mirror

ಸಾರಥಿಗಾಗಿ ಕಾಯುತ್ತಿದೆ ಸುಳ್ಯ ನಗರ ಪಂಚಾಯತ್

Share

ಸುಳ್ಯ: ಚುನಾವಣೆಯ ಅಬ್ಬರ, ಫಲಿತಾಂಶದ ಕಾತರ ಕೊನೆಗೊಂಡ ಕೂಡಲೇ ಈಗ ನಗರ ಪಂಚಾಯತ್ ನ ಆಡಳಿತವನ್ನು ಯಾರು ಮುನ್ನಡೆಸುತ್ತಾರೆ ಎಂಬ ಕುತೂಹಲ ಎಲ್ಲೆಡೆ ಮನೆ ಮಾಡಿದೆ.

ಫಲಿತಾಂಶ, ಮೀಸಲಾತಿಗಳು ಘೋಷಣೆ ಆದ ಮೇಲೆ ಅಧ್ಯಕ್ಷ, ಉಪಾಧ್ಯಕ್ಷರು ಯಾರಾಗುತ್ತಾರೆ ಎಂಬ ಕುತೂಹಲ, ಚರ್ಚೆ ಎಲ್ಲಡೆ ಇದೆ. 20 ಸ್ಥಾನಗಳ ಪೈಕಿ 14ನ್ನು ಪಡೆದುಕೊಂಡಿರುವ ಬಿಜೆಪಿ ಮೂರನೇ ಎರಡು ಬಹುಮತದೊಂದಿಗೆ ಸತತ ನಾಲ್ಕನೇ ಬಾರಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಮಹಿಳೆಗೆ ಮತ್ತು ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ. ಇದೀಗ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನ ಯಾರ ಪಾಲಾಗುತ್ತದೆ ಎಂಬುದಷ್ಟೇ ಉಳಿದಿರುವ ಪ್ರಶ್ನೆ.

ಘೋಷಣೆಯಾಗಿರುವ ಮೀಸಲಾತಿ ಪ್ರಕಾರ ಬಿಜೆಪಿಯಲ್ಲಿ ಗೆದ್ದ ನಾಲ್ವರು ಸದಸ್ಯರು ಅರ್ಹರಾಗುತ್ತಾರೆ. ಒಂದನೇ ವಾರ್ಡ್ ದುಗಲಡ್ಕದಿಂದ ಗೆದ್ದ ಶಶಿಕಲಾ.ಎ, ಒಂಭತ್ತನೇ ವಾರ್ಡ್ ಕೇರ್ಪಳ ದಿಂದ ಗೆದ್ದ ಪೂಜಿತಾ, 14ನೇ ವಾರ್ಡ್ ಕಲ್ಲುಮುಟ್ಲು ವಿನಿಂದ ಗೆದ್ದ ಸುಶೀಲಾ ಮತ್ತು 16ನೇ ವಾರ್ಡ್ ಕಾಯರ್ತೋಡಿಯಿಂದ ಗೆಲುವು ಸಾಧಿಸಿದ ಪ್ರವಿತಾ ಪ್ರಶಾಂತ್. ಈ ನಾಲ್ವರಲ್ಲಿ ಓರ್ವರು ಮುಂದಿನ 20 ತಿಂಗಳು ನಗರ ಪಂಚಾಯತ್ ನ್ನು ಮುನ್ನಡೆಸಲಿದ್ದಾರೆ. ನಾಲ್ವರು ಕೂಡ ಪ್ರಥಮ ಬಾರಿಗೆ ಆಯ್ಕೆಯಾಗಿದ್ದಾರೆ. ಆದರೆ ಶಶಿಕಲಾ ಅವರು ಕಳೆದ ಅವಧಿಯಲ್ಲಿ ನಾಮನಿರ್ದೇಶಿತ ಸದಸ್ಯೆಯಾಗಿದ್ದರು. ಈ ನಾಲ್ವರಲ್ಲಿ ಒಬ್ಬರನ್ನು ಪಕ್ಷ ಘೋಷಿಸಲಿದೆ. ಅಳೆದು ತೂಗಿ ಎಲ್ಲಾ ಸಮೀಕರಣಗಳನ್ನೂ ಪರಿಗಣಿಸಿ ಅಧ್ಯಕ್ಷ ಅಭ್ಯರ್ಥಿಯನ್ನು ಅಂತಿಮಗೊಳಿಸಲಿದೆ‌.

ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮೀಸಲಾಗಿದೆ. ಎಲ್ಲಾ 14 ಮಂದಿ ಸದಸ್ಯರೂ ಅರ್ಹರು. ಆದರೆ 10ನೇ ವಾರ್ಡ್ ನಿಂದ ಗೆಲುವು ಸಾಧಿಸಿದ ಬಿಜೆಪಿ ನಗರ ಶಕ್ತಿ ಕೇಂದ್ರದ ಅಧ್ಯಕ್ಷರೂ ಆದ ವಿನಯಕುಮಾರ್ ಕಂದಡ್ಕ ಅವರನ್ನು ಆಯ್ಕೆ ಮಾಡುವ ಸಂಭವ ಹೆಚ್ಚಿದೆ. ಒಟ್ಟಿನಲ್ಲಿ ಅಧ್ಯಕ್ಷ-ಉಪಾಧ್ಯಕ್ಷ ಆಯ್ಕೆಯ ಅಧಿಸೂಚನೆ ಹೊರ ಬಂದ ಬಳಿಕ ಈ ಕುರಿತ ಚರ್ಚೆ ನಿರ್ಧಾರಕ್ಕೆ ವೇಗ ಸಿಗಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

14 hours ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

15 hours ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

2 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

3 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

3 days ago