Advertisement
ಸುದ್ದಿಗಳು

ಸಾರ್ವಜನಿಕರಿಗೆ ತೊಂದರೆಯಾಗದೇ ಮರಳು ಪೂರೈಕೆಯಾಗಲಿ- ಸಚಿವರ ಸೂಚನೆ

Share

ಮಂಗಳೂರು: ಸಾರ್ವಜನಿಕರಿಗೆ ಸುಲಭವಾಗುವ ರೀತಿಯಲ್ಲಿ ಮರಳು ಪೂರೈಕೆ ಆಗಬೇಕು. ಇದರಿಂದ ಸಾರ್ವಜನಿಕರಿಗೆ ಯಾವ ರೀತಿಯ ತೊಂದರೆ, ಕಷ್ಟಗಳಾಗಬಾರದು ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

Advertisement
Advertisement
Advertisement
Advertisement

ಸೋಮವಾರ ಮಹಾನಗರಪಾಲಿಕೆ ಮಂಗಳಾ ಸಭಾಂಗಣದಲ್ಲಿ ನಡೆದ ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತಾಡಿದರು. ಸರಕಾರದಿಂದ ನೀಡಬೇಕಾದ ಸೌಲಭ್ಯವನ್ನು ಒದಗಿಸಿಕೊಡಲಾಗುವುದು, ಸರಕಾರಿ ಕಾಮಗಾರಿಗಳಿಗೆ ಸಕಾಲದಲ್ಲಿ ಮರಳು ಪೂರೈಕೆಯಾಗಿ ಕಾಮಗಾರಿಗಳನ್ನು ಆದಷ್ಟು ಕನಿಷ್ಟ ಸಮಯದಲ್ಲಿ ಪೂರ್ತಿಗೊಳಿಸುವಂತೆ ನೋಡಿಕೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

Advertisement

ಸ್ಯಾಂಡ್ ಬಝಾರ್ ಆ್ಯಪ್ ಮೂಲಕ ಮರಳು ಕಾಯ್ದಿರಿಸಿ, 2,3 ದಿನಗಳೊಳಗೆ ಮರಳು ದೊರಕದೇ ಇದ್ದಲ್ಲಿ ಈ ಕುರಿತು ಸಾರ್ವಜನಿಕರು ದೂರು ನೀಡಬಹುದು. ಸಾರ್ವಜನಿಕರಿಗೆ ಸುಲಭ ರೀತಿಯಲ್ಲಿ ಯೋಜನೆಗಳು ಸಕ್ರಿಯವಾಗಬೇಕು ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಹೇಳಿದರು. ಜಿಲ್ಲಾ ಖನಿಜ ಪ್ರತಿಷ್ಠಾನ ನಿಧೀಯಲ್ಲಿ ರೂ. 4.62 ಕೋಟಿ ಮೊತ್ತ ಲಭ್ಯವಿದ್ದು, ಇದನ್ನು ಗಣಿಗಾರಿಕೆಯಿಂದ ತೊಂದರೆಗೀಡಾದ ಪ್ರದೇಶಗಳ ಅಭಿವೃದ್ಧಿಗೆ ಬಳಸಲಾಗುವುದು. ಆಯಾ ಪ್ರದೇಶದ ಶಾಸಕರಿಂದ ಕ್ರಿಯಾ ಯೋಜನೆ ಪಡೆದು ಕಾಮಗಾರಿ ಅನುಷ್ಠಾನಗೊಳಿಸುವಂತೆ ಸಚಿವರು ಸೂಚಿಸಿದರು. ಡಿ.ಎಂ.ಎಫ್ ಖಾತೆಯಲ್ಲಿ ಲಭ್ಯವಿರುವ ಮೊತ್ತವನ್ನು ವಿವಿಧ ಕಾಮಗಾರಿ ಕೆಲಸಗಳಿಗೆ ಹಂಚಿಕೆ ಮಾಡಲಾಗಿರುತ್ತದೆ. ಸಮಿತಿ ಸಭೆಯ ತೀರ್ಮಾನದಂತೆ ವಿಧಾನ ಸಭಾ ಕ್ಷೇತ್ರಕ್ಕೆ ಅನುಗುಣವಾಗಿ ಕಾಮಗಾರಿ ಹಾಗೂ ಅನುದಾನದ ಮೊತ್ತವನ್ನು ಹಂಚಿಕೆ ಮಾಡಲಾಗಿದ್ದು, ಸಂಬಂಧಪಟ್ಟ ವಿಧಾನ ಸಭಾ ಶಾಸಕರಿಗೆ ಕಳುಹಿಸಿಕೊಡಲಾಗಿರುತ್ತದೆ. ತಮ್ಮ ಕ್ಷೇತ್ರಗಳಿಗೆ ಅಗತ್ಯವಿರುವ ಕಾಮಗಾರಿಗಳ ಪಟ್ಟಿಯನ್ನು ಸಭೆಯ ಗಮನಕ್ಕೆ ತರಲಾಯಿತು.

ಸಭೆಯಲ್ಲಿ ದ.ಕ ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್, ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಮಹಾನಗರಪಾಲಿಕೆ ಆಯುಕ್ತ ಅಜಿತ್ ಹೆಗ್ಡೆ, ದ.ಕ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ

ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…

11 hours ago

ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…

11 hours ago

ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು

ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…

11 hours ago

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

20 hours ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

20 hours ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

21 hours ago