Advertisement
ಸುದ್ದಿಗಳು

ಸಾರ್ವಜನಿಕರಿಗೆ ತೊಂದರೆಯಾಗದೇ ಮರಳು ಪೂರೈಕೆಯಾಗಲಿ- ಸಚಿವರ ಸೂಚನೆ

Share

ಮಂಗಳೂರು: ಸಾರ್ವಜನಿಕರಿಗೆ ಸುಲಭವಾಗುವ ರೀತಿಯಲ್ಲಿ ಮರಳು ಪೂರೈಕೆ ಆಗಬೇಕು. ಇದರಿಂದ ಸಾರ್ವಜನಿಕರಿಗೆ ಯಾವ ರೀತಿಯ ತೊಂದರೆ, ಕಷ್ಟಗಳಾಗಬಾರದು ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಸೋಮವಾರ ಮಹಾನಗರಪಾಲಿಕೆ ಮಂಗಳಾ ಸಭಾಂಗಣದಲ್ಲಿ ನಡೆದ ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತಾಡಿದರು. ಸರಕಾರದಿಂದ ನೀಡಬೇಕಾದ ಸೌಲಭ್ಯವನ್ನು ಒದಗಿಸಿಕೊಡಲಾಗುವುದು, ಸರಕಾರಿ ಕಾಮಗಾರಿಗಳಿಗೆ ಸಕಾಲದಲ್ಲಿ ಮರಳು ಪೂರೈಕೆಯಾಗಿ ಕಾಮಗಾರಿಗಳನ್ನು ಆದಷ್ಟು ಕನಿಷ್ಟ ಸಮಯದಲ್ಲಿ ಪೂರ್ತಿಗೊಳಿಸುವಂತೆ ನೋಡಿಕೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ಸ್ಯಾಂಡ್ ಬಝಾರ್ ಆ್ಯಪ್ ಮೂಲಕ ಮರಳು ಕಾಯ್ದಿರಿಸಿ, 2,3 ದಿನಗಳೊಳಗೆ ಮರಳು ದೊರಕದೇ ಇದ್ದಲ್ಲಿ ಈ ಕುರಿತು ಸಾರ್ವಜನಿಕರು ದೂರು ನೀಡಬಹುದು. ಸಾರ್ವಜನಿಕರಿಗೆ ಸುಲಭ ರೀತಿಯಲ್ಲಿ ಯೋಜನೆಗಳು ಸಕ್ರಿಯವಾಗಬೇಕು ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಹೇಳಿದರು. ಜಿಲ್ಲಾ ಖನಿಜ ಪ್ರತಿಷ್ಠಾನ ನಿಧೀಯಲ್ಲಿ ರೂ. 4.62 ಕೋಟಿ ಮೊತ್ತ ಲಭ್ಯವಿದ್ದು, ಇದನ್ನು ಗಣಿಗಾರಿಕೆಯಿಂದ ತೊಂದರೆಗೀಡಾದ ಪ್ರದೇಶಗಳ ಅಭಿವೃದ್ಧಿಗೆ ಬಳಸಲಾಗುವುದು. ಆಯಾ ಪ್ರದೇಶದ ಶಾಸಕರಿಂದ ಕ್ರಿಯಾ ಯೋಜನೆ ಪಡೆದು ಕಾಮಗಾರಿ ಅನುಷ್ಠಾನಗೊಳಿಸುವಂತೆ ಸಚಿವರು ಸೂಚಿಸಿದರು. ಡಿ.ಎಂ.ಎಫ್ ಖಾತೆಯಲ್ಲಿ ಲಭ್ಯವಿರುವ ಮೊತ್ತವನ್ನು ವಿವಿಧ ಕಾಮಗಾರಿ ಕೆಲಸಗಳಿಗೆ ಹಂಚಿಕೆ ಮಾಡಲಾಗಿರುತ್ತದೆ. ಸಮಿತಿ ಸಭೆಯ ತೀರ್ಮಾನದಂತೆ ವಿಧಾನ ಸಭಾ ಕ್ಷೇತ್ರಕ್ಕೆ ಅನುಗುಣವಾಗಿ ಕಾಮಗಾರಿ ಹಾಗೂ ಅನುದಾನದ ಮೊತ್ತವನ್ನು ಹಂಚಿಕೆ ಮಾಡಲಾಗಿದ್ದು, ಸಂಬಂಧಪಟ್ಟ ವಿಧಾನ ಸಭಾ ಶಾಸಕರಿಗೆ ಕಳುಹಿಸಿಕೊಡಲಾಗಿರುತ್ತದೆ. ತಮ್ಮ ಕ್ಷೇತ್ರಗಳಿಗೆ ಅಗತ್ಯವಿರುವ ಕಾಮಗಾರಿಗಳ ಪಟ್ಟಿಯನ್ನು ಸಭೆಯ ಗಮನಕ್ಕೆ ತರಲಾಯಿತು.

ಸಭೆಯಲ್ಲಿ ದ.ಕ ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್, ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಮಹಾನಗರಪಾಲಿಕೆ ಆಯುಕ್ತ ಅಜಿತ್ ಹೆಗ್ಡೆ, ದ.ಕ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

6 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

7 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

16 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

17 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

17 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

22 hours ago