Advertisement
ಸುದ್ದಿಗಳು

ಸಾರ್ವಜನಿಕರ ಸಹಭಾಗಿತ್ವ ಇದ್ದರೆ ಮೂಲಭೂತ ವ್ಯವಸ್ಥೆಗಳಿಗೆ ವೇಗ – ಜಯಪ್ರಸಾದ್ ಜೋಶಿ

Share

ಬಾಳಿಲ: ಯಾವುದೇ ಅಭಿವೃದ್ದಿ ಕಾರ್ಯಗಳು, ವಿದ್ಯುತ್ ಸಂಬಂಧಿತ ಕೆಲಸಗಳ ಅನುಷ್ಠಾನದಲ್ಲಿ ಸಾರ್ವಜನಿಕರ ಅಥವಾ ಬಳಕೆದಾರರ ಸಹಭಾಗಿತ್ವ ಇದ್ದರೆ ಕೆಲಸಗಳು ವೇಗ ಪಡೆಯಲು ಸಾಧ್ಯ ಎಂದು ಬೆಳ್ಳಾರೆ ಬಳಕೆದಾರರ ವೇದಿಕೆ ಸಂಚಾಲಕ ಜಯಪ್ರಸಾದ್ ಜೋಶಿ ಹೇಳಿದರು.

ಅವರು  ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲಾ ವಠಾರದಲ್ಲಿ ಭಾನುವಾರ ಭಾರತೀಯ ಕಿಸಾನ್ ಸಂಘ ಬಾಳಿಲ-ಮುಪ್ಪೇರ್ಯ ಹಾಗೂ ಭಾರತೀಯ ಕಿಸಾನ್ ಸಂಘ ಸುಳ್ಯ, ಗುತ್ತಿಗಾರು-ನಾಲ್ಕೂರು , ಎಣ್ಮೂರು ಇವುಗಳ ಸಹಭಾಗಿತ್ವದಲ್ಲಿ ನಡೆದ 16 ನೇ ವಾರ್ಷಿಕೋತ್ಸವ ಹಾಗೂ ಬಲರಾಮ ಜಯಂತಿ  ಕಾರ್ಯಕ್ರಮದಲ್ಲಿ ಮಾಡಾವು 110 ಕೆ.ವಿ. ವಿದ್ಯುತ್ ಸಬ್ ಸ್ಟೇಶನ್ ಪೂರ್ಣಗೊಳಿಸುವ ಬಗೆಗಿನ ಹೋರಾಟ ಮತ್ತು ಪರಿಣಾಮಗಳು ವಿಚಾರವಾಗಿ ನಡೆದ ವಿಚಾರಗೋಷ್ಠಿಯಲ್ಲಿ ಮಾತನಾಡಿದರು. ಮಾಡಾವು 110 ಕೆ.ವಿ. ವಿದ್ಯುತ್ ಸಬ್ ಸ್ಟೇಶನ್ ಕಾಮಗಾರಿಗೆ 2007 ರಲ್ಲಿ ಶಂಕುಸ್ಥಾಪನೆಯನ್ನು ಮಂಗಳೂರಿನಲ್ಲಿ ಮಾಡಲಾಗಿತ್ತು. 13 ವರ್ಷಗಳಿಂದ ಈ ಕೆಲಸ ನಡೆಯುತ್ತಲೇ ಇತ್ತು. ಸಾರ್ವಜನಿಕರು ಈ ಕಾರ್ಯದ ಹಿಂದೆ ಬಿದ್ದಾಗ 100 ದಿನದಲ್ಲಿ  ಶೇಕಡಾವಾರು ಕೆಲಸಗಳು ಪ್ರಗತಿ ಕಂಡಿದೆ. ಇಲಾಖೆಗಳಿಗೆ ಅದರದೇ ಆದ ಕೆಲವೊಂದು ನಿರ್ಧಾರ, ನೀತಿಗಳು ಇರುತ್ತವೆ. ಸಾರ್ವಜನಿಕರು ಈ ಸಂದರ್ಭ ಆಸಕ್ತಿ ತೋರಿದರೆ ಇಲಾಖೆಗಳಿಗೂ ಅನುಕೂಲವಾಗುತ್ತದೆ ಎಂದರು.

ಭ್ರಷ್ಟಾಚಾರ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು  ರಾಜಕೀಯ ಕಾರಣಗಳಿಂದ ಕೆಲವೊಂದು ಕೆಲಸಗಳು ಕುಂಠಿತವಾಗುತ್ತವೆ.  ಮಾಡಾವು 110 ಕೆ.ವಿ. ವಿದ್ಯುತ್ ಸಬ್ ಸ್ಟೇಶನ್  ವಿಚಾರದಲ್ಲೂ ಆರಂಭದಲ್ಲಿ ಇದೇ ಆಗಿತ್ತು. ಇಲಾಖೆಗಳಿಗೆ ಅನುಮತಿ, ಉತ್ಸಾಹದ ಕೊರತೆ ಕಂಡುಬಂದಿತ್ತು. ಬಳಿಕ ಭಾರತೀಯ ಕಿಸಾನ್ ಸಂಘವು ಆಸಕ್ತಿ ತೋರಿದ ಬಳಿಕ ಸಾರ್ವಜನಿಕರೆಲ್ಲ ಸಹಕಾರದಿಂದ ಯಶಸ್ಸಿನ ಹಾದಿಯಲ್ಲಿ ಮುಂದುವರಿಯಲು ಸಾಧ್ಯವಾಯಿತು ಎಂದು ಜಯಪ್ರಸಾದ್ ಹೇಳಿದರು. ಇಲಾಖೆಗಳ ನಡುವೆ ಸಮನ್ವಯದ ಕೊರತೆ ಇರುವ ಸಂದರ್ಭದಲ್ಲಿ ಸಾರ್ವಜನಿಕರ ಸಹಭಾಗಿತ್ವ ಅಗತ್ಯವಾಗುತ್ತದೆ. ಆಗ ಹೆಚ್ಚು ಕೆಲಸವಾಗುತ್ತದೆ ಎಂದರು.

ಮಾಡಾವು 110 ಕೆ.ವಿ. ವಿದ್ಯುತ್ ಸಬ್ ಸ್ಟೇಶನ್ ವಿಚಾರದಲ್ಲಿ ನ್ಯಾಯಾಲಯದಲ್ಲಿ ಪ್ರಕರಣಗಳು ಬೇಗ ಮುಗಿಯುವಂತೆಯೂ ಸಾರ್ವಜನಿಕರ ಪ್ರಯತ್ನವಾಗಿದೆ.ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ಗಳು ವಿದ್ಯುತ್ ಬಗ್ಗೆ ನಿರ್ಣಯ ಮಾಡಿ ಸಹಕಾರ ಮಾಡಿವೆ. ಇದೆಲ್ಲಾ ಕಾರಣಗಳಿಂದ 17 ವರ್ಷದಲ್ಲಿ ಆಗದ ಕೆಲಸವು 100 ದಿನದಲ್ಲಿ ಆಗಿದೆ ಎಂದು ಹೇಳಿದರು.

ವೇದಿಕೆಯಲ್ಲಿ  ಬಾಳಿಲ ಭಾಕಿಸಂ ಅಧ್ಯಕ್ಷ ಗೋಪಾಲಕೃಷ್ಣ ಭಟ್ ಕರ್ವಂಕಲ್ಲು , ಮಂಗಳೂರು ವಿಭಾಗ ಅಂಚೆ ಅಧೀಕ್ಷಕ‌ ಶ್ರೀಹರ್ಷ , ಗುತ್ತಿಗಾರು ಭಾಕಿಸಂ ಕಾರ್ಯದರ್ಶಿ  ಕುಮಾರಸ್ವಾಮಿ ಮೇಲ್ತೋಟ ಉಪಸ್ಥಿತರಿದ್ದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

20 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

21 hours ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

21 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

21 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

21 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

1 day ago