Advertisement
ಸುದ್ದಿಗಳು

ಸಾರ್ವಜನಿಕ ಸ್ಥಳದಲ್ಲಿ ಪಾನ್ ತಿಂದವರ ಮೇಲೆ ಕೇಸು

Share

ಮಂಗಳೂರು : ಸಾರ್ವಜನಿಕ ಸ್ಥಳಗಳಲ್ಲಿ ಪಾನ್ ಮಸಾಲ ತಿನ್ನುವವರ ವಿರುದ್ಧ ಕಾರ್ಯಾಚರಣೆ ನಡೆಸಿದ ಆಹಾರ ಸುರಕ್ಷತಾ ಅಧಿಕಾರಿಗಳು, 32 ಮಂದಿ ವಿರುದ್ಧ ಕೇಸು ದಾಖಲಿಸಿದ್ದಾರೆ.

ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಪೊಲೀಸ್ ಇಲಾಖೆಯ ತಂಡವು ಸಾರ್ವಜನಿಕ ಸ್ಥಳಗಳಲ್ಲಿ ಜಗಿಯುವ ತಂಬಾಕು ಉತ್ಪನ್ನಗಳ ಸೇವನೆ ಹಾಗೂ ಕೋಪ್ಟಾ -2003 ಕಾಯಿದೆ  ಉಲ್ಲಂಘನೆ ವಿರುದ್ದ ನಗರದ ಹೊರವಲಯದ ದೇರಳಕಟ್ಟೆ ಪರಿಸರದಲ್ಲಿ ಕಾರ್ಯಾಚರಣೆ ನಡೆಸಿತು.  ಈ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳಾದ ಬಸ್‍ಸ್ಟಾಂಡ್, ರಸ್ತೆ ಬದಿಗಳಲ್ಲಿ, ಅಂಗಡಿ ವಠಾರ ಮತ್ತಿತರ ಸ್ಥಳಗಳಲ್ಲಿ ಹಲವು ಮಂದಿ ಬಹಿರಂಗವಾಗಿಯೇ ಪಾನ್ ಮಸಾಲೆ ಹಾಗೂ ತಂಬಾಕು ಉತ್ಪನ್ನಗಳನ್ನು ತಿನ್ನುತ್ತಿದ್ದವರ ವಿರುದ್ಧ  ಸ್ಥಳದಲ್ಲಿಯೇ ಪ್ರಕರಣ ದಾಖಲಿಸಿಕೊಂಡಿದೆ.   ಒಟ್ಟು 32 ಪ್ರಕರಣ ದಾಖಲಿಸಿ ರೂ. 3100 ದಂಡ ವಿಧಿಸಲಾಯಿತು.

ಇದೇ ಸಂದರ್ಭದಲ್ಲಿ ಕೋಪ್ಟಾ ಕಾಯಿದೆ ಕುರಿತಂತೆ ಅಂಗಡಿ ಹಾಗೂ ಹೋಟೇಲ್ ಮಾಲಿಕರಿಗೆ ಮಾಹಿತಿ ನೀಡಲಾಯಿತು. ಸಾರ್ವಜನಿಕ ಸ್ಥಳಗಳಲ್ಲಿ ಪಾನ್ ಮಸಾಲ ಹಾಗೂ ತಂಬಾಕು ಉತ್ಪನ್ನಗಳನ್ನು ತಿನ್ನದಂತೆ ಗ್ರಾಹಕರಿಗೆ ಸೂಚಿಸಲು ಅಂಗಡಿ ಮಾಲೀಕರಿಗೆ ಸೂಚಿಸಲಾಯಿತು. ಅಲ್ಲದೇ, ಈ ಕುರಿತು ಸಹಕರಿಸದಿದ್ದರೆ, ಕಾಯಿದೆಯನ್ವಯ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಯಿತು.

ಜಗಿಯುವ ತಂಬಾಕು ಹಾಗೂ ಪಾನ್ ಮಸಾಲ  ಉತ್ಪನ್ನಗಳನ್ನು ಜಗಿದು ಉಗಿಯುವುದರಿಂದ ಕೋವಿಡ್ 19 ಹಾಗೂ ಇತರೆ ಸಾಂಕ್ರಾಮಿಕ ರೋಗಗಳು ಇತರರಿಗೆ ಹರಡುವ ಸಂಭವ ಅಧಿಕವಾಗಿದೆ.  ಪ್ರಸಕ್ತ ಕೋವಿಡ್ ವ್ಯಾಪಕವಾಗಿರುವುದರಿಂದ ಈ ರೀತಿ ಪಾನ್ ಮಸಾಲೆ ತಿಂದು ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು ಹೆಚ್ಚು ಅಪಾಯಕಾರಿಯಾಗಿದೆ. ಇಂತಹ ಉಗುಳನ್ನು ಇತರ ಸಾರ್ವಜನಿಕರಿಗೆ ನಡೆದುಕೊಂಡು ಹೋಗುವಾಗ ಗೊತ್ತಿಲ್ಲದೇ ಮೆಟ್ಟುವುದರಿಂದ ಇದು ಸಾಂಕ್ರಾಮಿಕ ರೋಗ ಹಬ್ಬಲೂ ಕಾರಣವಾಗುತ್ತಿದೆ.

ಈ ಕಾರ್ಯಾಚರಣೆಯಲ್ಲಿ ಹಿರಿಯ ಆಹಾರ ಸುರಕ್ಷತಾಧಿಕಾರಿ ರಾಜು, ಸಮಾಜ ಕಾರ್ಯಕರ್ತೆ ಶ್ರುತಿ ಸಾಲ್ಯಾನ್, ಕೋಣಾಜೆ ಠಾಣಾ ಪೊಲೀಸ್ ಉಪ ನಿರೀಕ್ಷಕ ಶರಣಪ್ಪ , ಸಿಬ್ಬಂದಿ ಪುನೀತ್, ವಿದ್ಯಾ ಮತ್ತಿತರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

2 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

2 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

2 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

2 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

12 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

13 hours ago