ಸಾಲಮನ್ನಾ ಅನುಷ್ಟಾನದಲ್ಲಿ ವೈಫಲ್ಯ: ಅರಂತೋಡು ಸಹಕಾರಿ ಸಂಘದ ಮುಂದೆ ರೈತ ಸಂಘದಿಂದ ಪ್ರತಿಭಟನೆ

October 31, 2019
2:58 PM

ಸುಳ್ಯ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸುಳ್ಯ ತಾಲೂಕು  ಘಟಕದ  ವತಿಯಿಂದ ಸಾಲಮನ್ನಾ ಅನುಷ್ಟಾನ ವೈಪಲ್ಯದ ವಿರುದ್ಧ ಹೋರಾಟ ಹಮ್ಮಿಕೊಂಡಿದೆ. ಅರಂತೋಡು ಸಹಕಾರಿ ಸಂಘದ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಆದರೆ  ಸಮರ್ಪಕ ಉತ್ತರ ಸಿಗದ ಕಾರಣ ಸೂಕ್ತ ಭರವಸೆ ದೊರೆಯುವ ತನಕ ಅಹೋರಾತ್ರಿ ಧರಣಿ ಮುಂದುವರಿಸುವ ನಿರ್ಣಯ ಕೈಗೊಳ್ಳಲಾಗಿದೆ.

ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ಹಮ್ಮಿಕೊಂಡ ಸಾಲಮನ್ನಾ ವಿಚಾರವಾಗಿ ಪ್ರತಿಭಟನೆ ಅರಂತೋಡು ಸಹಕಾರಿ ಸಂಘ ಎದುರು ಪ್ರತಿಭಟನೆ ನಡೆಯುತ್ತಿದೆ. ಆದರೆ ವಲಯ ಸಹಕಾರಿ ಸೂಪರ್ವೈಸರ್ ಬಾಲಕೃಷ್ಣ ಅವರು ಕೊಟ್ಟ ಭರವಸೆ ಗೆ ರೈತರು ಒಪ್ಪದೇ ಜಿಲ್ಲಾ ರೆಜಿಸ್ಟ್ರಾರ್ ಅವರೇ ಬಂದು ಸೂಕ್ತ ಭರವಸೆ ನೀಡುವ ತನಕ ಅಹೋರಾತ್ರಿ ಧರಣಿ ಮಾಡುವುದೆಂದು ತೀರ್ಮಾನಿಸಿದ್ದಾರೆ .

ಪ್ರತಿಭಟನೆಯಲ್ಲಿ ರೈತ ಸಂಘ ರಾಜ್ಯ ಕಾರ್ಯದರ್ಶಿ ರವಿಕಿರಣ ಪುಣಚ ಅವರ ಮುಂದಾಳತ್ವ ವಹಿಸಿದ್ದಾರೆ .ರೈತಸಂಘ ಸುಳ್ಯ ತಾಲುಕ್ ಘಟಕದ ಅಧ್ಯಕ್ಷ ಲೊಲಜಾಕ್ಷ ಭೂತಕಲ್ಲು ,ಪ್ರಧಾನ ಕಾರ್ಯದರ್ಶಿ ತೀರ್ಥರಾಮ ನೆಡ್ಚಿಲು ,ಜಿಲ್ಲಾ ಕಾರ್ಯದರ್ಶಿ ದಿವಾಕರ ಪೈ ಮಜಿಗುಂಡಿ ,ಖಜಾಂಜಿ ದೇವಪ್ಪ ಕುಂಡಲಪಾಡಿ ,ಅರಂತೋಡು ವಲಯ ಅದ್ಯಕ್ಷ ತೀರ್ಥರಾಮ ಉಳುವಾರು ,ಕಾರ್ಯದರ್ಶಿ ಮೋಹನ್ ಅಡ್ತಲೆ ಮತ್ತು ಅರಂತೋಡು ,ಅಲೆಟ್ಟಿ ,ಉಬರಡ್ಕ,ಮಡಪ್ಪಾಡಿ ಜಾಲ್ಸೂರ್ ,ಅಜ್ಜಾವರ ಮುಂತಾದ ಗ್ರಾಮಗಳ ರೈತರು ಭಾಗವಹಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ
September 8, 2026
9:38 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?
September 8, 2026
3:15 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror