ಸುದ್ದಿಗಳು

ಸಾಲಮನ್ನಾ ಅನುಷ್ಟಾನದಲ್ಲಿ ವೈಫಲ್ಯ: ಅರಂತೋಡು ಸಹಕಾರಿ ಸಂಘದ ಮುಂದೆ ರೈತ ಸಂಘದಿಂದ ಪ್ರತಿಭಟನೆ

Share

ಸುಳ್ಯ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸುಳ್ಯ ತಾಲೂಕು  ಘಟಕದ  ವತಿಯಿಂದ ಸಾಲಮನ್ನಾ ಅನುಷ್ಟಾನ ವೈಪಲ್ಯದ ವಿರುದ್ಧ ಹೋರಾಟ ಹಮ್ಮಿಕೊಂಡಿದೆ. ಅರಂತೋಡು ಸಹಕಾರಿ ಸಂಘದ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಆದರೆ  ಸಮರ್ಪಕ ಉತ್ತರ ಸಿಗದ ಕಾರಣ ಸೂಕ್ತ ಭರವಸೆ ದೊರೆಯುವ ತನಕ ಅಹೋರಾತ್ರಿ ಧರಣಿ ಮುಂದುವರಿಸುವ ನಿರ್ಣಯ ಕೈಗೊಳ್ಳಲಾಗಿದೆ.

ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ಹಮ್ಮಿಕೊಂಡ ಸಾಲಮನ್ನಾ ವಿಚಾರವಾಗಿ ಪ್ರತಿಭಟನೆ ಅರಂತೋಡು ಸಹಕಾರಿ ಸಂಘ ಎದುರು ಪ್ರತಿಭಟನೆ ನಡೆಯುತ್ತಿದೆ. ಆದರೆ ವಲಯ ಸಹಕಾರಿ ಸೂಪರ್ವೈಸರ್ ಬಾಲಕೃಷ್ಣ ಅವರು ಕೊಟ್ಟ ಭರವಸೆ ಗೆ ರೈತರು ಒಪ್ಪದೇ ಜಿಲ್ಲಾ ರೆಜಿಸ್ಟ್ರಾರ್ ಅವರೇ ಬಂದು ಸೂಕ್ತ ಭರವಸೆ ನೀಡುವ ತನಕ ಅಹೋರಾತ್ರಿ ಧರಣಿ ಮಾಡುವುದೆಂದು ತೀರ್ಮಾನಿಸಿದ್ದಾರೆ .

ಪ್ರತಿಭಟನೆಯಲ್ಲಿ ರೈತ ಸಂಘ ರಾಜ್ಯ ಕಾರ್ಯದರ್ಶಿ ರವಿಕಿರಣ ಪುಣಚ ಅವರ ಮುಂದಾಳತ್ವ ವಹಿಸಿದ್ದಾರೆ .ರೈತಸಂಘ ಸುಳ್ಯ ತಾಲುಕ್ ಘಟಕದ ಅಧ್ಯಕ್ಷ ಲೊಲಜಾಕ್ಷ ಭೂತಕಲ್ಲು ,ಪ್ರಧಾನ ಕಾರ್ಯದರ್ಶಿ ತೀರ್ಥರಾಮ ನೆಡ್ಚಿಲು ,ಜಿಲ್ಲಾ ಕಾರ್ಯದರ್ಶಿ ದಿವಾಕರ ಪೈ ಮಜಿಗುಂಡಿ ,ಖಜಾಂಜಿ ದೇವಪ್ಪ ಕುಂಡಲಪಾಡಿ ,ಅರಂತೋಡು ವಲಯ ಅದ್ಯಕ್ಷ ತೀರ್ಥರಾಮ ಉಳುವಾರು ,ಕಾರ್ಯದರ್ಶಿ ಮೋಹನ್ ಅಡ್ತಲೆ ಮತ್ತು ಅರಂತೋಡು ,ಅಲೆಟ್ಟಿ ,ಉಬರಡ್ಕ,ಮಡಪ್ಪಾಡಿ ಜಾಲ್ಸೂರ್ ,ಅಜ್ಜಾವರ ಮುಂತಾದ ಗ್ರಾಮಗಳ ರೈತರು ಭಾಗವಹಿಸಿದ್ದಾರೆ.

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 09-03-2025 | ಮತ್ತಷ್ಟು ತಾಪಮಾನ ಏರಿಕೆ ಸಾಧ್ಯತೆ | ಮಾ.18 ರಿಂದ ಕೆಲವು ಕಡೆ ಮಳೆ ನಿರೀಕ್ಷೆ |

ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದ್ದು, ಮಾರ್ಚ್ 11 ಹಾಗೂ 12ರಂದು…

6 hours ago

ಪಂಚಗ್ರಹಿ ಯೋಗವು ಕೆಲವು ರಾಶಿಗಳಿಗೆ ವಿಶೇಷ ಅನುಕೂಲ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದಾ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

9 hours ago

ಅಡಿಕೆ ಬೆಲೆ ಏರಿಕೆಯಾಗುವ ಸುದ್ದಿ ಭಾರತದಲ್ಲಿ ಮಾತ್ರವಲ್ಲ ವಿದೇಶದಲ್ಲೂ ಸದ್ದಾಗುತ್ತಿದೆ….!

ಮಾರುಕಟ್ಟೆಯಲ್ಲಿ ಅಡಿಕೆ ಇರುವ ಕೊರತೆ ಬಗ್ಗೆ ವಿದೇಶದಲ್ಲೂ ಚರ್ಚೆ ಆರಂಭವಾಗಿದೆ. ಹೀಗಾಗಿ ಭಾರತದ…

12 hours ago

ಹೊಸರುಚಿ | ಹಲಸಿನಕಾಯಿ ರಚ್ಚೆಯ ಚಟ್ನಿ

ಬಿಸಿಯಾದ ಅನ್ನದ ಜೊತೆ, ದೋಸೆ ಜೊತೆ ಹಲಸಿನಕಾಯಿ ರಚ್ಚೆಯ ಚಟ್ನಿ ಬಲು ಸೂಪರ್.‌

12 hours ago

ಲೋಕ ಅದಾಲತ್‌ನಲ್ಲಿ ಐದು ಜಿಲ್ಲೆಗಳಲ್ಲಿ 31 ಸಾವಿರಕ್ಕೂ ಅಧಿಕ ಪ್ರಕರಣ ಇತ್ಯರ್ಥ

ಲೋಕ ಅದಾಲತ್‌ನಲ್ಲಿ ಐದು ಜಿಲ್ಲೆಗಳಲ್ಲಿ 31 ಸಾವಿರಕ್ಕೂ ಅಧಿಕ ಪ್ರಕರಣ ಇತ್ಯರ್ಥಗೊಳಿಸಲಾಗಿದೆ.  ಚಿತ್ರದುರ್ಗದಲ್ಲಿ…

12 hours ago

ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ 6 ಹುಲಿ ಮರಿಗಳ ಜನನ | ಶೀಘ್ರದಲ್ಲೇ ಪ್ರವಾಸಿಗರ ವೀಕ್ಷಣೆಗೆ ಅವಕಾಶ

ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಇತ್ತೀಚೆಗೆ ಎರಡು ಹುಲಿಗಳು ಒಟ್ಟು 6 ಮರಿಗಳಿಗೆ ಜನ್ಮ…

12 hours ago