ಸುಳ್ಯ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸುಳ್ಯ ತಾಲೂಕು ಘಟಕದ ವತಿಯಿಂದ ಸಾಲಮನ್ನಾ ಅನುಷ್ಟಾನ ವೈಪಲ್ಯದ ವಿರುದ್ಧ ಹೋರಾಟ ಹಮ್ಮಿಕೊಂಡಿದೆ. ಅರಂತೋಡು ಸಹಕಾರಿ ಸಂಘದ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಆದರೆ ಸಮರ್ಪಕ ಉತ್ತರ ಸಿಗದ ಕಾರಣ ಸೂಕ್ತ ಭರವಸೆ ದೊರೆಯುವ ತನಕ ಅಹೋರಾತ್ರಿ ಧರಣಿ ಮುಂದುವರಿಸುವ ನಿರ್ಣಯ ಕೈಗೊಳ್ಳಲಾಗಿದೆ.
ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ಹಮ್ಮಿಕೊಂಡ ಸಾಲಮನ್ನಾ ವಿಚಾರವಾಗಿ ಪ್ರತಿಭಟನೆ ಅರಂತೋಡು ಸಹಕಾರಿ ಸಂಘ ಎದುರು ಪ್ರತಿಭಟನೆ ನಡೆಯುತ್ತಿದೆ. ಆದರೆ ವಲಯ ಸಹಕಾರಿ ಸೂಪರ್ವೈಸರ್ ಬಾಲಕೃಷ್ಣ ಅವರು ಕೊಟ್ಟ ಭರವಸೆ ಗೆ ರೈತರು ಒಪ್ಪದೇ ಜಿಲ್ಲಾ ರೆಜಿಸ್ಟ್ರಾರ್ ಅವರೇ ಬಂದು ಸೂಕ್ತ ಭರವಸೆ ನೀಡುವ ತನಕ ಅಹೋರಾತ್ರಿ ಧರಣಿ ಮಾಡುವುದೆಂದು ತೀರ್ಮಾನಿಸಿದ್ದಾರೆ .
ಪ್ರತಿಭಟನೆಯಲ್ಲಿ ರೈತ ಸಂಘ ರಾಜ್ಯ ಕಾರ್ಯದರ್ಶಿ ರವಿಕಿರಣ ಪುಣಚ ಅವರ ಮುಂದಾಳತ್ವ ವಹಿಸಿದ್ದಾರೆ .ರೈತಸಂಘ ಸುಳ್ಯ ತಾಲುಕ್ ಘಟಕದ ಅಧ್ಯಕ್ಷ ಲೊಲಜಾಕ್ಷ ಭೂತಕಲ್ಲು ,ಪ್ರಧಾನ ಕಾರ್ಯದರ್ಶಿ ತೀರ್ಥರಾಮ ನೆಡ್ಚಿಲು ,ಜಿಲ್ಲಾ ಕಾರ್ಯದರ್ಶಿ ದಿವಾಕರ ಪೈ ಮಜಿಗುಂಡಿ ,ಖಜಾಂಜಿ ದೇವಪ್ಪ ಕುಂಡಲಪಾಡಿ ,ಅರಂತೋಡು ವಲಯ ಅದ್ಯಕ್ಷ ತೀರ್ಥರಾಮ ಉಳುವಾರು ,ಕಾರ್ಯದರ್ಶಿ ಮೋಹನ್ ಅಡ್ತಲೆ ಮತ್ತು ಅರಂತೋಡು ,ಅಲೆಟ್ಟಿ ,ಉಬರಡ್ಕ,ಮಡಪ್ಪಾಡಿ ಜಾಲ್ಸೂರ್ ,ಅಜ್ಜಾವರ ಮುಂತಾದ ಗ್ರಾಮಗಳ ರೈತರು ಭಾಗವಹಿಸಿದ್ದಾರೆ.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…