ಸುಳ್ಯ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸುಳ್ಯ ತಾಲೂಕು ಘಟಕದ ವತಿಯಿಂದ ಸಾಲಮನ್ನಾ ಅನುಷ್ಟಾನ ವೈಪಲ್ಯದ ವಿರುದ್ಧ ಹೋರಾಟ ಹಮ್ಮಿಕೊಂಡಿದೆ. ಅರಂತೋಡು ಸಹಕಾರಿ ಸಂಘದ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಆದರೆ ಸಮರ್ಪಕ ಉತ್ತರ ಸಿಗದ ಕಾರಣ ಸೂಕ್ತ ಭರವಸೆ ದೊರೆಯುವ ತನಕ ಅಹೋರಾತ್ರಿ ಧರಣಿ ಮುಂದುವರಿಸುವ ನಿರ್ಣಯ ಕೈಗೊಳ್ಳಲಾಗಿದೆ.
ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ಹಮ್ಮಿಕೊಂಡ ಸಾಲಮನ್ನಾ ವಿಚಾರವಾಗಿ ಪ್ರತಿಭಟನೆ ಅರಂತೋಡು ಸಹಕಾರಿ ಸಂಘ ಎದುರು ಪ್ರತಿಭಟನೆ ನಡೆಯುತ್ತಿದೆ. ಆದರೆ ವಲಯ ಸಹಕಾರಿ ಸೂಪರ್ವೈಸರ್ ಬಾಲಕೃಷ್ಣ ಅವರು ಕೊಟ್ಟ ಭರವಸೆ ಗೆ ರೈತರು ಒಪ್ಪದೇ ಜಿಲ್ಲಾ ರೆಜಿಸ್ಟ್ರಾರ್ ಅವರೇ ಬಂದು ಸೂಕ್ತ ಭರವಸೆ ನೀಡುವ ತನಕ ಅಹೋರಾತ್ರಿ ಧರಣಿ ಮಾಡುವುದೆಂದು ತೀರ್ಮಾನಿಸಿದ್ದಾರೆ .
ಪ್ರತಿಭಟನೆಯಲ್ಲಿ ರೈತ ಸಂಘ ರಾಜ್ಯ ಕಾರ್ಯದರ್ಶಿ ರವಿಕಿರಣ ಪುಣಚ ಅವರ ಮುಂದಾಳತ್ವ ವಹಿಸಿದ್ದಾರೆ .ರೈತಸಂಘ ಸುಳ್ಯ ತಾಲುಕ್ ಘಟಕದ ಅಧ್ಯಕ್ಷ ಲೊಲಜಾಕ್ಷ ಭೂತಕಲ್ಲು ,ಪ್ರಧಾನ ಕಾರ್ಯದರ್ಶಿ ತೀರ್ಥರಾಮ ನೆಡ್ಚಿಲು ,ಜಿಲ್ಲಾ ಕಾರ್ಯದರ್ಶಿ ದಿವಾಕರ ಪೈ ಮಜಿಗುಂಡಿ ,ಖಜಾಂಜಿ ದೇವಪ್ಪ ಕುಂಡಲಪಾಡಿ ,ಅರಂತೋಡು ವಲಯ ಅದ್ಯಕ್ಷ ತೀರ್ಥರಾಮ ಉಳುವಾರು ,ಕಾರ್ಯದರ್ಶಿ ಮೋಹನ್ ಅಡ್ತಲೆ ಮತ್ತು ಅರಂತೋಡು ,ಅಲೆಟ್ಟಿ ,ಉಬರಡ್ಕ,ಮಡಪ್ಪಾಡಿ ಜಾಲ್ಸೂರ್ ,ಅಜ್ಜಾವರ ಮುಂತಾದ ಗ್ರಾಮಗಳ ರೈತರು ಭಾಗವಹಿಸಿದ್ದಾರೆ.
ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…
ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…