Advertisement
ಸುದ್ದಿಗಳು

ಸಾಲಮನ್ನಾ ಅನುಷ್ಟಾನದಲ್ಲಿ ವೈಫಲ್ಯ: ಅರಂತೋಡು ಸಹಕಾರಿ ಸಂಘದ ಮುಂದೆ ರೈತ ಸಂಘದಿಂದ ಪ್ರತಿಭಟನೆ

Share

ಸುಳ್ಯ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸುಳ್ಯ ತಾಲೂಕು  ಘಟಕದ  ವತಿಯಿಂದ ಸಾಲಮನ್ನಾ ಅನುಷ್ಟಾನ ವೈಪಲ್ಯದ ವಿರುದ್ಧ ಹೋರಾಟ ಹಮ್ಮಿಕೊಂಡಿದೆ. ಅರಂತೋಡು ಸಹಕಾರಿ ಸಂಘದ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಆದರೆ  ಸಮರ್ಪಕ ಉತ್ತರ ಸಿಗದ ಕಾರಣ ಸೂಕ್ತ ಭರವಸೆ ದೊರೆಯುವ ತನಕ ಅಹೋರಾತ್ರಿ ಧರಣಿ ಮುಂದುವರಿಸುವ ನಿರ್ಣಯ ಕೈಗೊಳ್ಳಲಾಗಿದೆ.

ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ಹಮ್ಮಿಕೊಂಡ ಸಾಲಮನ್ನಾ ವಿಚಾರವಾಗಿ ಪ್ರತಿಭಟನೆ ಅರಂತೋಡು ಸಹಕಾರಿ ಸಂಘ ಎದುರು ಪ್ರತಿಭಟನೆ ನಡೆಯುತ್ತಿದೆ. ಆದರೆ ವಲಯ ಸಹಕಾರಿ ಸೂಪರ್ವೈಸರ್ ಬಾಲಕೃಷ್ಣ ಅವರು ಕೊಟ್ಟ ಭರವಸೆ ಗೆ ರೈತರು ಒಪ್ಪದೇ ಜಿಲ್ಲಾ ರೆಜಿಸ್ಟ್ರಾರ್ ಅವರೇ ಬಂದು ಸೂಕ್ತ ಭರವಸೆ ನೀಡುವ ತನಕ ಅಹೋರಾತ್ರಿ ಧರಣಿ ಮಾಡುವುದೆಂದು ತೀರ್ಮಾನಿಸಿದ್ದಾರೆ .

ಪ್ರತಿಭಟನೆಯಲ್ಲಿ ರೈತ ಸಂಘ ರಾಜ್ಯ ಕಾರ್ಯದರ್ಶಿ ರವಿಕಿರಣ ಪುಣಚ ಅವರ ಮುಂದಾಳತ್ವ ವಹಿಸಿದ್ದಾರೆ .ರೈತಸಂಘ ಸುಳ್ಯ ತಾಲುಕ್ ಘಟಕದ ಅಧ್ಯಕ್ಷ ಲೊಲಜಾಕ್ಷ ಭೂತಕಲ್ಲು ,ಪ್ರಧಾನ ಕಾರ್ಯದರ್ಶಿ ತೀರ್ಥರಾಮ ನೆಡ್ಚಿಲು ,ಜಿಲ್ಲಾ ಕಾರ್ಯದರ್ಶಿ ದಿವಾಕರ ಪೈ ಮಜಿಗುಂಡಿ ,ಖಜಾಂಜಿ ದೇವಪ್ಪ ಕುಂಡಲಪಾಡಿ ,ಅರಂತೋಡು ವಲಯ ಅದ್ಯಕ್ಷ ತೀರ್ಥರಾಮ ಉಳುವಾರು ,ಕಾರ್ಯದರ್ಶಿ ಮೋಹನ್ ಅಡ್ತಲೆ ಮತ್ತು ಅರಂತೋಡು ,ಅಲೆಟ್ಟಿ ,ಉಬರಡ್ಕ,ಮಡಪ್ಪಾಡಿ ಜಾಲ್ಸೂರ್ ,ಅಜ್ಜಾವರ ಮುಂತಾದ ಗ್ರಾಮಗಳ ರೈತರು ಭಾಗವಹಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

8 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

8 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

8 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

8 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

18 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

19 hours ago