Advertisement
ಸುದ್ದಿಗಳು

ಸಾಲಮನ್ನಾ ಆದರೂ ರೈತರಿಗೆ ತಲುಪದೆ ಅನ್ಯಾಯ -ಮಲೆನಾಡು ಜನಹಿತ ರಕ್ಷಣಾ ವೇದಿಕೆ

Share

ಸುಳ್ಯ:ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿದರೂ ಸುತ್ತೋಲೆಗಳಲ್ಲಿನ ಗೊಂದಲಗಳಿಂದಾಗಿ ಅರ್ಹ ರೈತರಿಗೆ ಸಾಲ ಮನ್ನಾ ಯೋಜನೆಯ ಪ್ರಯೋಜನ ಸಿಗದೆ ಅನ್ಯಾಯ ಆಗಿದೆ ಎಂದು ಮಲೆನಾಡು ಜನಹಿತರಕ್ಷಣಾ ವೇದಿಕೆಯ ಸದಸ್ಯ ಪ್ರಸನ್ನ ಎಣ್ಮೂರು ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಕುರಿತು ರೈತರು ಸಂಘಟಿತರಾಗಿ ತೀವ್ರ ಹೋರಾಟ ನಡೆಸಬೇಕಾದ ಅನಿವಾರ್ಯತೆ ಇದೆ.

 

ತಂತ್ರಾಂಶ ಜೋಡಣೆಯ ತಾಂತ್ರಿಕ ಸಮಸ್ಯೆಗಳು ಕೂಡ ರೈತರು ಸಾಲ ಮನ್ನಾ ಸೌಲಭ್ಯ ಪಡೆಯುವುದರಿಂದ ವಂಚಿತರನ್ನಾಗಿಸಿದೆ ಎಂದರು. ಆರಂಭದಲ್ಲಿ ಡಿಬಿಡಿ ಮೂಲಕ ರೈತರ ಖಾತೆಗೆ ಸಾಲ ಮನ್ನಾ ಜಮೆ ಆಗುತ್ತದೆ ಎಂದು ರೂಪೇ ಕಾರ್ಡ್ ಸಂಖ್ಯೆ ನಮೂದಿಸಲು ಆದೇಶ ಬಂದಿತ್ತು. ಬಳಿಕ ಈ ಆದೇಶ ಸಡಿಲಿಸಿ ಡಿಬಿಡಿ ಬದಲು ನೇರವಾಗಿ ರೈತರ ಖಾತೆಗೆ ಹಣ ಜಮೆ ಆಗುತ್ತದೆ ಎಂದು ಆದೆಶ ಹೊರಡಿಸಿತ್ತು. ಇದು ತೀವ್ರ ಗೊಂದಲ ಸೃಷ್ಠಿಸಿತ್ತು. ಅಲ್ಲದೆ ಸಹಕಾರಿ ಸಂಘಗಳಿಗೆ ತುರ್ತಾಗಿ ಅಪ್‍ಲೋಡ್ ಮಾಡಿ ಮುಕ್ತಾಯಗೊಳಿಸಬೇಕಾದ ಒತ್ತಡ ಇದ್ದ ಕಾರಣ ಉಳಿತಾಯ ಖಾತೆ ಸಂಖ್ಯೆಯನ್ನು ನಂತರ ಎಡಿಟ್ ಮಾಡಿ ಅಳವಡಿಸಲು ಅವಕಾಶ ನೀಡಲಾಗುವುದು ಎಂದು ತಿಳಿಸಲಾಗಿತ್ತು. ಆ ಸಂದರ್ಭದಲ್ಲಿ ಖಾತೆ ಸಂಖ್ಯೆಯ ಸ್ಥಳದಲ್ಕಿ ‘0’ ಎಂದು ನಮೂದಿಸಿ ಸಹಕಾರಿ ಸಂಘಗಳು ಅಪ್‍ಲೋಡ್ ಮಾಡಲಾಗಿತ್ತು. ಆದರೆ ಬಳಿಕ ಉಳಿತಾಯ ಖಾತೆ ಸಂಖ್ಯೆ ತಿದ್ದುಪಡಿ ಮಾಡಲು ಇದುವರೆಗೂ ಅವಕಾಶ ನೀಡಿಲ್ಲ. ಮಾತ್ರವಲ್ಲದೆ ಆರಂಭದಲ್ಲಿ ರೂಪೇ ಕಾರ್ಡ್ ಮೂಲಕ ಅಪ್‍ಲೋಡ್ ಆದ ರೈತರಿಗೆ ಮಾತ್ರ ಸಾಲ ಮನ್ನಾ ಸೌಲಭ್ಯ ದೊರೆತಿದೆ ಎಂದರು.

ಆದುದರಿಂದ ಈ ಸಮಸ್ಯೆ ಪರಿಹರಿಸಲು ತಂತ್ರಾಂಶದಲ್ಲಿ ಉಳಿತಾಯ ಖಾತೆ ಸಂಖ್ಯೆ ಎಡಿಟ್ ಮಾಡಲು ಅವಕಾಶ ನೀಡಬೇಕು. ಅಥವಾ ಈ ಹಿಂದೆ 50 ಸಾವಿರ ಸಾಲ ಮನ್ನಾ ಯೋಜನೆ ನೀಡಿದಂತೆ ನೇರವಾಗಿ ಡಿಸಿಸಿ ಬ್ಯಾಂಕ್ ಮೂಲಕ ಸಹಕಾರ ಸಂಘಗಳ ಚಾಲ್ತಿ ಖಾತೆಗೆ ವರ್ಗಾಯಿಸಿ ನಂತರ ಸದಸ್ಯರ ಖಾತೆಗೆ ವರ್ಗಾಯಿಸಬೇಕು ಎಂದು ಆಗ್ರಹಿಸಿದರು. ಪಡಿತರ ನವೀಕರಣಗೊಳಿಸಿದ ಸಂದರ್ಭದಲ್ಲೂ ರೈತರು ಸಾಲ ಮನ್ನಾ ಯೋಜನೆಯಿಂದ ವಂಚಿತರಾಗುವ ಪ್ರಸಂಗ ಉಂಟಾಗುತಿದೆ. ವಿವಿಧ ಕಾರಣಗಳಿಗಾಗಿ ಪಡಿತರ ನವೀಕರಿಸಿದಾಗ ಹೊಸ ಕಾರ್ಡ್ ಎಂದು ನಮೂದಾಗುತ್ತದೆ. ಹಳೆಯ ಪಡಿತರ ಚೀಟಿ ನವೀಕರಿಸಿದ ಅರ್ಹ ರೈತರಿಗೆ ಸಾಲ ಮನ್ನಾ ನೀಡಬೇಕು. ಈ ಹಿಂದಿನ ಸುತ್ತೋಲೆಯಂತೆ ಆದಾಯ ತೆರಿಗೆ ಮತ್ತಿತರ ವಿಚಾರಗಳನ್ನು ನಮೂದಿಸಿದ ಕಾರಣ ತಂತ್ರಾಂಶವು ಅಂತಹ ರೈತರ ಸಾಲ ಮನ್ನಾ ಮೊತ್ತವನ್ನು ತಡೆ ಹಿಡಿದಿದೆ. ರೈತರು ಸ್ವಯಂ ತೆರಿಗೆ ಪಾವತಿದಾರರಲ್ಲದ ಕಾರಣ ಈ ಹಿಂದೆ ಈ ರೀತಿ ನಮೂದಿಸಿದ ರೈತರ ಮಾಹಿತಿ ಪಡೆದು ಅರ್ಹರಿಗೆ ಸಾಲ ಮನ್ನಾ ಸವಲತ್ತು ನೀಡಬೇಕು ಎಂದು ಅವರು ಒತ್ತಾಯಿಸಿದರು.

ನ.5 ರಂದು ಧರಣಿ ಸತ್ಯಾಗ್ರಹ ಸುದರ್ಶನ ಪಾತಿಕಲ್ಲು.

ಸಾಲ ಮನ್ನಾ ವಿಚಾರದಲ್ಲಿ ತಮ್ಮದಲ್ಲದ ತಪ್ಪಿಗೆ ಜಿಲ್ಲೆಯ ರೈತರಿಗೆ ಅನ್ಯಾಯ ಆಗಿದೆ. ಆದುದರಿಂದ ರೈತರಿಗೆ ನ್ಯಾಯ ಒದಗಿಸಿ ಕೊಡಲು ಸರಕಾರ ಕ್ರಮ ಕೈಗೊಳ್ಳಬೇಕು. ರೈತರ ಸಾಲ ಮನ್ನಾ ಮತ್ತು ಹವಾಮಾನ ಆಧಾರಿತ ಬೆಳೆ ವಿಮೆ ಫಸಲ್ ಭೀಮಾ ಮೊತ್ತವನ್ನು ರೈತರ ಖಾತೆಗೆ ಜಮೆ ಆಗಬೇಕು. ಮುಂದಿನ 15 ದಿನದಲ್ಲಿ ಪಾವತಿಯಾಗದಿದ್ದರೆ ಮಲೆನಾಡು ಜಂಟಿ ಹಿತರಕ್ಷಣಾ ವೇದಿಕೆಯ ವತಿಯಿಂದ ನ.5 ರಂದು ಪುತ್ತೂರು ಸಹಾಯಕ ಕಮೀಷನರ್ ಕಛೇರಿ ಮುಂಭಾಗದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ವೇದಿಕೆಯ ಸದಸ್ಯ ಸುದರ್ಶನ ಪಾತಿಕಲ್ಲು ಹೇಳಿದರು. ಜಯಪ್ರಕಾಶ್ ಕೂಜುಗೋಡು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

2 hours ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

2 hours ago

ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್

ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…

2 hours ago

ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ

ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…

3 hours ago

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

20 hours ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

2 days ago