Advertisement
ಸುದ್ದಿಗಳು

ಸಾಲಮನ್ನಾ ಪಾವತಿ ಮುಗಿಯದ ಗೊಂದಲ : ಕೆಡಿಪಿ ಸಭೆಯಲ್ಲೂ ಚರ್ಚೆ

Share

ಸುಳ್ಯ: ರಾಜ್ಯ ಸರಕಾರ ರೈತರ ಸಾಲಮನ್ನಾ ಮಾಡಿದೆ. ಆದರೆ ಬಂದದ್ದೆಷ್ಟು, ಸಿಕ್ಕಿದ್ದೆಷ್ಟು ? , ಯಾರಿಗೆ ಎಷ್ಟು ಸಿಕ್ಕಿದೆ, ಹೇಗೆ ಸಿಕ್ಕಿದೆ..? ಇದೆಲ್ಲಾ ಪ್ರಶ್ನೆಗಳಿಗೆ ಸೂಕ್ತ ಉತ್ತರವಿಲ್ಲ. ಕೆಡಿಪಿ ಸಭೆಯಲ್ಲೂ ಹಾಗೆಯೇ ಆಯಿತು. ಕೊನೆಗೆ ಯಾವ ರೈತರಿಗೆ ಸಾಲ ಮನ್ನಾ ಹಣ ಪಾವತಿಯಾಗಿದೆ ಯಾರದೆಲ್ಲ ಉಳಿದಿದೆ ಎಂಬುದರ ಬಗ್ಗೆ ಗ್ರಾಮವಾರು ಪಟ್ಟಿ ಸಲ್ಲಿಸುವಂತೆ ಶಾಸಕ ಅಂಗಾರ ಸೂಚಿಸಿದರು.

ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಸುಳ್ಯ ತಾಲೂಕು ಪ್ರಗತಿ ಪರಿಶೀಲನಾ ಸಭೆಯು ಶಾಸಕ ಎಸ್.ಅಂಗಾರ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ರಾಜ್ಯ ಸರಕಾರದ ಸಾಲಮನ್ನಾ ಒಂದು ಲಕ್ಷ ರೂ ರೈತರಿಗೆ ಸಲ್ಲಿಕೆಯಾಗಿವರುವ ಬಗ್ಗೆ ಮತ್ತೆ ಗೊಂದಲ ಸೃಷ್ಠಿಯಾಗಿದೆ. ವಾಣಿಜ್ಯ ಬ್ಯಾಂಕ್‍ಗಳ ಮೂಲಕ 1083 ಮಂದಿಗೆ ಮತ್ತು ಸಹಕಾರಿ ಸಂಘಗಳ ಮೂಲಕ 14,114 ಮಂದಿಯ ಖಾತೆಗೆ ನೇರವಾಗಿ ಒಂದು ಲಕ್ಷ ರೂ ಪಾವತಿಯಾಗಿದೆ ಎಂದು ಎರಡು ದಿನಗಳ ಹಿಂದೆ ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ ನೇತೃತ್ವದಲ್ಲಿ ನಡೆದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದ್ದರು. ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿಯೂ ಐವನ್ ಡಿಸೋಜ ಇದನ್ನೇ ಪತ್ರಕರ್ತರಿಗೆ ಹೇಳಿದ್ದರು.

ಗುರುವಾರ ನಡೆದ ಕೆ.ಡಿ.ಪಿ ಸಭೆಯಲ್ಲಿ ಸಹಕಾರಿ ಇಲಾಖೆಯ ಪ್ರಗತಿ ಪರಿಶೀಲನಾ ವೇಳೆಯಲ್ಲಿ ಕೊಟ್ಟ ಮಾಹಿತಿ ಇದಕ್ಕಿಂದ ಭಿನ್ನವಾಗಿತ್ತು. ಕರ್ನಾಟಕ ಸರಕಾರದ ಸಾಲಮನ್ನಾ ಯೋಜನೆಯಡಿ ಒಂದು ಲಕ್ಷ ಸಾಲ ಮನ್ನಾ ಪಡೆಯಲು 14,114 ಫಲಾನುಭವಿಗಳಿದ್ದು 118.12 ಕೋಟಿ ಬೇಡಿಕೆ ಇರುತ್ತದೆ. ಈ ಪೈಕಿ 5,373 ರೈತರಿಗೆ 37.92 ಕೋಟಿ ರೂ  ಬಿಡುಗಡೆ ಆಗಿರುತ್ತದೆ. 8,771 ರೈತರಿಗೆ 80.20 ಕೋಟಿ ಬಿಡುಗಡೆಗೆ ಬಾಕಿ ಇದೆ ಎಂದು ಸಹಕಾರಿ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು. ಇದು ಸಭೆಯಲ್ಲಿ ಚರ್ಚೆಗೆ ಕಾರಣವಾಯಿತು.  ಯಾವ ರೈತರಿಗೆ ಸಾಲ ಮನ್ನಾ ಹಣ ಪಾವತಿಯಾಗಿದೆ ಯಾರದೆಲ್ಲ ಉಳಿದಿದೆ ಎಂಬುದರ ಬಗ್ಗೆ ಗ್ರಾಮವಾರು ಪಟ್ಟಿ ಸಲ್ಲಿಸುವಂತೆ ಶಾಸಕರು ಸೂಚಿಸಿದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ

18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…

14 minutes ago

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…

45 minutes ago

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

9 hours ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

9 hours ago

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

1 day ago

ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ

ಬಿದದಿ ಎಐ ಟೌನ್‌ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…

1 day ago