Advertisement
ಸುದ್ದಿಗಳು

ಸಾಲಮನ್ನಾ ಪಾವತಿ ಮುಗಿಯದ ಗೊಂದಲ : ಕೆಡಿಪಿ ಸಭೆಯಲ್ಲೂ ಚರ್ಚೆ

Share

ಸುಳ್ಯ: ರಾಜ್ಯ ಸರಕಾರ ರೈತರ ಸಾಲಮನ್ನಾ ಮಾಡಿದೆ. ಆದರೆ ಬಂದದ್ದೆಷ್ಟು, ಸಿಕ್ಕಿದ್ದೆಷ್ಟು ? , ಯಾರಿಗೆ ಎಷ್ಟು ಸಿಕ್ಕಿದೆ, ಹೇಗೆ ಸಿಕ್ಕಿದೆ..? ಇದೆಲ್ಲಾ ಪ್ರಶ್ನೆಗಳಿಗೆ ಸೂಕ್ತ ಉತ್ತರವಿಲ್ಲ. ಕೆಡಿಪಿ ಸಭೆಯಲ್ಲೂ ಹಾಗೆಯೇ ಆಯಿತು. ಕೊನೆಗೆ ಯಾವ ರೈತರಿಗೆ ಸಾಲ ಮನ್ನಾ ಹಣ ಪಾವತಿಯಾಗಿದೆ ಯಾರದೆಲ್ಲ ಉಳಿದಿದೆ ಎಂಬುದರ ಬಗ್ಗೆ ಗ್ರಾಮವಾರು ಪಟ್ಟಿ ಸಲ್ಲಿಸುವಂತೆ ಶಾಸಕ ಅಂಗಾರ ಸೂಚಿಸಿದರು.

ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಸುಳ್ಯ ತಾಲೂಕು ಪ್ರಗತಿ ಪರಿಶೀಲನಾ ಸಭೆಯು ಶಾಸಕ ಎಸ್.ಅಂಗಾರ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ರಾಜ್ಯ ಸರಕಾರದ ಸಾಲಮನ್ನಾ ಒಂದು ಲಕ್ಷ ರೂ ರೈತರಿಗೆ ಸಲ್ಲಿಕೆಯಾಗಿವರುವ ಬಗ್ಗೆ ಮತ್ತೆ ಗೊಂದಲ ಸೃಷ್ಠಿಯಾಗಿದೆ. ವಾಣಿಜ್ಯ ಬ್ಯಾಂಕ್‍ಗಳ ಮೂಲಕ 1083 ಮಂದಿಗೆ ಮತ್ತು ಸಹಕಾರಿ ಸಂಘಗಳ ಮೂಲಕ 14,114 ಮಂದಿಯ ಖಾತೆಗೆ ನೇರವಾಗಿ ಒಂದು ಲಕ್ಷ ರೂ ಪಾವತಿಯಾಗಿದೆ ಎಂದು ಎರಡು ದಿನಗಳ ಹಿಂದೆ ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ ನೇತೃತ್ವದಲ್ಲಿ ನಡೆದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದ್ದರು. ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿಯೂ ಐವನ್ ಡಿಸೋಜ ಇದನ್ನೇ ಪತ್ರಕರ್ತರಿಗೆ ಹೇಳಿದ್ದರು.

ಗುರುವಾರ ನಡೆದ ಕೆ.ಡಿ.ಪಿ ಸಭೆಯಲ್ಲಿ ಸಹಕಾರಿ ಇಲಾಖೆಯ ಪ್ರಗತಿ ಪರಿಶೀಲನಾ ವೇಳೆಯಲ್ಲಿ ಕೊಟ್ಟ ಮಾಹಿತಿ ಇದಕ್ಕಿಂದ ಭಿನ್ನವಾಗಿತ್ತು. ಕರ್ನಾಟಕ ಸರಕಾರದ ಸಾಲಮನ್ನಾ ಯೋಜನೆಯಡಿ ಒಂದು ಲಕ್ಷ ಸಾಲ ಮನ್ನಾ ಪಡೆಯಲು 14,114 ಫಲಾನುಭವಿಗಳಿದ್ದು 118.12 ಕೋಟಿ ಬೇಡಿಕೆ ಇರುತ್ತದೆ. ಈ ಪೈಕಿ 5,373 ರೈತರಿಗೆ 37.92 ಕೋಟಿ ರೂ  ಬಿಡುಗಡೆ ಆಗಿರುತ್ತದೆ. 8,771 ರೈತರಿಗೆ 80.20 ಕೋಟಿ ಬಿಡುಗಡೆಗೆ ಬಾಕಿ ಇದೆ ಎಂದು ಸಹಕಾರಿ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು. ಇದು ಸಭೆಯಲ್ಲಿ ಚರ್ಚೆಗೆ ಕಾರಣವಾಯಿತು.  ಯಾವ ರೈತರಿಗೆ ಸಾಲ ಮನ್ನಾ ಹಣ ಪಾವತಿಯಾಗಿದೆ ಯಾರದೆಲ್ಲ ಉಳಿದಿದೆ ಎಂಬುದರ ಬಗ್ಗೆ ಗ್ರಾಮವಾರು ಪಟ್ಟಿ ಸಲ್ಲಿಸುವಂತೆ ಶಾಸಕರು ಸೂಚಿಸಿದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

12 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

20 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

21 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

21 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

21 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

1 day ago