Advertisement
ಸುದ್ದಿಗಳು

ಸಾಲಮನ್ನಾ ಪಾವತಿ ಮುಗಿಯದ ಗೊಂದಲ : ಕೆಡಿಪಿ ಸಭೆಯಲ್ಲೂ ಚರ್ಚೆ

Share

ಸುಳ್ಯ: ರಾಜ್ಯ ಸರಕಾರ ರೈತರ ಸಾಲಮನ್ನಾ ಮಾಡಿದೆ. ಆದರೆ ಬಂದದ್ದೆಷ್ಟು, ಸಿಕ್ಕಿದ್ದೆಷ್ಟು ? , ಯಾರಿಗೆ ಎಷ್ಟು ಸಿಕ್ಕಿದೆ, ಹೇಗೆ ಸಿಕ್ಕಿದೆ..? ಇದೆಲ್ಲಾ ಪ್ರಶ್ನೆಗಳಿಗೆ ಸೂಕ್ತ ಉತ್ತರವಿಲ್ಲ. ಕೆಡಿಪಿ ಸಭೆಯಲ್ಲೂ ಹಾಗೆಯೇ ಆಯಿತು. ಕೊನೆಗೆ ಯಾವ ರೈತರಿಗೆ ಸಾಲ ಮನ್ನಾ ಹಣ ಪಾವತಿಯಾಗಿದೆ ಯಾರದೆಲ್ಲ ಉಳಿದಿದೆ ಎಂಬುದರ ಬಗ್ಗೆ ಗ್ರಾಮವಾರು ಪಟ್ಟಿ ಸಲ್ಲಿಸುವಂತೆ ಶಾಸಕ ಅಂಗಾರ ಸೂಚಿಸಿದರು.

ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಸುಳ್ಯ ತಾಲೂಕು ಪ್ರಗತಿ ಪರಿಶೀಲನಾ ಸಭೆಯು ಶಾಸಕ ಎಸ್.ಅಂಗಾರ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ರಾಜ್ಯ ಸರಕಾರದ ಸಾಲಮನ್ನಾ ಒಂದು ಲಕ್ಷ ರೂ ರೈತರಿಗೆ ಸಲ್ಲಿಕೆಯಾಗಿವರುವ ಬಗ್ಗೆ ಮತ್ತೆ ಗೊಂದಲ ಸೃಷ್ಠಿಯಾಗಿದೆ. ವಾಣಿಜ್ಯ ಬ್ಯಾಂಕ್‍ಗಳ ಮೂಲಕ 1083 ಮಂದಿಗೆ ಮತ್ತು ಸಹಕಾರಿ ಸಂಘಗಳ ಮೂಲಕ 14,114 ಮಂದಿಯ ಖಾತೆಗೆ ನೇರವಾಗಿ ಒಂದು ಲಕ್ಷ ರೂ ಪಾವತಿಯಾಗಿದೆ ಎಂದು ಎರಡು ದಿನಗಳ ಹಿಂದೆ ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ ನೇತೃತ್ವದಲ್ಲಿ ನಡೆದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದ್ದರು. ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿಯೂ ಐವನ್ ಡಿಸೋಜ ಇದನ್ನೇ ಪತ್ರಕರ್ತರಿಗೆ ಹೇಳಿದ್ದರು.

ಗುರುವಾರ ನಡೆದ ಕೆ.ಡಿ.ಪಿ ಸಭೆಯಲ್ಲಿ ಸಹಕಾರಿ ಇಲಾಖೆಯ ಪ್ರಗತಿ ಪರಿಶೀಲನಾ ವೇಳೆಯಲ್ಲಿ ಕೊಟ್ಟ ಮಾಹಿತಿ ಇದಕ್ಕಿಂದ ಭಿನ್ನವಾಗಿತ್ತು. ಕರ್ನಾಟಕ ಸರಕಾರದ ಸಾಲಮನ್ನಾ ಯೋಜನೆಯಡಿ ಒಂದು ಲಕ್ಷ ಸಾಲ ಮನ್ನಾ ಪಡೆಯಲು 14,114 ಫಲಾನುಭವಿಗಳಿದ್ದು 118.12 ಕೋಟಿ ಬೇಡಿಕೆ ಇರುತ್ತದೆ. ಈ ಪೈಕಿ 5,373 ರೈತರಿಗೆ 37.92 ಕೋಟಿ ರೂ  ಬಿಡುಗಡೆ ಆಗಿರುತ್ತದೆ. 8,771 ರೈತರಿಗೆ 80.20 ಕೋಟಿ ಬಿಡುಗಡೆಗೆ ಬಾಕಿ ಇದೆ ಎಂದು ಸಹಕಾರಿ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು. ಇದು ಸಭೆಯಲ್ಲಿ ಚರ್ಚೆಗೆ ಕಾರಣವಾಯಿತು.  ಯಾವ ರೈತರಿಗೆ ಸಾಲ ಮನ್ನಾ ಹಣ ಪಾವತಿಯಾಗಿದೆ ಯಾರದೆಲ್ಲ ಉಳಿದಿದೆ ಎಂಬುದರ ಬಗ್ಗೆ ಗ್ರಾಮವಾರು ಪಟ್ಟಿ ಸಲ್ಲಿಸುವಂತೆ ಶಾಸಕರು ಸೂಚಿಸಿದರು.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

5 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

6 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

7 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

13 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

19 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

1 day ago