Advertisement
ಸುದ್ದಿಗಳು

ಸಾಲಮನ್ನಾ ಪಾವತಿ ಮುಗಿಯದ ಗೊಂದಲ : ಕೆಡಿಪಿ ಸಭೆಯಲ್ಲೂ ಚರ್ಚೆ

Share

ಸುಳ್ಯ: ರಾಜ್ಯ ಸರಕಾರ ರೈತರ ಸಾಲಮನ್ನಾ ಮಾಡಿದೆ. ಆದರೆ ಬಂದದ್ದೆಷ್ಟು, ಸಿಕ್ಕಿದ್ದೆಷ್ಟು ? , ಯಾರಿಗೆ ಎಷ್ಟು ಸಿಕ್ಕಿದೆ, ಹೇಗೆ ಸಿಕ್ಕಿದೆ..? ಇದೆಲ್ಲಾ ಪ್ರಶ್ನೆಗಳಿಗೆ ಸೂಕ್ತ ಉತ್ತರವಿಲ್ಲ. ಕೆಡಿಪಿ ಸಭೆಯಲ್ಲೂ ಹಾಗೆಯೇ ಆಯಿತು. ಕೊನೆಗೆ ಯಾವ ರೈತರಿಗೆ ಸಾಲ ಮನ್ನಾ ಹಣ ಪಾವತಿಯಾಗಿದೆ ಯಾರದೆಲ್ಲ ಉಳಿದಿದೆ ಎಂಬುದರ ಬಗ್ಗೆ ಗ್ರಾಮವಾರು ಪಟ್ಟಿ ಸಲ್ಲಿಸುವಂತೆ ಶಾಸಕ ಅಂಗಾರ ಸೂಚಿಸಿದರು.

ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಸುಳ್ಯ ತಾಲೂಕು ಪ್ರಗತಿ ಪರಿಶೀಲನಾ ಸಭೆಯು ಶಾಸಕ ಎಸ್.ಅಂಗಾರ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ರಾಜ್ಯ ಸರಕಾರದ ಸಾಲಮನ್ನಾ ಒಂದು ಲಕ್ಷ ರೂ ರೈತರಿಗೆ ಸಲ್ಲಿಕೆಯಾಗಿವರುವ ಬಗ್ಗೆ ಮತ್ತೆ ಗೊಂದಲ ಸೃಷ್ಠಿಯಾಗಿದೆ. ವಾಣಿಜ್ಯ ಬ್ಯಾಂಕ್‍ಗಳ ಮೂಲಕ 1083 ಮಂದಿಗೆ ಮತ್ತು ಸಹಕಾರಿ ಸಂಘಗಳ ಮೂಲಕ 14,114 ಮಂದಿಯ ಖಾತೆಗೆ ನೇರವಾಗಿ ಒಂದು ಲಕ್ಷ ರೂ ಪಾವತಿಯಾಗಿದೆ ಎಂದು ಎರಡು ದಿನಗಳ ಹಿಂದೆ ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ ನೇತೃತ್ವದಲ್ಲಿ ನಡೆದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದ್ದರು. ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿಯೂ ಐವನ್ ಡಿಸೋಜ ಇದನ್ನೇ ಪತ್ರಕರ್ತರಿಗೆ ಹೇಳಿದ್ದರು.

ಗುರುವಾರ ನಡೆದ ಕೆ.ಡಿ.ಪಿ ಸಭೆಯಲ್ಲಿ ಸಹಕಾರಿ ಇಲಾಖೆಯ ಪ್ರಗತಿ ಪರಿಶೀಲನಾ ವೇಳೆಯಲ್ಲಿ ಕೊಟ್ಟ ಮಾಹಿತಿ ಇದಕ್ಕಿಂದ ಭಿನ್ನವಾಗಿತ್ತು. ಕರ್ನಾಟಕ ಸರಕಾರದ ಸಾಲಮನ್ನಾ ಯೋಜನೆಯಡಿ ಒಂದು ಲಕ್ಷ ಸಾಲ ಮನ್ನಾ ಪಡೆಯಲು 14,114 ಫಲಾನುಭವಿಗಳಿದ್ದು 118.12 ಕೋಟಿ ಬೇಡಿಕೆ ಇರುತ್ತದೆ. ಈ ಪೈಕಿ 5,373 ರೈತರಿಗೆ 37.92 ಕೋಟಿ ರೂ  ಬಿಡುಗಡೆ ಆಗಿರುತ್ತದೆ. 8,771 ರೈತರಿಗೆ 80.20 ಕೋಟಿ ಬಿಡುಗಡೆಗೆ ಬಾಕಿ ಇದೆ ಎಂದು ಸಹಕಾರಿ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು. ಇದು ಸಭೆಯಲ್ಲಿ ಚರ್ಚೆಗೆ ಕಾರಣವಾಯಿತು.  ಯಾವ ರೈತರಿಗೆ ಸಾಲ ಮನ್ನಾ ಹಣ ಪಾವತಿಯಾಗಿದೆ ಯಾರದೆಲ್ಲ ಉಳಿದಿದೆ ಎಂಬುದರ ಬಗ್ಗೆ ಗ್ರಾಮವಾರು ಪಟ್ಟಿ ಸಲ್ಲಿಸುವಂತೆ ಶಾಸಕರು ಸೂಚಿಸಿದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

5 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

16 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

16 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

16 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

22 hours ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

1 day ago