ಸುದ್ದಿಗಳು

ಸಾಲಮನ್ನಾ ಯೋಜನೆಯ ಅನುಷ್ಠಾನದಲ್ಲಿನ ಗೊಂದಲ ಸರಿಪಡಿಸಲು ಶಾಸಕ ಅಂಗಾರ ಆಗ್ರಹ

Share

ಸುಳ್ಯ: ರಾಜ್ಯ ಸರ್ಕಾರ ಘೋಷಣೆ ಮಾಡಿದ ಒಂದು ಲಕ್ಷ ರೂ ತನಕದ ಸಾಲ ಮನ್ನಾ ಯೋಜನೆಯ ಅನುಷ್ಠಾನದಲ್ಲಿ ಪ್ರಾರಂಭಿಕ ಹಂತದಲ್ಲಿ ಸರ್ಕಾರದ ಆದೇಶಗಳಿಂದಾಗಿ ಉಂಟಾಗಿರುವ ಸಮಸ್ಯೆಯನ್ನು ಪರಿಹರಿಸಬೇಕೆಂದು ಶಾಸಕ ಎಸ್.ಅಂಗಾರ ರಾಜ್ಯ ಗೃಹ ಹಾಗೂ ಸಹಕಾರ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಆಗ್ರಹಿಸಿದ್ದಾರೆ.

ತಾಂತ್ರಿಕ ಕಾರಣಗಳಿಂದಾಗಿ ಸಾಲಮನ್ನಾ ವಂಚಿತರಾಗಬಹುದಾದ ರೈತರ ಹಿತದೃಷ್ಠಿಯಿಂದ ಉಂಟಾಗಿರುವ ತಾಂತ್ರಿಕ ಸಮಸ್ಯೆಗಳನ್ನು ಸರಿಪಡಿಸಲು ಅವಕಾಶ ನೀಡಿ ಎಲ್ಲಾ ಅರ್ಹ ರೈತರಿಗೆ ಸಾಲ ಮನ್ನಾ ಸವಲತ್ತು ಸಿಗುವಂತೆ ತಂತ್ರಾಂಶದಲ್ಲಿ ಅವಕಾಶ ಮಾಡಬೇಕೆಂದು ಸಚಿವರಲ್ಲಿ ವಿನಂತಿಸಲಾಗಿದೆ. ಈ ಕುರಿತು ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಸಚಿವರು ಶಾಸಕರಿಗೆ ಭರವಸೆ ನೀಡಿದ್ದಾರೆ. ಪ್ರಾಥಮಿಕ ಸಹಕಾರಿ ಸಂಘಗಳು ಸದಸ್ಯರ ರೂಪೇ ಕೆ.ಸಿ.ಸಿ ಖಾತೆಗಳ ಸಂಖ್ಯೆಯನ್ನು ನಮೂದಿಸದೇ ಇದ್ದುದರಿಂದ ಬಹಳಷ್ಟು ರೈತರ ಸಾಲ ಮನ್ನಾ ಮೊಬಲಗು ಜಮಾ ಆಗದೆ ಬಾಕಿ ಇರುತ್ತದೆ ಈ ಬಗ್ಗೆ ಮಾರ್ಚ್ ತನಕ ಸಾಲ ಮನ್ನಾ ಮೊತ್ತ ಬಿಡುಗಡೆಯಾದ ಖಾತೆಗಳಿಗೆ ಎಡಿಟಿಂಗ್ ಅವಕಾಶ ನೀಡುವುದರ ಮೂಲಕ ಸದಸ್ಯರ ರೂಪೇ ಖಾತೆ ಸಂಖ್ಯೆ ನಮೂದಿಸಲು ಅವಕಾಶ ನೀಡಿರುತ್ತಾರೆ.

ಮಾರ್ಚ್ 2019ರ ನಂತರ ಬಿಡುಗಡೆಯಾದ ಹಾಗು ಬಿಡುಗಡೆಯಾಗಲಿರುವ ಖಾತೆಗಳಿಗೂ ಎಡಿಟಿಂಗ್ ಅವಕಾಶ ನೀಡಬೇಕು, ಸದಸ್ಯರ ನಂಬ್ರದ ಕಾಲಂ ಸರಿಯಾಗಿ ಕಾಣುವಂತೆ ಮಾಡಲು ಕ್ರಮ ಕೈಗೊಳ್ಳಬೇಕು, ಪಡಿತರ ಚೀಟಿಗೆ ಆಧಾರ್ ಲಿಂಕ್ ಮಾಡಿದರಿಂದ ಅದು ಹೊಸ ಪಡಿತರ ಚೀಟಿ ಎಂದು ನಮೂದಾಗುವ ಕಾರಣ ಹಲವು ಮಂದಿ ಕೃಷಿಕರು ಸಾಲಮನ್ನಾ ಸೌಲಭ್ಯ ಪಡೆಯುವುದರಿಂದ ವಂಚಿತರಾಗಿದ್ದಾರೆ. ಅರ್ಹರಿಗೆ ಸಾಲಮನ್ನಾ ಸೌಲಭ್ಯ ದೊರಕಿಸಲು ಕ್ರಮ ಕೈಗೊಳ್ಳಬೇಕು. ವಿವರ ನಮೂದಿಸುವಾಗ ತಪ್ಪುಗಳು ಉಂಟಾಗಿರುವುದನ್ನು ಸರಿಪಡಿಸಲು ಅವಕಾಶ ನೀಡಬೇಕು, ಎಫ್‍ಎಸ್‍ಡಿ ಇನ್ ಕಂಪ್ಲೀಟ್ ಮತ್ತು ಪ್ಯಾಕ್ಸ್ ಡಿಇಒ ಲಾಗಿನ್‍ನಲ್ಲಿ ವಿಲೇವಾರಿಗೆ ಬಾಕಿ ಇರುವ ಪ್ರಕರಣವನ್ನು ಇತ್ಯರ್ಥ ಪಡಿಸಲು ತಾಲೂಕು ಸಮಿತಿಗೆ ವರ್ಗಾಯಿಸಬೇಕು, ಹಿಂದಿನ ಆದೇಶದಂತೆ ಆದಾಯ ತರಿಗೆ, ಪಿಂಚಣಿ, ವೇತನ ಮಾಹಿತಿ ಅಪ್‍ಲೋಡ್ ಆಗಿದ್ದು ಇದರಿಂದ ಹಲವು ಮಂದಿ ಸೌಲಭ್ಯ ವಂಚಿತರಾಗಿದ್ದಾರೆ ಇದನ್ನು ತಿದ್ದುಪಡಿಗೆ ಅವಕಾಶ ನೀಡಬೇಕು, ಸಾಲಮನ್ನಾ ಸೌಲಭ್ಯವನ್ನು ಸಹಕಾರಿ ಸಂಘಗಳ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನಲ್ಲಿರುವ ಖಾತೆಗೆ ಬಿಡುಗಡೆ ಮಾಡಿ ಸಹಕಾರಿ ಸಂಘಗಳ ಮೂಲಕ ರೈತರಿಗೆ ತಕ್ಷಣ ದೊರಕಿಸುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು, ಟಿ.ಎಲ್.ಸಿ ಸ್ಕ್ಯಾನ್ ಅಪ್‍ಲೋಡ್ ಪೆಂಡಿಂಗ್ ಪ್ರಕರಣವನ್ನು ತಾಲೂಕು ಸಮಿತಿಗೆ ವರ್ಗಾಯಿಸಬೇಕು, ಜಿ.ಪಿ.ಎ ನೀಡಿದ ಪ್ರಕರಣಗಳಿಗೆ ಸಾಲ ಮನ್ನಾ ಸವಲತ್ತು ಅವಕಾಶ ನೀಡಬೇಕು, ಸಾಲ ಪಡೆದ ಬಳಿಕ ಪಹಣಿ ಪೋಡಿ ದುರಸ್ತಿ, ಖಾತಾ ಬದಲಾವಣೆ, ಇತ್ಯಾದಿ ಕಾರಣಗಳಿಂದ ಪಹಣಿಯಲ್ಲಿ ಹೆಸರು ಬದಲಾಗಿದ್ದು ಇಂತಹಾ ಪ್ರಕರಣಗಳನ್ನು ತಾಲೂಕು ಸಮಿತಿಯಲ್ಲಿ ವಿಲೇವಾರಿಗೆ ಅವಕಾಶ ನೀಡಬೇಕು ಎಂದು ಮನವಿ ಆಗ್ರಹಿಸಲಾಗಿದೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಂದು ವರ್ಷದಲ್ಲಿ 10 ಲಕ್ಷ ಮನೆಗಳಿಗೆ ಸೌರ ಫಲಕ

ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…

6 hours ago

ನಂದಿನಿ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ

ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …

6 hours ago

ಹೆಚ್ಚುತ್ತಿರುವ ಸೈಬರ್ ಅಪರಾಧ ಪ್ರಕರಣಗಳು | ಒಂದು ವರ್ಷದಲ್ಲಿ 22 ಸಾವಿರ ಸೈಬರ್ ಪ್ರಕರಣ ದಾಖಲು |

ದಿನದಿಂದ ದಿನಕ್ಕೆ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ…

6 hours ago

ಬೆಳ್ಳಿ ಧರಿಸುವುದು ಎಲ್ಲಾ ರಾಶಿಯವರಿಗೆ ಉತ್ತಮವೇ…? | ಯಾವೆಲ್ಲಾ ರಾಶಿಗಳಿಗಳಿಗೆ ಹಾನಿ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

6 hours ago

ಸಂಬಾರ ಮಂಡಳಿಯ ದರ ಪಟ್ಟಿಯಲ್ಲಿ ಶಿರಸಿಯ ಕಾಳುಮೆಣಸು ನಮೂದಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ

ಶಿರಸಿಯ ಕಾಳುಮೆಣಸಿನ ಬೆಲೆಯನ್ನು ಸಂಬಾರ ಮಂಡಳಿಯ ದರಪಟ್ಟಿಯಲ್ಲಿ ನಮೂದಿಸುವಂತೆ ಕೇಂದ್ರ ವಾಣಿಜ್ಯ ಸಚಿವ…

14 hours ago

ಹೆತ್ತವರವನ್ನು ನೋಡಿಕೊಳ್ಳದ ಮಕ್ಕಳ ದಾನಪತ್ರ ರದ್ದುಗೊಳಿಸುವ ಅವಕಾಶ ಕಾನೂನಿನಲ್ಲಿದೆ | ಸಚಿವ ಕೃಷ್ಣಭೈರೇಗೌಡ

ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ನೀಡಿದ ದಾನಪತ್ರವನ್ನು…

14 hours ago