Advertisement
ಸುದ್ದಿಗಳು

ಸಾಲಮನ್ನಾ ಯೋಜನೆಯ ಅನುಷ್ಠಾನದಲ್ಲಿನ ಗೊಂದಲ ಸರಿಪಡಿಸಲು ಶಾಸಕ ಅಂಗಾರ ಆಗ್ರಹ

Share

ಸುಳ್ಯ: ರಾಜ್ಯ ಸರ್ಕಾರ ಘೋಷಣೆ ಮಾಡಿದ ಒಂದು ಲಕ್ಷ ರೂ ತನಕದ ಸಾಲ ಮನ್ನಾ ಯೋಜನೆಯ ಅನುಷ್ಠಾನದಲ್ಲಿ ಪ್ರಾರಂಭಿಕ ಹಂತದಲ್ಲಿ ಸರ್ಕಾರದ ಆದೇಶಗಳಿಂದಾಗಿ ಉಂಟಾಗಿರುವ ಸಮಸ್ಯೆಯನ್ನು ಪರಿಹರಿಸಬೇಕೆಂದು ಶಾಸಕ ಎಸ್.ಅಂಗಾರ ರಾಜ್ಯ ಗೃಹ ಹಾಗೂ ಸಹಕಾರ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಆಗ್ರಹಿಸಿದ್ದಾರೆ.

ತಾಂತ್ರಿಕ ಕಾರಣಗಳಿಂದಾಗಿ ಸಾಲಮನ್ನಾ ವಂಚಿತರಾಗಬಹುದಾದ ರೈತರ ಹಿತದೃಷ್ಠಿಯಿಂದ ಉಂಟಾಗಿರುವ ತಾಂತ್ರಿಕ ಸಮಸ್ಯೆಗಳನ್ನು ಸರಿಪಡಿಸಲು ಅವಕಾಶ ನೀಡಿ ಎಲ್ಲಾ ಅರ್ಹ ರೈತರಿಗೆ ಸಾಲ ಮನ್ನಾ ಸವಲತ್ತು ಸಿಗುವಂತೆ ತಂತ್ರಾಂಶದಲ್ಲಿ ಅವಕಾಶ ಮಾಡಬೇಕೆಂದು ಸಚಿವರಲ್ಲಿ ವಿನಂತಿಸಲಾಗಿದೆ. ಈ ಕುರಿತು ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಸಚಿವರು ಶಾಸಕರಿಗೆ ಭರವಸೆ ನೀಡಿದ್ದಾರೆ. ಪ್ರಾಥಮಿಕ ಸಹಕಾರಿ ಸಂಘಗಳು ಸದಸ್ಯರ ರೂಪೇ ಕೆ.ಸಿ.ಸಿ ಖಾತೆಗಳ ಸಂಖ್ಯೆಯನ್ನು ನಮೂದಿಸದೇ ಇದ್ದುದರಿಂದ ಬಹಳಷ್ಟು ರೈತರ ಸಾಲ ಮನ್ನಾ ಮೊಬಲಗು ಜಮಾ ಆಗದೆ ಬಾಕಿ ಇರುತ್ತದೆ ಈ ಬಗ್ಗೆ ಮಾರ್ಚ್ ತನಕ ಸಾಲ ಮನ್ನಾ ಮೊತ್ತ ಬಿಡುಗಡೆಯಾದ ಖಾತೆಗಳಿಗೆ ಎಡಿಟಿಂಗ್ ಅವಕಾಶ ನೀಡುವುದರ ಮೂಲಕ ಸದಸ್ಯರ ರೂಪೇ ಖಾತೆ ಸಂಖ್ಯೆ ನಮೂದಿಸಲು ಅವಕಾಶ ನೀಡಿರುತ್ತಾರೆ.

ಮಾರ್ಚ್ 2019ರ ನಂತರ ಬಿಡುಗಡೆಯಾದ ಹಾಗು ಬಿಡುಗಡೆಯಾಗಲಿರುವ ಖಾತೆಗಳಿಗೂ ಎಡಿಟಿಂಗ್ ಅವಕಾಶ ನೀಡಬೇಕು, ಸದಸ್ಯರ ನಂಬ್ರದ ಕಾಲಂ ಸರಿಯಾಗಿ ಕಾಣುವಂತೆ ಮಾಡಲು ಕ್ರಮ ಕೈಗೊಳ್ಳಬೇಕು, ಪಡಿತರ ಚೀಟಿಗೆ ಆಧಾರ್ ಲಿಂಕ್ ಮಾಡಿದರಿಂದ ಅದು ಹೊಸ ಪಡಿತರ ಚೀಟಿ ಎಂದು ನಮೂದಾಗುವ ಕಾರಣ ಹಲವು ಮಂದಿ ಕೃಷಿಕರು ಸಾಲಮನ್ನಾ ಸೌಲಭ್ಯ ಪಡೆಯುವುದರಿಂದ ವಂಚಿತರಾಗಿದ್ದಾರೆ. ಅರ್ಹರಿಗೆ ಸಾಲಮನ್ನಾ ಸೌಲಭ್ಯ ದೊರಕಿಸಲು ಕ್ರಮ ಕೈಗೊಳ್ಳಬೇಕು. ವಿವರ ನಮೂದಿಸುವಾಗ ತಪ್ಪುಗಳು ಉಂಟಾಗಿರುವುದನ್ನು ಸರಿಪಡಿಸಲು ಅವಕಾಶ ನೀಡಬೇಕು, ಎಫ್‍ಎಸ್‍ಡಿ ಇನ್ ಕಂಪ್ಲೀಟ್ ಮತ್ತು ಪ್ಯಾಕ್ಸ್ ಡಿಇಒ ಲಾಗಿನ್‍ನಲ್ಲಿ ವಿಲೇವಾರಿಗೆ ಬಾಕಿ ಇರುವ ಪ್ರಕರಣವನ್ನು ಇತ್ಯರ್ಥ ಪಡಿಸಲು ತಾಲೂಕು ಸಮಿತಿಗೆ ವರ್ಗಾಯಿಸಬೇಕು, ಹಿಂದಿನ ಆದೇಶದಂತೆ ಆದಾಯ ತರಿಗೆ, ಪಿಂಚಣಿ, ವೇತನ ಮಾಹಿತಿ ಅಪ್‍ಲೋಡ್ ಆಗಿದ್ದು ಇದರಿಂದ ಹಲವು ಮಂದಿ ಸೌಲಭ್ಯ ವಂಚಿತರಾಗಿದ್ದಾರೆ ಇದನ್ನು ತಿದ್ದುಪಡಿಗೆ ಅವಕಾಶ ನೀಡಬೇಕು, ಸಾಲಮನ್ನಾ ಸೌಲಭ್ಯವನ್ನು ಸಹಕಾರಿ ಸಂಘಗಳ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನಲ್ಲಿರುವ ಖಾತೆಗೆ ಬಿಡುಗಡೆ ಮಾಡಿ ಸಹಕಾರಿ ಸಂಘಗಳ ಮೂಲಕ ರೈತರಿಗೆ ತಕ್ಷಣ ದೊರಕಿಸುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು, ಟಿ.ಎಲ್.ಸಿ ಸ್ಕ್ಯಾನ್ ಅಪ್‍ಲೋಡ್ ಪೆಂಡಿಂಗ್ ಪ್ರಕರಣವನ್ನು ತಾಲೂಕು ಸಮಿತಿಗೆ ವರ್ಗಾಯಿಸಬೇಕು, ಜಿ.ಪಿ.ಎ ನೀಡಿದ ಪ್ರಕರಣಗಳಿಗೆ ಸಾಲ ಮನ್ನಾ ಸವಲತ್ತು ಅವಕಾಶ ನೀಡಬೇಕು, ಸಾಲ ಪಡೆದ ಬಳಿಕ ಪಹಣಿ ಪೋಡಿ ದುರಸ್ತಿ, ಖಾತಾ ಬದಲಾವಣೆ, ಇತ್ಯಾದಿ ಕಾರಣಗಳಿಂದ ಪಹಣಿಯಲ್ಲಿ ಹೆಸರು ಬದಲಾಗಿದ್ದು ಇಂತಹಾ ಪ್ರಕರಣಗಳನ್ನು ತಾಲೂಕು ಸಮಿತಿಯಲ್ಲಿ ವಿಲೇವಾರಿಗೆ ಅವಕಾಶ ನೀಡಬೇಕು ಎಂದು ಮನವಿ ಆಗ್ರಹಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

21 hours ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

23 hours ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

24 hours ago

ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ

ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.

1 day ago

ಜಾಗತಿಕ ತಾಪಮಾನಕ್ಕೆ ಪರಿಹಾರ : ವೃಕ್ಷ ಸಂವರ್ಧನೆಗೆ ಒತ್ತು

ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…

1 day ago

ಕೃಷಿಗೆ ಹೊಸ ದಿಕ್ಕು – ICAR ಟಾಸ್ಕ್ ಫೋರ್ಸ್ ಘೋಷಣೆ – ರೈತರ ಆದಾಯ ಹೆಚ್ಚಳಕ್ಕೆ ಪ್ಲಾನ್

ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…

1 day ago