Advertisement
ಸುದ್ದಿಗಳು

ಸಾಲಮನ್ನಾ ಯೋಜನೆ ಮುಗಿಯದ ಗೊಂದಲ : ಇಲಾಖೆಗೆ ಪತ್ರ ಬರೆಯಲು ನಿರ್ಧಾರ

Share

ಸುಳ್ಯ: ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಒಂದು ಲಕ್ಷ ರೂವರೆಗಿನ ಸಾಲಮನ್ನಾ ಎಲ್ಲಾ ರೈತರ ಖಾತೆಗೆ ಜಮೆ ಆಗುವುದಕ್ಕೆ ಇರುವ ಗೊಂದಲ ಪರಿಹಾರ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಸರಕಾರವನ್ನು ಒತ್ತಾಯಿಸಲು ಸುಳ್ಯ ತಾಲೂಕು ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

Advertisement
Advertisement
Advertisement
Advertisement

ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತಾಲೂಕಿನ ವಿವಿಧ ಸಹಕಾರಿ ಸಂಘಗಳ ಅಧ್ಯಕ್ಷರುಗಳು ಮತ್ತು ಕಾರ್ಯನಿರ್ವಹಣಾಧಿಕಾರಿಗಳು ಭಾಗವಹಿಸಿದ್ದರು. ಸೇರ್ಪಡೆಗೆ ಬಿಟ್ಟು ಹೋದ ರೈತರ ಚಾಲ್ತಿ ಖಾತೆ ಸಂಖ್ಯೆ ಮತ್ತಿತರ ಮಾಹಿತಿಗಳನ್ನು ಅಪ್‍ಲೋಡ್ ಮಾಡಲು ಮೂರು ದಿನಗಳ ವೆಬ್‍ಸೈಟ್ ತೆರೆಯಲಾಗಿದ್ದರೂ ಶೇ.25 ರಿಂದ ಶೇ.30 ರಷ್ಟು ಮಂದಿಯ ವಿವರಗಳನ್ನು ಮಾತ್ರ ಅಪ್‍ಲೋಡ್ ಮಾಡಲು ಸಾಧ್ಯವಾಗಿದೆ. ಸಾಲಮನ್ನಾ ರೈತರ ಪಟ್ಟಿ ತಯಾರಿಸಲಾಗಿದ್ದು 18 ಪಟ್ಟಿಗಳಲ್ಲಿ ಈಗ 14 ಪಟ್ಟಿವರೆಗಿನವರ ಮಾಹಿತಿ ಮಾತ್ರ ಅಪಲೋಡ್ ಮಾಡಲು ಅವಕಾಶ ನೀಡಲಾಗಿತ್ತು. ಉಳಿದ ಪಟ್ಟಿಯಲ್ಲಿ ಸುಳ್ಯ ತಾಲೂಕಿನ ಹೆಚ್ಚು ಮಂದಿ ರೈತರ ಹೆಸರಿದ್ದು ಶೇ.70 ಮಂದಿಯ ಮಾಹಿತಿ ಅಪ್‍ಲೋಡ್ ಮಾಡಲು ಬಾಕಿ ಇದೆ ಎಂದು ವಿವಿಧ ಸಹಕಾರಿ ಸಂಘಗಳ ಕಾರ್ಯನಿರ್ವಹಣಾಧಿಕಾರಿಗಳು ತಿಳಿಸಿದರು. ಅಲ್ಲದೆ ಇನ್ನಿತರ ಹಲವು ತಾಂತ್ರಿಕ ಸಮಸ್ಯೆಗಳಿಂದಲೂ ಅಪ್‍ಲೋಡ್ ಸಧ್ಯವಾಗದೆ ಸಾಲ ಮನ್ನಾ ಸೌಲಭ್ಯ ಪಡೆಯುವುದರಿಂದ ರೈತರು ವಂಚಿತರಾಗಿದ್ದಾರೆ ಎಂದು ಸಭೆಯಲ್ಲಿ ಭಾಗವಹಿಸಿದ ಸಹಕಾರಿ ಸಂಘಗಳ ಅಧ್ಯಕ್ಷರು ಮತ್ತು ಕಾರ್ಯನಿರ್ವಹಣಾಧಿಕಾರಿಗಳು ಹೇಳಿದರು.

Advertisement

ತಾಲೂಕು ಪಂಚಾಯತ್ ಸದಸ್ಯ ರಾಧಾಕೃಷ್ಣ ಬೊಳ್ಳೂರು ಮಾತನಾಡಿದರು. ಸುಳ್ಯ ತಾಲೂಕಿನ ಸಹಕಾರಿ ಸಂಘಗಳ ಮೂಲಕ ರೈತರಿಗೆ ಸಾಲಮನ್ನಾ ಸೌಲಭ್ಯ ದೊರೆಯಲು ಯಾವುದೆಲ್ಲ ಅಡಚಣೆ ಇದೆ ಎಂದು ಪಟ್ಟಿ ಮಾಡಿ ಅದನ್ನು ಸರಿಪಡಿಸಿ ಅರ್ಹರಾದ ಎಲ್ಲಾ ರೈತರಿಗೂ ಸಾಲಮನ್ನಾ ಸೌಲಭ್ಯ ದೊರಕಿಸಿ ಕೊಡಲು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸಹಕಾರಿ ಇಲಾಖೆಗೆ ಪತ್ರ ಬರೆಯಲಾಗುವುದು ಎಂದು ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್ ತಿಳಿಸಿದ್ದಾರೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇಂದ್ರ ಬಜೆಟ್‌ | ರೈತರಿಗೆ ಕಿಸಾನ್ ಕಾರ್ಡ್ ನಿಂದ ಪ್ರಯೋಜನ | ಕೃಷಿ ವಲಯಕ್ಕೆ 137757 ಕೋಟಿ ಅನುದಾನ |

ಕೇಂದ್ರ ಬಜೆಟ್‌ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…

4 hours ago

ಆನೆಗಳ ಚಲನ ವಲನಗಳ ಬಗ್ಗೆ ಸ್ವದೇಶಿ ನಿರ್ಮಿತ ರೇಡಿಯೊ ಕಾಲರ್ ಅಳವಡಿಕೆ | ಅರಣ್ಯ ಸಚಿವ ಈಶ್ವರ್ ಖಂಡ್ರೆ

ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…

4 hours ago

ಹೊಸರುಚಿ | ಪಪ್ಪಾಯ ಹಣ್ಣು ಬರ್ಫಿ

ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…

13 hours ago

ಸೀತೆ ಪುನೀತೆಯೆ ? ಮತ್ತೊಮ್ಮೆ ಅಗ್ನಿ ಪರೀಕ್ಷೆಯೇ?

ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…

15 hours ago

ಎಲ್ಲಾ ಕೃಷಿ ಆದಾಯವನ್ನು ಬ್ಯಾಂಕ್‌ ಉಳಿತಾಯ ಖಾತೆ ಮೂಲಕ ವ್ಯವಹಾರ ಮಾಡಬೇಕು ಏಕೆ..?

ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…

1 day ago

ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ

ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…

1 day ago