Advertisement
ಸುದ್ದಿಗಳು

ಸಾಲಮನ್ನಾ ಯೋಜನೆ ಮುಗಿಯದ ಗೊಂದಲ : ಇಲಾಖೆಗೆ ಪತ್ರ ಬರೆಯಲು ನಿರ್ಧಾರ

Share

ಸುಳ್ಯ: ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಒಂದು ಲಕ್ಷ ರೂವರೆಗಿನ ಸಾಲಮನ್ನಾ ಎಲ್ಲಾ ರೈತರ ಖಾತೆಗೆ ಜಮೆ ಆಗುವುದಕ್ಕೆ ಇರುವ ಗೊಂದಲ ಪರಿಹಾರ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಸರಕಾರವನ್ನು ಒತ್ತಾಯಿಸಲು ಸುಳ್ಯ ತಾಲೂಕು ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತಾಲೂಕಿನ ವಿವಿಧ ಸಹಕಾರಿ ಸಂಘಗಳ ಅಧ್ಯಕ್ಷರುಗಳು ಮತ್ತು ಕಾರ್ಯನಿರ್ವಹಣಾಧಿಕಾರಿಗಳು ಭಾಗವಹಿಸಿದ್ದರು. ಸೇರ್ಪಡೆಗೆ ಬಿಟ್ಟು ಹೋದ ರೈತರ ಚಾಲ್ತಿ ಖಾತೆ ಸಂಖ್ಯೆ ಮತ್ತಿತರ ಮಾಹಿತಿಗಳನ್ನು ಅಪ್‍ಲೋಡ್ ಮಾಡಲು ಮೂರು ದಿನಗಳ ವೆಬ್‍ಸೈಟ್ ತೆರೆಯಲಾಗಿದ್ದರೂ ಶೇ.25 ರಿಂದ ಶೇ.30 ರಷ್ಟು ಮಂದಿಯ ವಿವರಗಳನ್ನು ಮಾತ್ರ ಅಪ್‍ಲೋಡ್ ಮಾಡಲು ಸಾಧ್ಯವಾಗಿದೆ. ಸಾಲಮನ್ನಾ ರೈತರ ಪಟ್ಟಿ ತಯಾರಿಸಲಾಗಿದ್ದು 18 ಪಟ್ಟಿಗಳಲ್ಲಿ ಈಗ 14 ಪಟ್ಟಿವರೆಗಿನವರ ಮಾಹಿತಿ ಮಾತ್ರ ಅಪಲೋಡ್ ಮಾಡಲು ಅವಕಾಶ ನೀಡಲಾಗಿತ್ತು. ಉಳಿದ ಪಟ್ಟಿಯಲ್ಲಿ ಸುಳ್ಯ ತಾಲೂಕಿನ ಹೆಚ್ಚು ಮಂದಿ ರೈತರ ಹೆಸರಿದ್ದು ಶೇ.70 ಮಂದಿಯ ಮಾಹಿತಿ ಅಪ್‍ಲೋಡ್ ಮಾಡಲು ಬಾಕಿ ಇದೆ ಎಂದು ವಿವಿಧ ಸಹಕಾರಿ ಸಂಘಗಳ ಕಾರ್ಯನಿರ್ವಹಣಾಧಿಕಾರಿಗಳು ತಿಳಿಸಿದರು. ಅಲ್ಲದೆ ಇನ್ನಿತರ ಹಲವು ತಾಂತ್ರಿಕ ಸಮಸ್ಯೆಗಳಿಂದಲೂ ಅಪ್‍ಲೋಡ್ ಸಧ್ಯವಾಗದೆ ಸಾಲ ಮನ್ನಾ ಸೌಲಭ್ಯ ಪಡೆಯುವುದರಿಂದ ರೈತರು ವಂಚಿತರಾಗಿದ್ದಾರೆ ಎಂದು ಸಭೆಯಲ್ಲಿ ಭಾಗವಹಿಸಿದ ಸಹಕಾರಿ ಸಂಘಗಳ ಅಧ್ಯಕ್ಷರು ಮತ್ತು ಕಾರ್ಯನಿರ್ವಹಣಾಧಿಕಾರಿಗಳು ಹೇಳಿದರು.

ತಾಲೂಕು ಪಂಚಾಯತ್ ಸದಸ್ಯ ರಾಧಾಕೃಷ್ಣ ಬೊಳ್ಳೂರು ಮಾತನಾಡಿದರು. ಸುಳ್ಯ ತಾಲೂಕಿನ ಸಹಕಾರಿ ಸಂಘಗಳ ಮೂಲಕ ರೈತರಿಗೆ ಸಾಲಮನ್ನಾ ಸೌಲಭ್ಯ ದೊರೆಯಲು ಯಾವುದೆಲ್ಲ ಅಡಚಣೆ ಇದೆ ಎಂದು ಪಟ್ಟಿ ಮಾಡಿ ಅದನ್ನು ಸರಿಪಡಿಸಿ ಅರ್ಹರಾದ ಎಲ್ಲಾ ರೈತರಿಗೂ ಸಾಲಮನ್ನಾ ಸೌಲಭ್ಯ ದೊರಕಿಸಿ ಕೊಡಲು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸಹಕಾರಿ ಇಲಾಖೆಗೆ ಪತ್ರ ಬರೆಯಲಾಗುವುದು ಎಂದು ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್ ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18-03-2026 | ಗುಡುಗು-ಆಲಿಕಲ್ಲು ಮಳೆ ಅಲರ್ಟ್‌ | ರಾಜ್ಯಾದ್ಯಂತ ಹವಾಮಾನ ಬದಲಾವಣೆ..!

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…

4 hours ago

ದಕ್ಷಿಣ ಕನ್ನಡ–ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರಿದೆ…!, ರಾಜ್ಯದಲ್ಲಿ ಎಲೆಚುಕ್ಕೆ ರೋಗದಿಂದ 88,559 ಹೆಕ್ಟೇರ್ ಹಾನಿ

ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…

10 hours ago

ಚಾಮರಾಜನಗರ–ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ | ಬಿಸಿಲಿನ ನಡುವೆ ಇಳೆ ತಂಪು, ರೈತರಿಗೆ ಆತಂಕ

ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…

10 hours ago

ವಿದ್ಯುತ್ ಕೊರತೆಯ ನಿರ್ಣಾಯಕ ಸಮಸ್ಯೆಗೆ ಪರಿಹಾರ : ದೇಶದ ಸ್ಥಾಪಿತ ಸಾಮರ್ಥ್ಯ 520 ಗಿಗಾ ವ್ಯಾಟ್‌ ದಾಟಿತು

ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್‌ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…

10 hours ago

ಅಡಿಕೆ ಹಾನಿಕಾರಕವಲ್ಲ – ಅಧ್ಯಯನ ಪ್ರಗತಿಯಲ್ಲಿ | ಹಾಳೆತಟ್ಟೆ ಹಾನಿಕಾರಕವಲ್ಲ

ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…

18 hours ago

ಗಿರಿಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ | ಮುಳ್ಳಯ್ಯನಗಿರಿ–ಸೀತಾಳಯ್ಯಗಿರಿಯಲ್ಲಿ ಜಾಗೃತಿ ಕಾರ್ಯ

ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…

20 hours ago