Advertisement
ಸುದ್ದಿಗಳು

ಸಾಲಮನ್ನಾ ಯೋಜನೆ ಮುಗಿಯದ ಗೊಂದಲ : ಇಲಾಖೆಗೆ ಪತ್ರ ಬರೆಯಲು ನಿರ್ಧಾರ

Share

ಸುಳ್ಯ: ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಒಂದು ಲಕ್ಷ ರೂವರೆಗಿನ ಸಾಲಮನ್ನಾ ಎಲ್ಲಾ ರೈತರ ಖಾತೆಗೆ ಜಮೆ ಆಗುವುದಕ್ಕೆ ಇರುವ ಗೊಂದಲ ಪರಿಹಾರ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಸರಕಾರವನ್ನು ಒತ್ತಾಯಿಸಲು ಸುಳ್ಯ ತಾಲೂಕು ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತಾಲೂಕಿನ ವಿವಿಧ ಸಹಕಾರಿ ಸಂಘಗಳ ಅಧ್ಯಕ್ಷರುಗಳು ಮತ್ತು ಕಾರ್ಯನಿರ್ವಹಣಾಧಿಕಾರಿಗಳು ಭಾಗವಹಿಸಿದ್ದರು. ಸೇರ್ಪಡೆಗೆ ಬಿಟ್ಟು ಹೋದ ರೈತರ ಚಾಲ್ತಿ ಖಾತೆ ಸಂಖ್ಯೆ ಮತ್ತಿತರ ಮಾಹಿತಿಗಳನ್ನು ಅಪ್‍ಲೋಡ್ ಮಾಡಲು ಮೂರು ದಿನಗಳ ವೆಬ್‍ಸೈಟ್ ತೆರೆಯಲಾಗಿದ್ದರೂ ಶೇ.25 ರಿಂದ ಶೇ.30 ರಷ್ಟು ಮಂದಿಯ ವಿವರಗಳನ್ನು ಮಾತ್ರ ಅಪ್‍ಲೋಡ್ ಮಾಡಲು ಸಾಧ್ಯವಾಗಿದೆ. ಸಾಲಮನ್ನಾ ರೈತರ ಪಟ್ಟಿ ತಯಾರಿಸಲಾಗಿದ್ದು 18 ಪಟ್ಟಿಗಳಲ್ಲಿ ಈಗ 14 ಪಟ್ಟಿವರೆಗಿನವರ ಮಾಹಿತಿ ಮಾತ್ರ ಅಪಲೋಡ್ ಮಾಡಲು ಅವಕಾಶ ನೀಡಲಾಗಿತ್ತು. ಉಳಿದ ಪಟ್ಟಿಯಲ್ಲಿ ಸುಳ್ಯ ತಾಲೂಕಿನ ಹೆಚ್ಚು ಮಂದಿ ರೈತರ ಹೆಸರಿದ್ದು ಶೇ.70 ಮಂದಿಯ ಮಾಹಿತಿ ಅಪ್‍ಲೋಡ್ ಮಾಡಲು ಬಾಕಿ ಇದೆ ಎಂದು ವಿವಿಧ ಸಹಕಾರಿ ಸಂಘಗಳ ಕಾರ್ಯನಿರ್ವಹಣಾಧಿಕಾರಿಗಳು ತಿಳಿಸಿದರು. ಅಲ್ಲದೆ ಇನ್ನಿತರ ಹಲವು ತಾಂತ್ರಿಕ ಸಮಸ್ಯೆಗಳಿಂದಲೂ ಅಪ್‍ಲೋಡ್ ಸಧ್ಯವಾಗದೆ ಸಾಲ ಮನ್ನಾ ಸೌಲಭ್ಯ ಪಡೆಯುವುದರಿಂದ ರೈತರು ವಂಚಿತರಾಗಿದ್ದಾರೆ ಎಂದು ಸಭೆಯಲ್ಲಿ ಭಾಗವಹಿಸಿದ ಸಹಕಾರಿ ಸಂಘಗಳ ಅಧ್ಯಕ್ಷರು ಮತ್ತು ಕಾರ್ಯನಿರ್ವಹಣಾಧಿಕಾರಿಗಳು ಹೇಳಿದರು.

ತಾಲೂಕು ಪಂಚಾಯತ್ ಸದಸ್ಯ ರಾಧಾಕೃಷ್ಣ ಬೊಳ್ಳೂರು ಮಾತನಾಡಿದರು. ಸುಳ್ಯ ತಾಲೂಕಿನ ಸಹಕಾರಿ ಸಂಘಗಳ ಮೂಲಕ ರೈತರಿಗೆ ಸಾಲಮನ್ನಾ ಸೌಲಭ್ಯ ದೊರೆಯಲು ಯಾವುದೆಲ್ಲ ಅಡಚಣೆ ಇದೆ ಎಂದು ಪಟ್ಟಿ ಮಾಡಿ ಅದನ್ನು ಸರಿಪಡಿಸಿ ಅರ್ಹರಾದ ಎಲ್ಲಾ ರೈತರಿಗೂ ಸಾಲಮನ್ನಾ ಸೌಲಭ್ಯ ದೊರಕಿಸಿ ಕೊಡಲು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸಹಕಾರಿ ಇಲಾಖೆಗೆ ಪತ್ರ ಬರೆಯಲಾಗುವುದು ಎಂದು ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್ ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 11-04-2026 | ದಕ್ಷಿಣದಲ್ಲಿ ಮಳೆ, ಉತ್ತರದಲ್ಲಿ ಬಿಸಿ… ಮುಂದೇನು?

ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…

10 hours ago

ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.

17 hours ago

ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ

ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…

1 day ago

ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!

ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…

2 days ago

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ : ಕರಾವಳಿಯಲ್ಲಿ ಒಣಹವೆ ಮುಂದುವರಿಕೆ!

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…

3 days ago

ಆಟೋ ಗ್ಯಾಸ್ ಕೊರತೆ ವದಂತಿ- ರಾಜ್ಯ ಸರ್ಕಾರದಿಂದ ಸ್ಪಷ್ಟನೆ..!

ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…

3 days ago