Advertisement
ಸುದ್ದಿಗಳು

ಸಾಲಮನ್ನಾ ಯೋಜನೆ ಮುಗಿಯದ ಗೊಂದಲ : ಇಲಾಖೆಗೆ ಪತ್ರ ಬರೆಯಲು ನಿರ್ಧಾರ

Share

ಸುಳ್ಯ: ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಒಂದು ಲಕ್ಷ ರೂವರೆಗಿನ ಸಾಲಮನ್ನಾ ಎಲ್ಲಾ ರೈತರ ಖಾತೆಗೆ ಜಮೆ ಆಗುವುದಕ್ಕೆ ಇರುವ ಗೊಂದಲ ಪರಿಹಾರ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಸರಕಾರವನ್ನು ಒತ್ತಾಯಿಸಲು ಸುಳ್ಯ ತಾಲೂಕು ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತಾಲೂಕಿನ ವಿವಿಧ ಸಹಕಾರಿ ಸಂಘಗಳ ಅಧ್ಯಕ್ಷರುಗಳು ಮತ್ತು ಕಾರ್ಯನಿರ್ವಹಣಾಧಿಕಾರಿಗಳು ಭಾಗವಹಿಸಿದ್ದರು. ಸೇರ್ಪಡೆಗೆ ಬಿಟ್ಟು ಹೋದ ರೈತರ ಚಾಲ್ತಿ ಖಾತೆ ಸಂಖ್ಯೆ ಮತ್ತಿತರ ಮಾಹಿತಿಗಳನ್ನು ಅಪ್‍ಲೋಡ್ ಮಾಡಲು ಮೂರು ದಿನಗಳ ವೆಬ್‍ಸೈಟ್ ತೆರೆಯಲಾಗಿದ್ದರೂ ಶೇ.25 ರಿಂದ ಶೇ.30 ರಷ್ಟು ಮಂದಿಯ ವಿವರಗಳನ್ನು ಮಾತ್ರ ಅಪ್‍ಲೋಡ್ ಮಾಡಲು ಸಾಧ್ಯವಾಗಿದೆ. ಸಾಲಮನ್ನಾ ರೈತರ ಪಟ್ಟಿ ತಯಾರಿಸಲಾಗಿದ್ದು 18 ಪಟ್ಟಿಗಳಲ್ಲಿ ಈಗ 14 ಪಟ್ಟಿವರೆಗಿನವರ ಮಾಹಿತಿ ಮಾತ್ರ ಅಪಲೋಡ್ ಮಾಡಲು ಅವಕಾಶ ನೀಡಲಾಗಿತ್ತು. ಉಳಿದ ಪಟ್ಟಿಯಲ್ಲಿ ಸುಳ್ಯ ತಾಲೂಕಿನ ಹೆಚ್ಚು ಮಂದಿ ರೈತರ ಹೆಸರಿದ್ದು ಶೇ.70 ಮಂದಿಯ ಮಾಹಿತಿ ಅಪ್‍ಲೋಡ್ ಮಾಡಲು ಬಾಕಿ ಇದೆ ಎಂದು ವಿವಿಧ ಸಹಕಾರಿ ಸಂಘಗಳ ಕಾರ್ಯನಿರ್ವಹಣಾಧಿಕಾರಿಗಳು ತಿಳಿಸಿದರು. ಅಲ್ಲದೆ ಇನ್ನಿತರ ಹಲವು ತಾಂತ್ರಿಕ ಸಮಸ್ಯೆಗಳಿಂದಲೂ ಅಪ್‍ಲೋಡ್ ಸಧ್ಯವಾಗದೆ ಸಾಲ ಮನ್ನಾ ಸೌಲಭ್ಯ ಪಡೆಯುವುದರಿಂದ ರೈತರು ವಂಚಿತರಾಗಿದ್ದಾರೆ ಎಂದು ಸಭೆಯಲ್ಲಿ ಭಾಗವಹಿಸಿದ ಸಹಕಾರಿ ಸಂಘಗಳ ಅಧ್ಯಕ್ಷರು ಮತ್ತು ಕಾರ್ಯನಿರ್ವಹಣಾಧಿಕಾರಿಗಳು ಹೇಳಿದರು.

ತಾಲೂಕು ಪಂಚಾಯತ್ ಸದಸ್ಯ ರಾಧಾಕೃಷ್ಣ ಬೊಳ್ಳೂರು ಮಾತನಾಡಿದರು. ಸುಳ್ಯ ತಾಲೂಕಿನ ಸಹಕಾರಿ ಸಂಘಗಳ ಮೂಲಕ ರೈತರಿಗೆ ಸಾಲಮನ್ನಾ ಸೌಲಭ್ಯ ದೊರೆಯಲು ಯಾವುದೆಲ್ಲ ಅಡಚಣೆ ಇದೆ ಎಂದು ಪಟ್ಟಿ ಮಾಡಿ ಅದನ್ನು ಸರಿಪಡಿಸಿ ಅರ್ಹರಾದ ಎಲ್ಲಾ ರೈತರಿಗೂ ಸಾಲಮನ್ನಾ ಸೌಲಭ್ಯ ದೊರಕಿಸಿ ಕೊಡಲು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸಹಕಾರಿ ಇಲಾಖೆಗೆ ಪತ್ರ ಬರೆಯಲಾಗುವುದು ಎಂದು ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್ ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್‌ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…

6 hours ago

ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!

ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…

7 hours ago

ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ

ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…

7 hours ago

ಆಘಾತಕಾರಿ ವರದಿ- ಮೇ-ಜೂನ್‌ನಲ್ಲಿ ಭಾರತದ 10 ಮಕ್ಕಳಲ್ಲಿ 7 ಮಂದಿ ಶಾಲೆ ತಪ್ಪಿಸಿದರು..!

ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…

13 hours ago

ಹವಾಮಾನ ವರದಿ | 09-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ..! ಜುಲೈ 11 ರಿಂದ ಮಳೆ ಮತ್ತಷ್ಟು ಇಳಿಕೆ, ಬಿಸಿಲಿನ ಅವಧಿ ಹೆಚ್ಚಳ ಸಾಧ್ಯ

ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ…

15 hours ago

ಜುಲೈ ಮಳೆಯಿಂದ ದೇಶಕ್ಕೆ ನೆಮ್ಮದಿ…! ಮಳೆ ಕೊರತೆ 12%ಕ್ಕೆ ಇಳಿಕೆ

ಜುಲೈ ಮೊದಲ ವಾರದ ಉತ್ತಮ ಮಳೆಯಿಂದ ದೇಶದ ಮಳೆ ಕೊರತೆ 12%ಕ್ಕೆ ಇಳಿದಿದೆ.…

15 hours ago