Advertisement
ಸುದ್ದಿಗಳು

ಸಾಲಮನ್ನಾ- ರೈತ ಸಂಘ ಪ್ರತಿಭಟನೆ; ಭರವಸೆಯ ಹಿನ್ನಲೆಯಲ್ಲಿ ಪ್ರತಿಭಟನೆ ಹಿಂದಕ್ಕೆ

Share

ಸುಳ್ಯ: ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ಸುಳ್ಯ ತಾಲೂಕು ಘಟಕ ಹಾಗೂ ಅರಂತೋಡು ವಲಯ ಘಟಕ ವತಿಯಿಂದ ರೈತರ ಸಾಲ ಮನ್ನಾ ಸೌಲಭ್ಯ ವಿಳಂಬ ಖಂಡಿಸಿ ಅರಂತೋಡು ಸಹಕಾರಿ ಸಂಘದ ಎದುರು ಪ್ರತಿಭಟನೆ ನಡೆಸಲಾಯಿತು. ಸಹಕಾರಿ ಬ್ಯಾಂಕ್ ನ ಸುಳ್ಯ ವಲಯ ಮೇಲ್ವಿಚಾರಕರು ನೀಡಿದ ಭರವಸೆಗೆ ತೃಪ್ತರಾಗದೆ ಸಹಕಾರಿ ಸಂಘದ ಉಪನಿಬಂಧಕರು ಬಂದು ಸರಿಯಾದ ಉತ್ತರ ಕೊಡಬೇಕೆಂದು ಪಟ್ಟು ಹಿಡಿದು ಅಹೋರಾತ್ರಿ ಧರಣಿ ನಡೆಸುವುದಾಗಿ ಘೋಷಿಸಿದರು. ಬಳಿಕ ಸುಳ್ಯ ತಹಸೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಸ್ಥಳಕ್ಕೆ ಆಗಮಿಸಿ ರೈತರ ಅಹವಾಲು ಆಲಿಸಿದರು. ಬಳಿಕ ಸಹಕಾರಿ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ರೈತರ ಅಹವಾಲು ಸ್ವೀಕರಿಸಿ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿ ಸಾಲ ಮನ್ನಾ ಎಲ್ಲಾ ರೈತರ ಖಾತೆಗಳಿಗೆ ಜಮಾ ಮಾಡುವಂತೆ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದರು. ಈ ಹಿನ್ನಲೆಯಲ್ಲಿ ಪ್ರತಿಭಟನೆ ಹಿಂತೆಗೆದುಕೊಳ್ಳಲಾಯಿತು.

ಪ್ರತಿಭಟನೆಯಲ್ಲಿ ರೈತ ಸಂಘ ರಾಜ್ಯ ಕಾರ್ಯದರ್ಶಿ ರವಿಕಿರಣ ಪುಣಚ, ರೈತಸಂಘ ಸುಳ್ಯ ತಾಲೂಕು ಘಟಕದ ಅಧ್ಯಕ್ಷ ಲೊಲಜಾಕ್ಷ ಭೂತಕಲ್ಲು ,ಪ್ರಧಾನ ಕರ್ಯದರ್ಶಿ ತೀರ್ಥರಾಮ ನೆಡ್ಚಿಲು ,ಜಿಲ್ಲಾ ಕಾರ್ಯದರ್ಶಿ ದಿವಾಕರ ಪೈ ಮಜಿಗುಂಡಿ,ಖಜಾಂಜಿ ದೇವಪ್ಪ,ಅರಂತೋಡು ವಲಯ ಅಧ್ಯಕ್ಷ ತೀರ್ಥರಾಮ ಉಳುವಾರು,ಕಾರ್ಯದರ್ಶಿ ಮೋಹನ್ ಅಡ್ತಲೆ ಮತ್ತಿತರರು ಭಾಗವಹಿಸಿದ್ದರು. ಅರಂತೋಡು ,ಅಲೆಟ್ಟಿ ,ಉಬರಡ್ಕ, ಮಡಪ್ಪಾಡಿ ಜಾಲ್ಸೂರು, ಅಜ್ಜಾವರ ಮುಂತಾದ ಗ್ರಾಮಗಳ ರೈತರು ಭಾಗಹಿಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

11 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

13 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

14 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

16 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

1 day ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

1 day ago