ಸುದ್ದಿಗಳು

ಸಾಲಮನ್ನಾ ಹಣ ರೈತರ ಖಾತೆಗೆ ಪಾವತಿಗೆ 15 ದಿನದ ಗಡುವು : ಸುಳ್ಯ ತಾ.ಪಂ ಸಭೆಯಲ್ಲಿ ಖಡಕ್ ಸೂಚನೆ

Share

ಸುಳ್ಯ: ಹಸಿರು ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾದ ಎಲ್ಲಾ ರೈತರ ಖಾತೆಗೆ ಮುಂದಿನ 15 ದಿನದಲ್ಲಿ ಸಾಲಮನ್ನಾ ಹಣ ಪಾವತಿ ಆಗಬೇಕು. ಈ ಕುರಿತು ಸಮಗ್ರ ಮಾಹಿತಿಯನ್ನು ಒಂದು ವಾರದಲ್ಲಿ ಸಲ್ಲಿಸಬೇಕು ಎಂದು ಸುಳ್ಯ ತಾಲೂಕು ಪಂಚಾಯತ್ ಸಾಮಾನ್ಯ ಸಭೆ ಸಹಕಾರ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ರೈತರ ಖಾತೆಗೆ ಸಾಲ ಮನ್ನಾ ಹಣ ಪಾವತಿಯಾಗದ ಬಗ್ಗೆ ಚರ್ಚೆ ನಡೆಯಿತು. ಸುಳ್ಯ ತಾಲೂಕಿನಲ್ಲಿ ಒಟ್ಟು 14,113 ಮಂದಿ ರೈತರಲ್ಲಿ 10,884 ರೈತರ ಹೆಸರು ಗ್ರೀನ್ ಲಿಸ್ಟ್ ಗೆ ಸೇರ್ಪಡೆ ಆಗಿದೆ 9,047 ಮಂದಿಯ ಖಾತೆಗೆ ಹಣ ಜಮೆ ಆಗಿದ್ದು 1,837 ರೈತರ ಖಾತೆಗೆ ಹಣ ಪಾವತಿಗೆ ಬಾಕಿ ಇದೆ ಎಂದು ಸಹಕಾರ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು. ಪಡಿತರ ಚೀಟಿ, ಆಧಾರ್ ಕಾರ್ಡ್, ಆರ್‍ಟಿಸಿ ಮತ್ತಿತರ ದಾಖಲೆ ಹೊಂದಿಕೆ ಆಗದ ಮತ್ತಿತರ ತಾಂತ್ರಿಕ ಸಮಸ್ಯೆಗಳಿಂದ ಬಾಕಿ ಉಳಿದಿದೆ. ತಿದ್ದುಪಡಿಗೆ ಅವಕಾಶ ದೊರೆತ ಕೂಡಲೇ ಅದನ್ನು ಸರಿಪಡಿಸಲಾಗುವುದು ಎಂದು ಅಧಿಕಾರಿಗಳು ಹೇಳಿದರು.

ಆರಂಭದಲ್ಲಿ ಖಾತೆ ಸಂಖ್ಯೆಯ ಸ್ಥಳದಲ್ಲಿ ಸೊನ್ನೆ ಹಾಕಲು ಹೇಳಿದ ಕಾರಣ ಮತ್ತು ಇಲಾಖೆಯ ಕೆಲವು ತಪ್ಪು ನಿರ್ಧಾರದಿಂದ ರೈತರಿಗೆ ಹಣ ಬಾರದೆ ಸಮಸ್ಯೆ ಆಗಿದೆ ಎಂದು ಸದಸ್ಯ ರಾಧಾಕೃಷ್ಣ ಬೊಳ್ಳುರು ಹೇಳಿದರು.

ಸಾಲ ಮನ್ನಾ ಪಾವತಿಯಲ್ಲಿ ಹಲವು ನ್ಯೂನತೆಗಳು ಇದೆ ಎಂದು ಸದಸ್ಯರಾದ ಅಶೋಕ್ ನೆಕ್ರಾಜೆ, ಉದಯ ಕೊಪ್ಪಡ್ಕ ಹೇಳಿದರು. ಸಮಸ್ಯೆಯನ್ನು ಕೂಡಲೇ ಸರಿಪಡಿಸಿದರೆ ಮಾತ್ರ ಹಣ ಬರಬಹುದು.

ಬಜೆಟ್ ಕಳೆದ ಮೇಲೆ ಮತ್ತೆ ಹಣ ಬರುವ ಸಾಧ್ಯತೆ ಇಲ್ಲ ಆದುದರಿಂದ ಕೂಡಲೇ ಸರಿಪಡಿಸಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ ಹೇಳಿದರು. ಈ ಕುರಿತು ಬಹಳ ಹೊತ್ತು ಚರ್ಚೆ ನಡೆಯಿತು. 15 ದಿವಸದಲ್ಲಿ ಅರ್ಹರಾದ ಉಳಿದ ಎಲ್ಲಾ ರೈತರ ಖಾತೆಗೂ ಸಾಲಮನ್ನಾ ಹಣ ಪಾವತಿ ಮಾಡಲು ಕ್ರಮ ಕೈಗೊಳ್ಳಿ ಎಂದು ಅಧ್ಯಕ್ಷ ಚನಿಯ ಕಲ್ತಡ್ಕ ಸೂಚಿಸಿದರು.

ನಗರದ ಚರಂಡಿ ವ್ಯವಸ್ಥೆ- ನಗರಾಭಿವೃದ್ಧಿ ಸಚಿವರಿಗೆ ದೂರು:

ಸುಳ್ಯ ನಗರದಲ್ಲಿ ಸರಿಯಾಗಿ ಒಳಚರಂಡಿ ಮತ್ತು ಚರಂಡಿ ವ್ಯವಸ್ಥೆ ಇಲ್ಲದೆ ಕೊಳಚೆ ನೀರು ಹರಿಯದೆ ನಗರದಲ್ಲಿ ಕೊಳಚೆ ಸಮಸ್ಯೆ ಉಲ್ಬಣಗೊಂಡಿದೆ ಈ ಕುರಿತು ರಾಜ್ಯ ನಗರಾಭಿವೃದ್ಧಿ ಸಚಿವರಿಗೆ ಲಿಖಿತ ದೂರು ನೀಡುವುದಾಗಿ ಸದಸ್ಯ ರಾಧಾಕೃಷ್ಣ ಬೊಳ್ಳೂರು ಹೇಳಿದರು. ನಗರದ ಹಾಸ್ಟೇಲ್‍ಗಳ, ಆಸ್ಪತ್ರೆಗಳ ಕೊಳಚೆ ನೀರು ಸರಿಯಾಗಿ ಹರಿಯುತ್ತಿಲ್ಲ. ಚರಂಡಿ ವ್ಯವಸ್ಥೆ ಇಲ್ಲದೆ ಕೊಳಚೆ ನೀರು ರಸ್ತೆಗಳಲ್ಲಿ ಹರಿಯುತಿದೆ ಮತ್ತು ಪಯಸ್ವಿನಿ ನದಿಯ ಒಡಲು ಸೇರುತಿದೆ. ಕೋಟ್ಯಾಂತರ ರೂ ವ್ಯಯಿಸಿ ನಿರ್ಮಾಣ ಮಾಡಿದ ಒಳಚರಂಡಿ ವ್ಯವಸ್ಥೆ ವ್ಯರ್ಥವಾಗಿದೆ. ಅಲ್ಲಲ್ಲಿ ಕೊಳಚೆ ನೀರು ಸಂಗ್ರಹವಾಗಿ ರೋಗ ವಾಹಕ ಕೇಂದ್ರಗಳಾಗುತಿದೆ ಎಂದು ಹೇಳಿದ ಅವರು ಈ ಕುರಿತು ನಗರ ಪಂಚಾಯತ್ ಮುಖ್ಯಾಧಿಕಾರಿಯನ್ನು ಪ್ರಶ್ನಿಸಿದರು. ಬಹಳ ಹೊತ್ತು ಈ ಕುರಿತು ಚರ್ಚೆ, ವಾಗ್ವಾದ ನಡೆಯಿತು. ನಗರದಲ್ಲಿ ಚರಂಡಿ, ಒಳಚರಂಡಿ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸುವುದು ಸ್ಥಳೀಯಾಡಳಿತಗಳ ಜವಾಬ್ದಾರಿ ಎಂದು ಸದಸ್ಯರು ಹೇಳಿದರು. ನಗರದ ಸ್ವಚ್ಛತೆಗೆ ಆದ್ಯತೆ ನೀಡುವಂತೆ ತಾ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೂಚಿಸಿದರು. ನಗರದ ನೈರ್ಮಲ್ಯ ಹದಗೆಟ್ಟಿರುವ ಬಗ್ಗೆ ಸಚಿವರ ಗಮನಕ್ಕೆ ಬರುವುದಾಗಿ ರಾಧಾಕೃಷ್ಣ ಬೊಳ್ಳೂರು ಹೇಳಿದರು.

ನಗರದ ಕಸ ಜಾಲ್ಸೂರಿಗೆ ಹಾಕಲು ವಿರೋಧ:

ನಗರದ ತ್ಯಾಜ್ಯ ಸಂಸ್ಕರಣಾ ಕೇಂದ್ರ ಜಾಲ್ಸೂರಿನಲ್ಲಿ ಮಾಡುವುದಕ್ಕೆ ಗ್ರಾಮಸ್ಥರ ವಿರೋಧ ಇದೆ. ಅಲ್ಲಿ ಕಸ ಹಾಕುವುದು ಬೇಡ ಎಂದು ಗ್ರಾಮ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ತೀರ್ಥರಾಮ ಜಾಲ್ಸೂರು ಹೇಳಿದರು. ಡಂಪಿಂಗ್ ಯಾರ್ಡ್ ಮಾಡುವುದಲ್ಲ ಅಲ್ಲಿ ಕಸವನ್ನು ವೈಜ್ಞಾನಿಕವಾಗಿ ಸಂಸ್ಕರಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಾಧಿಕಾರಿ ತಿಳಿಸಿದರು. ವೈಜ್ಞಾನಿಕವಾಗಿ ಮಾಡುವುದಿದ್ದರೆ ಬೇರೆ ಸ್ಥಳ ಯಾಕೆ. ಈಗ ಇರುವ ಕಲ್ಚರ್ಪೆಯಲ್ಲಿಯೇ ವೈಜ್ಞಾನಿಕವಾಗಿ ಕಸ ವಿಲೇವಾರಿಗೆ ಕ್ರಮ ಕೈಗೊಳ್ಳಿ ಎಂದು ಅಧ್ಯಕ್ಷರು ಸೂಚಿಸಿದರು.
ವಿವಿಧ ಸ್ಥಳಗಳಲ್ಲಿ ಅಂಬೇಡ್ಕರ್ ಭವನ ನಿರ್ಮಾಣದ ಸ್ಥಳ ಗುರುತಿಸುವಿಕೆ ವಿಳಂಬದ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ಇಂದಿರಾ ಕ್ಯಾಂಟೀನ್ ಉದ್ಘಾಟನೆಗೆ ಜನಪ್ರತಿನಿಧಿಗಳನ್ನು ಕಡೆಗಣಿಸಿದ್ದಾರೆ ಎಂದು ಕೆಲವು ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು.

ತಾ.ಪಂ.ಉಪಾಧ್ಯಕ್ಷೆ ಶುಭದಾ ಎಸ್.ರೈ, ಸ್ಥಾಯಿ ಸಮಿತಿ ಅಧ್ಯಕ್ಷೆ ಜಾಹ್ನವಿ ಕಾಂಚೋಡು, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್, ತಹಶೀಲ್ದಾರ್ ಅನಂತಶಂಕರ ಉಪಸ್ಥಿತರಿದ್ದರು.

 

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಇಂದೂ ಕರಾವಳಿ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ…

34 minutes ago

ಏಪ್ರಿಲ್‌ನಲ್ಲಿ ಶನಿ ನಕ್ಷತ್ರ ಪ್ರವೇಶದಿಂದ 5 ರಾಶಿಗಳ ಲೈಫ್ ಚೇಂಜ್ ಆಗುವ ಸಾಧ್ಯತೆ‌ |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

5 hours ago

ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನ | ಆತಂಕಪಡುವ ಅಗತ್ಯವಿಲ್ಲ | ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಸ್ಪಷ್ಟನೆ

ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 1.6…

14 hours ago

ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಗುಡುಗು ಸಹಿತ ಗಾಳಿ-ಮಳೆ | ಎರಡನೇ ಬಾರಿ ಸುರಿದ ಧಾರಾಕಾರ ಮಳೆ |

ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳ ಹಲವು ಕಡೆ ಸಂಜೆ ಉತ್ತಮ ಮಳೆಯಾಗಿದೆ.…

14 hours ago

ಸರ್ಕಾರಿ ವೈದ್ಯರು ಆಸ್ಪತ್ರೆಗಳಲ್ಲಿ ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಇರಬೇಕು- ಸಚಿವ ಶರಣಪ್ರಕಾಶ್ ಪಾಟೀಲ್

ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…

1 day ago

ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧ

ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ…

1 day ago