Advertisement
ಸುದ್ದಿಗಳು

ಸಾಲಮನ್ನಾ ಹಣ ರೈತರ ಖಾತೆಗೆ ಪಾವತಿಗೆ 15 ದಿನದ ಗಡುವು : ಸುಳ್ಯ ತಾ.ಪಂ ಸಭೆಯಲ್ಲಿ ಖಡಕ್ ಸೂಚನೆ

Share

ಸುಳ್ಯ: ಹಸಿರು ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾದ ಎಲ್ಲಾ ರೈತರ ಖಾತೆಗೆ ಮುಂದಿನ 15 ದಿನದಲ್ಲಿ ಸಾಲಮನ್ನಾ ಹಣ ಪಾವತಿ ಆಗಬೇಕು. ಈ ಕುರಿತು ಸಮಗ್ರ ಮಾಹಿತಿಯನ್ನು ಒಂದು ವಾರದಲ್ಲಿ ಸಲ್ಲಿಸಬೇಕು ಎಂದು ಸುಳ್ಯ ತಾಲೂಕು ಪಂಚಾಯತ್ ಸಾಮಾನ್ಯ ಸಭೆ ಸಹಕಾರ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ರೈತರ ಖಾತೆಗೆ ಸಾಲ ಮನ್ನಾ ಹಣ ಪಾವತಿಯಾಗದ ಬಗ್ಗೆ ಚರ್ಚೆ ನಡೆಯಿತು. ಸುಳ್ಯ ತಾಲೂಕಿನಲ್ಲಿ ಒಟ್ಟು 14,113 ಮಂದಿ ರೈತರಲ್ಲಿ 10,884 ರೈತರ ಹೆಸರು ಗ್ರೀನ್ ಲಿಸ್ಟ್ ಗೆ ಸೇರ್ಪಡೆ ಆಗಿದೆ 9,047 ಮಂದಿಯ ಖಾತೆಗೆ ಹಣ ಜಮೆ ಆಗಿದ್ದು 1,837 ರೈತರ ಖಾತೆಗೆ ಹಣ ಪಾವತಿಗೆ ಬಾಕಿ ಇದೆ ಎಂದು ಸಹಕಾರ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು. ಪಡಿತರ ಚೀಟಿ, ಆಧಾರ್ ಕಾರ್ಡ್, ಆರ್‍ಟಿಸಿ ಮತ್ತಿತರ ದಾಖಲೆ ಹೊಂದಿಕೆ ಆಗದ ಮತ್ತಿತರ ತಾಂತ್ರಿಕ ಸಮಸ್ಯೆಗಳಿಂದ ಬಾಕಿ ಉಳಿದಿದೆ. ತಿದ್ದುಪಡಿಗೆ ಅವಕಾಶ ದೊರೆತ ಕೂಡಲೇ ಅದನ್ನು ಸರಿಪಡಿಸಲಾಗುವುದು ಎಂದು ಅಧಿಕಾರಿಗಳು ಹೇಳಿದರು.

ಆರಂಭದಲ್ಲಿ ಖಾತೆ ಸಂಖ್ಯೆಯ ಸ್ಥಳದಲ್ಲಿ ಸೊನ್ನೆ ಹಾಕಲು ಹೇಳಿದ ಕಾರಣ ಮತ್ತು ಇಲಾಖೆಯ ಕೆಲವು ತಪ್ಪು ನಿರ್ಧಾರದಿಂದ ರೈತರಿಗೆ ಹಣ ಬಾರದೆ ಸಮಸ್ಯೆ ಆಗಿದೆ ಎಂದು ಸದಸ್ಯ ರಾಧಾಕೃಷ್ಣ ಬೊಳ್ಳುರು ಹೇಳಿದರು.

ಸಾಲ ಮನ್ನಾ ಪಾವತಿಯಲ್ಲಿ ಹಲವು ನ್ಯೂನತೆಗಳು ಇದೆ ಎಂದು ಸದಸ್ಯರಾದ ಅಶೋಕ್ ನೆಕ್ರಾಜೆ, ಉದಯ ಕೊಪ್ಪಡ್ಕ ಹೇಳಿದರು. ಸಮಸ್ಯೆಯನ್ನು ಕೂಡಲೇ ಸರಿಪಡಿಸಿದರೆ ಮಾತ್ರ ಹಣ ಬರಬಹುದು.

ಬಜೆಟ್ ಕಳೆದ ಮೇಲೆ ಮತ್ತೆ ಹಣ ಬರುವ ಸಾಧ್ಯತೆ ಇಲ್ಲ ಆದುದರಿಂದ ಕೂಡಲೇ ಸರಿಪಡಿಸಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ ಹೇಳಿದರು. ಈ ಕುರಿತು ಬಹಳ ಹೊತ್ತು ಚರ್ಚೆ ನಡೆಯಿತು. 15 ದಿವಸದಲ್ಲಿ ಅರ್ಹರಾದ ಉಳಿದ ಎಲ್ಲಾ ರೈತರ ಖಾತೆಗೂ ಸಾಲಮನ್ನಾ ಹಣ ಪಾವತಿ ಮಾಡಲು ಕ್ರಮ ಕೈಗೊಳ್ಳಿ ಎಂದು ಅಧ್ಯಕ್ಷ ಚನಿಯ ಕಲ್ತಡ್ಕ ಸೂಚಿಸಿದರು.

ನಗರದ ಚರಂಡಿ ವ್ಯವಸ್ಥೆ- ನಗರಾಭಿವೃದ್ಧಿ ಸಚಿವರಿಗೆ ದೂರು:

ಸುಳ್ಯ ನಗರದಲ್ಲಿ ಸರಿಯಾಗಿ ಒಳಚರಂಡಿ ಮತ್ತು ಚರಂಡಿ ವ್ಯವಸ್ಥೆ ಇಲ್ಲದೆ ಕೊಳಚೆ ನೀರು ಹರಿಯದೆ ನಗರದಲ್ಲಿ ಕೊಳಚೆ ಸಮಸ್ಯೆ ಉಲ್ಬಣಗೊಂಡಿದೆ ಈ ಕುರಿತು ರಾಜ್ಯ ನಗರಾಭಿವೃದ್ಧಿ ಸಚಿವರಿಗೆ ಲಿಖಿತ ದೂರು ನೀಡುವುದಾಗಿ ಸದಸ್ಯ ರಾಧಾಕೃಷ್ಣ ಬೊಳ್ಳೂರು ಹೇಳಿದರು. ನಗರದ ಹಾಸ್ಟೇಲ್‍ಗಳ, ಆಸ್ಪತ್ರೆಗಳ ಕೊಳಚೆ ನೀರು ಸರಿಯಾಗಿ ಹರಿಯುತ್ತಿಲ್ಲ. ಚರಂಡಿ ವ್ಯವಸ್ಥೆ ಇಲ್ಲದೆ ಕೊಳಚೆ ನೀರು ರಸ್ತೆಗಳಲ್ಲಿ ಹರಿಯುತಿದೆ ಮತ್ತು ಪಯಸ್ವಿನಿ ನದಿಯ ಒಡಲು ಸೇರುತಿದೆ. ಕೋಟ್ಯಾಂತರ ರೂ ವ್ಯಯಿಸಿ ನಿರ್ಮಾಣ ಮಾಡಿದ ಒಳಚರಂಡಿ ವ್ಯವಸ್ಥೆ ವ್ಯರ್ಥವಾಗಿದೆ. ಅಲ್ಲಲ್ಲಿ ಕೊಳಚೆ ನೀರು ಸಂಗ್ರಹವಾಗಿ ರೋಗ ವಾಹಕ ಕೇಂದ್ರಗಳಾಗುತಿದೆ ಎಂದು ಹೇಳಿದ ಅವರು ಈ ಕುರಿತು ನಗರ ಪಂಚಾಯತ್ ಮುಖ್ಯಾಧಿಕಾರಿಯನ್ನು ಪ್ರಶ್ನಿಸಿದರು. ಬಹಳ ಹೊತ್ತು ಈ ಕುರಿತು ಚರ್ಚೆ, ವಾಗ್ವಾದ ನಡೆಯಿತು. ನಗರದಲ್ಲಿ ಚರಂಡಿ, ಒಳಚರಂಡಿ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸುವುದು ಸ್ಥಳೀಯಾಡಳಿತಗಳ ಜವಾಬ್ದಾರಿ ಎಂದು ಸದಸ್ಯರು ಹೇಳಿದರು. ನಗರದ ಸ್ವಚ್ಛತೆಗೆ ಆದ್ಯತೆ ನೀಡುವಂತೆ ತಾ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೂಚಿಸಿದರು. ನಗರದ ನೈರ್ಮಲ್ಯ ಹದಗೆಟ್ಟಿರುವ ಬಗ್ಗೆ ಸಚಿವರ ಗಮನಕ್ಕೆ ಬರುವುದಾಗಿ ರಾಧಾಕೃಷ್ಣ ಬೊಳ್ಳೂರು ಹೇಳಿದರು.

ನಗರದ ಕಸ ಜಾಲ್ಸೂರಿಗೆ ಹಾಕಲು ವಿರೋಧ:

ನಗರದ ತ್ಯಾಜ್ಯ ಸಂಸ್ಕರಣಾ ಕೇಂದ್ರ ಜಾಲ್ಸೂರಿನಲ್ಲಿ ಮಾಡುವುದಕ್ಕೆ ಗ್ರಾಮಸ್ಥರ ವಿರೋಧ ಇದೆ. ಅಲ್ಲಿ ಕಸ ಹಾಕುವುದು ಬೇಡ ಎಂದು ಗ್ರಾಮ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ತೀರ್ಥರಾಮ ಜಾಲ್ಸೂರು ಹೇಳಿದರು. ಡಂಪಿಂಗ್ ಯಾರ್ಡ್ ಮಾಡುವುದಲ್ಲ ಅಲ್ಲಿ ಕಸವನ್ನು ವೈಜ್ಞಾನಿಕವಾಗಿ ಸಂಸ್ಕರಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಾಧಿಕಾರಿ ತಿಳಿಸಿದರು. ವೈಜ್ಞಾನಿಕವಾಗಿ ಮಾಡುವುದಿದ್ದರೆ ಬೇರೆ ಸ್ಥಳ ಯಾಕೆ. ಈಗ ಇರುವ ಕಲ್ಚರ್ಪೆಯಲ್ಲಿಯೇ ವೈಜ್ಞಾನಿಕವಾಗಿ ಕಸ ವಿಲೇವಾರಿಗೆ ಕ್ರಮ ಕೈಗೊಳ್ಳಿ ಎಂದು ಅಧ್ಯಕ್ಷರು ಸೂಚಿಸಿದರು.
ವಿವಿಧ ಸ್ಥಳಗಳಲ್ಲಿ ಅಂಬೇಡ್ಕರ್ ಭವನ ನಿರ್ಮಾಣದ ಸ್ಥಳ ಗುರುತಿಸುವಿಕೆ ವಿಳಂಬದ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ಇಂದಿರಾ ಕ್ಯಾಂಟೀನ್ ಉದ್ಘಾಟನೆಗೆ ಜನಪ್ರತಿನಿಧಿಗಳನ್ನು ಕಡೆಗಣಿಸಿದ್ದಾರೆ ಎಂದು ಕೆಲವು ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು.

ತಾ.ಪಂ.ಉಪಾಧ್ಯಕ್ಷೆ ಶುಭದಾ ಎಸ್.ರೈ, ಸ್ಥಾಯಿ ಸಮಿತಿ ಅಧ್ಯಕ್ಷೆ ಜಾಹ್ನವಿ ಕಾಂಚೋಡು, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್, ತಹಶೀಲ್ದಾರ್ ಅನಂತಶಂಕರ ಉಪಸ್ಥಿತರಿದ್ದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…

6 hours ago

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

20 hours ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

21 hours ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

1 day ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

1 day ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

2 days ago