Advertisement
Categories: Uncategorized

ಸಾಲ ಮನ್ನಾದಿಂದ 14,113 ಜನ ರೈತರಿಗೆ ಪ್ರಯೋಜನ : ಪಿ.ಸಿ.ಜಯರಾಮ

Share

ಸುಳ್ಯ: ಕೃಷಿಕರು ಸಹಕಾರಿ ಸಂಘಗಳಿಂದ ಪಡೆದ ಸಾಲದಲ್ಲಿ 1 ಲಕ್ಷ ರೂ. ಮನ್ನಾ ಮಾಡುವ ನಿಟ್ಟಿನಲ್ಲಿ ಕಾಂಗ್ರೆಸ್-ಜೆಡಿಎಸ್ ಸರಕಾರ ಸಾಲ ಮನ್ನಾ ಘೋಷಿಸಿತ್ತು. ಇದರಿಂದ ತಾಲೂಕಿನ ವಿವಿಧ ಪ್ರಾಥಮಿಕ ಸಹಕಾರಿ ಸಂಘಗಳಲ್ಲಿ ಸಾಲ ಪಡೆದ 14,113 ಜನ ರೈತರ 118 ಕೋಟಿ ಸಾಲ ಮನ್ನಾ ಆಗಲಿದೆ. ಈಗಾಗಲೇ 3,292 ರೈತರ 25 ಕೋ.18 ಲಕ್ಷ ರೂ. ಸಾಲ ಮೊತ್ತ ನೆಪ್ಟ್ ಮೂಲಕ ರೈತರ ರೂಪೇ ಖಾತೆಗೆ ವರ್ಗಾವಣೆಯಾಗಿದೆ ಎಂದು ಕಾಂಗ್ರೆಸ್ ಮುಖಂಡ, ಮಡಪ್ಪಾಡಿ ಪ್ರಾಥಮಿಕ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪಿ.ಸಿ.ಜಯರಾಮ ಹೇಳಿದ್ದಾರೆ.
ಸುಳ್ಯ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಮಾತನಾಡಿದ ಅವರು, ಸಾಲ ಮನ್ನಾದ ಹಣ ರೈತರ ಖಾತೆಗೆ ಬಂದಿದ್ದರೂ ಕೆಲವು ಸಹಕಾರಿ ಸಂಘಗಳ ವ್ಯಾಪ್ತಿಯಲ್ಲಿ ಸಾಲ ಮನ್ನಾ ಸೌಲಭ್ಯ ಬಂದಿಲ್ಲ ಎಂದು ಬಿಜೆಪಿ ಸುಳ್ಳು ಮಾಹಿತಿ ಮೂಲಕ ಅಪಪ್ರಚಾರ ನಡೆಸುತ್ತಿದೆ ಎಂದು ಅವರು ಟೀಕಿಸಿದರು.
ಹಿಂದಿನ ಸಿದ್ಧರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರಕಾರವು ಕೂಡಾ ಕೃಷಿಕರ ಪರ ಬಹಳಷ್ಟು ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ಅವಧಿಯಲ್ಲಿ ಅವರು ಎರಡು ಬಾರಿ ಸಾಲ ಮನ್ನಾ ಮಾಡಿದ್ದರು. ಅಧಿಕಾರಕ್ಕೆ ಬಂದ ಪ್ರಥಮ ವರ್ಷದಲ್ಲಿ ಹಿಂದಿನ ಸರಕಾರ ಘೋಷಿಸಿದ ತಲಾ ರೂ.25 ಸಾವಿರ ಸಾಲ ಮನ್ನಾ ವಿತರಿಸಿದ್ದು, ಎರಡನೇ ಬಾರಿಗೆ ತಾಲೂಕಿನ 13,145 ರೈತ ಸದಸ್ಯರ 63 ಕೋಟಿ 15 ಲಕ್ಷ ರೂ ಮನ್ನಾ ಮಾಡಿದ್ದಾರೆ. ಅಲ್ಲದೇ ಅಡಿಕೆ ಕೊಳೆರೋಗಕ್ಕ ಪರಿಹಾರವನ್ನ್ನು ನೀಡಿದ್ದಾರೆ ಎಂದು ವಿವರ ನೀಡಿದರು.
ಕೊಳೆರೋಗ ಪರಿಹಾರ ಧನವು ರೈತರಿಗೆ ಸಿಕ್ಕಿದೆ. ಬಾಕಿ ಉಳಿದವರಿಗೆ ಸಿಗಲಿದೆ. ಗರಿಷ್ಟ 35 ಸಾವಿರ ರೂ. ತನಕ ಪರಿಹಾರ ಸಿಕ್ಕಿದೆ. ಅರ್ಜಿ ಕೊಟ್ಟರೆ ಪರಿಹಾರ ಸಿಗದು ಎಂದು ಬಿಜೆಪಿಯವರು ಕೆಲ ರೈತರನ್ನು ಅರ್ಜಿ ಸಲ್ಲಿಸದಂತೆ ದಿಕ್ಕು ತಪ್ಪಿಸಿದ್ದಾರೆ ಎಂದು ಅವರು ಆರೋಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
Team the rural mirror

Published by
Team the rural mirror

Recent Posts

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

3 hours ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

10 hours ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

10 hours ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

10 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

19 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

19 hours ago