Advertisement
Categories: Uncategorized

ಸಾಲ ಮನ್ನಾದಿಂದ 14,113 ಜನ ರೈತರಿಗೆ ಪ್ರಯೋಜನ : ಪಿ.ಸಿ.ಜಯರಾಮ

Share

ಸುಳ್ಯ: ಕೃಷಿಕರು ಸಹಕಾರಿ ಸಂಘಗಳಿಂದ ಪಡೆದ ಸಾಲದಲ್ಲಿ 1 ಲಕ್ಷ ರೂ. ಮನ್ನಾ ಮಾಡುವ ನಿಟ್ಟಿನಲ್ಲಿ ಕಾಂಗ್ರೆಸ್-ಜೆಡಿಎಸ್ ಸರಕಾರ ಸಾಲ ಮನ್ನಾ ಘೋಷಿಸಿತ್ತು. ಇದರಿಂದ ತಾಲೂಕಿನ ವಿವಿಧ ಪ್ರಾಥಮಿಕ ಸಹಕಾರಿ ಸಂಘಗಳಲ್ಲಿ ಸಾಲ ಪಡೆದ 14,113 ಜನ ರೈತರ 118 ಕೋಟಿ ಸಾಲ ಮನ್ನಾ ಆಗಲಿದೆ. ಈಗಾಗಲೇ 3,292 ರೈತರ 25 ಕೋ.18 ಲಕ್ಷ ರೂ. ಸಾಲ ಮೊತ್ತ ನೆಪ್ಟ್ ಮೂಲಕ ರೈತರ ರೂಪೇ ಖಾತೆಗೆ ವರ್ಗಾವಣೆಯಾಗಿದೆ ಎಂದು ಕಾಂಗ್ರೆಸ್ ಮುಖಂಡ, ಮಡಪ್ಪಾಡಿ ಪ್ರಾಥಮಿಕ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪಿ.ಸಿ.ಜಯರಾಮ ಹೇಳಿದ್ದಾರೆ.
ಸುಳ್ಯ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಮಾತನಾಡಿದ ಅವರು, ಸಾಲ ಮನ್ನಾದ ಹಣ ರೈತರ ಖಾತೆಗೆ ಬಂದಿದ್ದರೂ ಕೆಲವು ಸಹಕಾರಿ ಸಂಘಗಳ ವ್ಯಾಪ್ತಿಯಲ್ಲಿ ಸಾಲ ಮನ್ನಾ ಸೌಲಭ್ಯ ಬಂದಿಲ್ಲ ಎಂದು ಬಿಜೆಪಿ ಸುಳ್ಳು ಮಾಹಿತಿ ಮೂಲಕ ಅಪಪ್ರಚಾರ ನಡೆಸುತ್ತಿದೆ ಎಂದು ಅವರು ಟೀಕಿಸಿದರು.
ಹಿಂದಿನ ಸಿದ್ಧರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರಕಾರವು ಕೂಡಾ ಕೃಷಿಕರ ಪರ ಬಹಳಷ್ಟು ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ಅವಧಿಯಲ್ಲಿ ಅವರು ಎರಡು ಬಾರಿ ಸಾಲ ಮನ್ನಾ ಮಾಡಿದ್ದರು. ಅಧಿಕಾರಕ್ಕೆ ಬಂದ ಪ್ರಥಮ ವರ್ಷದಲ್ಲಿ ಹಿಂದಿನ ಸರಕಾರ ಘೋಷಿಸಿದ ತಲಾ ರೂ.25 ಸಾವಿರ ಸಾಲ ಮನ್ನಾ ವಿತರಿಸಿದ್ದು, ಎರಡನೇ ಬಾರಿಗೆ ತಾಲೂಕಿನ 13,145 ರೈತ ಸದಸ್ಯರ 63 ಕೋಟಿ 15 ಲಕ್ಷ ರೂ ಮನ್ನಾ ಮಾಡಿದ್ದಾರೆ. ಅಲ್ಲದೇ ಅಡಿಕೆ ಕೊಳೆರೋಗಕ್ಕ ಪರಿಹಾರವನ್ನ್ನು ನೀಡಿದ್ದಾರೆ ಎಂದು ವಿವರ ನೀಡಿದರು.
ಕೊಳೆರೋಗ ಪರಿಹಾರ ಧನವು ರೈತರಿಗೆ ಸಿಕ್ಕಿದೆ. ಬಾಕಿ ಉಳಿದವರಿಗೆ ಸಿಗಲಿದೆ. ಗರಿಷ್ಟ 35 ಸಾವಿರ ರೂ. ತನಕ ಪರಿಹಾರ ಸಿಕ್ಕಿದೆ. ಅರ್ಜಿ ಕೊಟ್ಟರೆ ಪರಿಹಾರ ಸಿಗದು ಎಂದು ಬಿಜೆಪಿಯವರು ಕೆಲ ರೈತರನ್ನು ಅರ್ಜಿ ಸಲ್ಲಿಸದಂತೆ ದಿಕ್ಕು ತಪ್ಪಿಸಿದ್ದಾರೆ ಎಂದು ಅವರು ಆರೋಪಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Team the rural mirror

Published by
Team the rural mirror

Recent Posts

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

4 hours ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

5 hours ago

ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…

21 hours ago

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

2 days ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

2 days ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

2 days ago