Advertisement
Categories: Uncategorized

ಸಾಲ ಮನ್ನಾದಿಂದ 14,113 ಜನ ರೈತರಿಗೆ ಪ್ರಯೋಜನ : ಪಿ.ಸಿ.ಜಯರಾಮ

Share

ಸುಳ್ಯ: ಕೃಷಿಕರು ಸಹಕಾರಿ ಸಂಘಗಳಿಂದ ಪಡೆದ ಸಾಲದಲ್ಲಿ 1 ಲಕ್ಷ ರೂ. ಮನ್ನಾ ಮಾಡುವ ನಿಟ್ಟಿನಲ್ಲಿ ಕಾಂಗ್ರೆಸ್-ಜೆಡಿಎಸ್ ಸರಕಾರ ಸಾಲ ಮನ್ನಾ ಘೋಷಿಸಿತ್ತು. ಇದರಿಂದ ತಾಲೂಕಿನ ವಿವಿಧ ಪ್ರಾಥಮಿಕ ಸಹಕಾರಿ ಸಂಘಗಳಲ್ಲಿ ಸಾಲ ಪಡೆದ 14,113 ಜನ ರೈತರ 118 ಕೋಟಿ ಸಾಲ ಮನ್ನಾ ಆಗಲಿದೆ. ಈಗಾಗಲೇ 3,292 ರೈತರ 25 ಕೋ.18 ಲಕ್ಷ ರೂ. ಸಾಲ ಮೊತ್ತ ನೆಪ್ಟ್ ಮೂಲಕ ರೈತರ ರೂಪೇ ಖಾತೆಗೆ ವರ್ಗಾವಣೆಯಾಗಿದೆ ಎಂದು ಕಾಂಗ್ರೆಸ್ ಮುಖಂಡ, ಮಡಪ್ಪಾಡಿ ಪ್ರಾಥಮಿಕ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪಿ.ಸಿ.ಜಯರಾಮ ಹೇಳಿದ್ದಾರೆ.
ಸುಳ್ಯ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಮಾತನಾಡಿದ ಅವರು, ಸಾಲ ಮನ್ನಾದ ಹಣ ರೈತರ ಖಾತೆಗೆ ಬಂದಿದ್ದರೂ ಕೆಲವು ಸಹಕಾರಿ ಸಂಘಗಳ ವ್ಯಾಪ್ತಿಯಲ್ಲಿ ಸಾಲ ಮನ್ನಾ ಸೌಲಭ್ಯ ಬಂದಿಲ್ಲ ಎಂದು ಬಿಜೆಪಿ ಸುಳ್ಳು ಮಾಹಿತಿ ಮೂಲಕ ಅಪಪ್ರಚಾರ ನಡೆಸುತ್ತಿದೆ ಎಂದು ಅವರು ಟೀಕಿಸಿದರು.
ಹಿಂದಿನ ಸಿದ್ಧರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರಕಾರವು ಕೂಡಾ ಕೃಷಿಕರ ಪರ ಬಹಳಷ್ಟು ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ಅವಧಿಯಲ್ಲಿ ಅವರು ಎರಡು ಬಾರಿ ಸಾಲ ಮನ್ನಾ ಮಾಡಿದ್ದರು. ಅಧಿಕಾರಕ್ಕೆ ಬಂದ ಪ್ರಥಮ ವರ್ಷದಲ್ಲಿ ಹಿಂದಿನ ಸರಕಾರ ಘೋಷಿಸಿದ ತಲಾ ರೂ.25 ಸಾವಿರ ಸಾಲ ಮನ್ನಾ ವಿತರಿಸಿದ್ದು, ಎರಡನೇ ಬಾರಿಗೆ ತಾಲೂಕಿನ 13,145 ರೈತ ಸದಸ್ಯರ 63 ಕೋಟಿ 15 ಲಕ್ಷ ರೂ ಮನ್ನಾ ಮಾಡಿದ್ದಾರೆ. ಅಲ್ಲದೇ ಅಡಿಕೆ ಕೊಳೆರೋಗಕ್ಕ ಪರಿಹಾರವನ್ನ್ನು ನೀಡಿದ್ದಾರೆ ಎಂದು ವಿವರ ನೀಡಿದರು.
ಕೊಳೆರೋಗ ಪರಿಹಾರ ಧನವು ರೈತರಿಗೆ ಸಿಕ್ಕಿದೆ. ಬಾಕಿ ಉಳಿದವರಿಗೆ ಸಿಗಲಿದೆ. ಗರಿಷ್ಟ 35 ಸಾವಿರ ರೂ. ತನಕ ಪರಿಹಾರ ಸಿಕ್ಕಿದೆ. ಅರ್ಜಿ ಕೊಟ್ಟರೆ ಪರಿಹಾರ ಸಿಗದು ಎಂದು ಬಿಜೆಪಿಯವರು ಕೆಲ ರೈತರನ್ನು ಅರ್ಜಿ ಸಲ್ಲಿಸದಂತೆ ದಿಕ್ಕು ತಪ್ಪಿಸಿದ್ದಾರೆ ಎಂದು ಅವರು ಆರೋಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Team the rural mirror

Published by
Team the rural mirror

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

52 minutes ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

1 hour ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

17 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago