ಸುಳ್ಯ :ಈ ಹಿಂದಿನ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಘೋಷಿಸಿದ ಸಾಲ ಮನ್ನಾ ಯೋಜನೆ ಅನುಷ್ಠಾನದಲ್ಲಿ ಈಗಿನ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸುಳ್ಯ ಕಾಂಗ್ರೆಸ್ ಆರೋಪಿಸಿದೆ. ಒಂದೆಡೆ ಅಧಿಕಾರಿಗಳು ಸಾಲ ಮನ್ನಾ ಯೋಜನೆಗೆ ಹಣ ಬಿಡುಗಡೆ ಮಾಡಲಾಗಿದೆ ಎಂದು ಹೇಳಿಕೆ ನೀಡುತ್ತಿದ್ದರೆ ಇನ್ನೊಂದಡೆ ಜಿಲ್ಲೆಯಲ್ಲಿ ಶೇಕಡಾ 75 ರಷ್ಟು ರೈತರಿಗೂ ಇದು ತಲುಪಿಲ್ಲ. ಈ ಬಗ್ಗೆ ಜಿಲ್ಲೆಯ ಜನಪ್ರತಿನಿಧಿಗಳು ಮೌನ ವಹಿಸಿರುವುದು ದುರದೃಷ್ಟಕರ. ಶೀಘ್ರದಲ್ಲೇ ರೈತರ ಖಾತೆಗಳಿಗೆ ಹಣ ಜಮೆ ಮಾಡಬೇಕು. ಇಲ್ಲದೇ ಹೋದಲ್ಲಿ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯನ್.ಜಯಪ್ರಕಾಶ್ ರೈ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಧನಂಜಯ ಅಡ್ಪಂಗಾಯ, ಸುಳ್ಯ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ರಾಜಾರಾಮ್ ಭಟ್ ಬೆಟ್ಟ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಫಸಲ್ ಬೀಮಾ ಯೋಜನೆಯೂ ಜನರನ್ನು ತಲುಪುತಿಲ್ಲ.2018ರಲ್ಲಿ ಕೇಂದ್ರ ಸರ್ಕಾರದ ಫಸಲ್ ಬೀಮಾ ಯೋಜನೆಯಡಿ ಪ್ರೀಮಿಯಂ ಪಾವತಿಸಿದ ರೈತರಿಗೆ, ವಿಪರೀತ ಮಳೆಯಿಂದಾಗಿ ಫಸಲು ನಷ್ಟ ವಾಗಿದ್ದರೂ ಈ ತನಕ ವಿಮಾ ಪರಿಹಾರ ದೊರೆತಿಲ್ಲ ಎಂದು ಅವರು ಹೇಳಿದ್ದಾರೆ.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…