ಸುಳ್ಯ :ಈ ಹಿಂದಿನ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಘೋಷಿಸಿದ ಸಾಲ ಮನ್ನಾ ಯೋಜನೆ ಅನುಷ್ಠಾನದಲ್ಲಿ ಈಗಿನ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸುಳ್ಯ ಕಾಂಗ್ರೆಸ್ ಆರೋಪಿಸಿದೆ. ಒಂದೆಡೆ ಅಧಿಕಾರಿಗಳು ಸಾಲ ಮನ್ನಾ ಯೋಜನೆಗೆ ಹಣ ಬಿಡುಗಡೆ ಮಾಡಲಾಗಿದೆ ಎಂದು ಹೇಳಿಕೆ ನೀಡುತ್ತಿದ್ದರೆ ಇನ್ನೊಂದಡೆ ಜಿಲ್ಲೆಯಲ್ಲಿ ಶೇಕಡಾ 75 ರಷ್ಟು ರೈತರಿಗೂ ಇದು ತಲುಪಿಲ್ಲ. ಈ ಬಗ್ಗೆ ಜಿಲ್ಲೆಯ ಜನಪ್ರತಿನಿಧಿಗಳು ಮೌನ ವಹಿಸಿರುವುದು ದುರದೃಷ್ಟಕರ. ಶೀಘ್ರದಲ್ಲೇ ರೈತರ ಖಾತೆಗಳಿಗೆ ಹಣ ಜಮೆ ಮಾಡಬೇಕು. ಇಲ್ಲದೇ ಹೋದಲ್ಲಿ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯನ್.ಜಯಪ್ರಕಾಶ್ ರೈ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಧನಂಜಯ ಅಡ್ಪಂಗಾಯ, ಸುಳ್ಯ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ರಾಜಾರಾಮ್ ಭಟ್ ಬೆಟ್ಟ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಫಸಲ್ ಬೀಮಾ ಯೋಜನೆಯೂ ಜನರನ್ನು ತಲುಪುತಿಲ್ಲ.2018ರಲ್ಲಿ ಕೇಂದ್ರ ಸರ್ಕಾರದ ಫಸಲ್ ಬೀಮಾ ಯೋಜನೆಯಡಿ ಪ್ರೀಮಿಯಂ ಪಾವತಿಸಿದ ರೈತರಿಗೆ, ವಿಪರೀತ ಮಳೆಯಿಂದಾಗಿ ಫಸಲು ನಷ್ಟ ವಾಗಿದ್ದರೂ ಈ ತನಕ ವಿಮಾ ಪರಿಹಾರ ದೊರೆತಿಲ್ಲ ಎಂದು ಅವರು ಹೇಳಿದ್ದಾರೆ.
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…
ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…
ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…
ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…
ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ…
ಜುಲೈ ಮೊದಲ ವಾರದ ಉತ್ತಮ ಮಳೆಯಿಂದ ದೇಶದ ಮಳೆ ಕೊರತೆ 12%ಕ್ಕೆ ಇಳಿದಿದೆ.…