Advertisement
MIRROR FOCUS

ಸಾವಿರ ಜನರಿಂದ ಸರಳ ಜೀವನದ ಪ್ರತಿಜ್ಞೆ…..

Share

ಪ್ರವಾಹ ಬಂದಾಗ, ರಾಜ್ಯದಲ್ಲಿ ಸಂಕಷ್ಟ ಎದುರಾದಾಗ ಸರಳ ಕಾರ್ಯಕ್ರಮ , ಸರಳ ರೀತಿಯ ಆಚರಣೆಗಳು ನಡೆಯುತ್ತವೆ. ಅಂತಹದ್ದೇ ಒಂದು ಕಾರ್ಯಕ್ಕೆ ಒಂದು ಸಾವಿರ ಮಂದಿ ನಿರ್ಧಾರ ಕೈಗೊಂಡಿದ್ದಾರೆ. ಅದ್ದೂರಿ- ಆಡಂಬರದ ಜೀವನಕ್ಕೆ ವಿದಾಯ ಹೇಳಿದ್ದಾರೆ. ದುಶ್ಚಟ- ವ್ಯಸನ, ಜೀವನಕ್ಕೆ ಅನಿವಾರ್ಯವಲ್ಲ ಎನ್ನುವ ವಸ್ತುಗಳನ್ನೂ  ತ್ಯಜಿಸಿದ್ದಾರೆ. ಈ ಮಾದರಿ ಕಾರ್ಯ ಇನ್ನಷ್ಟು ಮಂದಿಗೆ ಪ್ರೇರಣೆಯಾಗಲಿ, ಬದುಕಿನ ಪೂರ್ತಿ ಈ ಕಾರ್ಯ ಅನುಷ್ಠಾನವಾಗಲಿ ಎಂಬ ಆಶಯದೊಂದಿಗೆ ಇಂದಿನ ಫೋಕಸ್….


ಶ್ರೀರಾಮಚಂದ್ರಾಪುರ ಮಠದ ಸಾವಿರಕ್ಕೂ ಹೆಚ್ಚು ಶಿಷ್ಯಭಕ್ತರು ಅದ್ದೂರಿ- ಆಡಂಬರದ ಜೀವನಕ್ಕೆ ವಿದಾಯ ಹೇಳಿ  ಸರಳ ಜೀವನದ ಪ್ರತಿಜ್ಞೆ ಕೈಗೊಂಡರು.ತಕ್ಷಶಿಲಾ ವಿಶ್ವವಿದ್ಯಾನಿಲಯದ ಪುನರವತರಣದ ಮಹಾಸಂಕಲ್ಪವಾಗಿ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯವರು ಅನುಗ್ರಹಿಸುತ್ತಿರುವ ಧಾರಾ ರಾಮಾಯಣದ ಅಂಗವಾಗಿ ಬೆಂಗಳೂರಿನ ಗಿರಿನಗರ ರಾಮಾಶ್ರಮದಲ್ಲಿ ನಡೆದ ತ್ಯಾಗ ಪರ್ವದಲ್ಲಿ ನೂರಾರು ಮಂದಿ ದುಶ್ಚಟ- ವ್ಯಸನ, ಜೀವನಕ್ಕೆ ಅನಿವಾರ್ಯವಲ್ಲ ಎನ್ನುವ ವಸ್ತುಗಳನ್ನು ತ್ಯಜಿಸಿದರು.

ಧಾರಾ ರಾಮಾಯಣ ಪ್ರವಚನವು ಪಾದುಕಾ ಪಟ್ಟಾಭಿಷೇಕ ಘಟ್ಟ ತಲುಪಿದ ಹಿನ್ನೆಲೆಯಲ್ಲಿ, ಶ್ರೀರಾಮ ಹಾಗೂ ಭರತನ ರಾಜ್ಯ ತ್ಯಾಗವನ್ನು ತ್ಯಾಗಪರ್ವವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಶ್ರೀಗಳು, ಶ್ರೀರಾಮ ಹಾಗೂ ಭರತರು ಬದುಕಿ ತೋರಿಸಿದ ತ್ಯಾಗಜೀವನ ಹಾಗೂ ಸರಳ ಜೀವನ, ಸಮಾಜದ ಪ್ರತಿಯೊಬ್ಬರೂ ಅನುಸರಿಸಬಹುದಾದ ಆದರ್ಶ ಎಂದು ಹೇಳಿದರು.ಗುರುಗಳ ಜೋಳಿಗೆಗೆ ವ್ಯಸನಗಳನ್ನು ಹಾಕಿ; ಬಿಟ್ಟರೆ ನಷ್ಟವಿಲ್ಲ ಎನ್ನಬಹುದಾದ ವಸ್ತುಗಳನ್ನು ತ್ಯಜಿಸಿ, ದುಂದುವೆಚ್ಚ ಬಿಡಿ. ಅದ್ದೂರಿ- ಆಡಂಬರಕ್ಕೆ ಕಡಿವಾಣ ಹಾಕಿ ಸರಳ ಜೀವನಕ್ಕೆ ನಾಂದಿ ಹಾಡಿದಾಗ ಇಡೀ ದೇಶ ರಾಮರಾಜ್ಯವಾಗುತ್ತದೆ ಎಂದು ಬಣ್ಣಿಸಿದರು.

ನಮ್ಮ ಕಂಟಕ, ದುಃಖ, ಕ್ಲೇಶಗಳನ್ನು ಮಹಾತ್ಮರು ಆವಾಹಿಸಿಕೊಳ್ಳುವುದರಿಂದ ಅವರು ಸಂಕಷ್ಟಗಳನ್ನು ಎದುರಿಸಬೇಕಾಗುತ್ತದೆ. ರಾಮ- ಭರತರನ್ನು ಕೂಡಾ ಇಂಥ ಸಂಕಷ್ಟಗಳು ಬಿಡಲಿಲ್ಲ. ಇಷ್ಟಾಗಿಯೂ ತಮ್ಮ ಆದರ್ಶವನ್ನು ಬಿಡದೇ ಸಮಾಜಕ್ಕೆ ತ್ಯಾಗದ ದೊಡ್ಡ ಸಂದೇಶ ನೀಡಿದರು ಎಂದು ಅಭಿಪ್ರಾಯಪಟ್ಟರು.ರಾಮನಿಗೂ ತಕ್ಷಶಿಲಾ ವಿಶ್ವವಿದ್ಯಾಲಯಕ್ಕೂ ಅವಿನಾಭಾವ ಸಂಬಂಧ ಇದೆ. ತಕ್ಷಶಿಲೆ ವಿವಿ ಮೂಲಕ ಭರತ ಸಂಸ್ಕೃತಿ ಮತ್ತೆ ತಲೆ ಎತ್ತಿ ನಿಂತಿತು. ಇದೀಗ ಅಂಥ ತಕ್ಷಶಿಲಾ ವಿವಿಯ ಪುನರವತರಣದ ಕಾಲ ಮತ್ತೆ ಸನ್ನಿಹಿತವಾಗಿದೆ. ಉದ್ದೇಶಿತ ವಿವಿ ಇಂಥ ನೂರಾರು- ಸಾವಿರಾರು ಚಲಿಸುವ ವಿಶ್ವವಿದ್ಯಾನಿಲಯಗಳನ್ನು ರೂಪಿಸಿ ಭಾರತವನ್ನು ರಾಮರಾಜ್ಯವಾಗಿ ಪರಿವರ್ತಿಸಲು ನಾಂದಿ ಹಾಡಲಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿಸಿ ಆಹಾರ ಪಾರ್ಸೆಲ್‌ಗೆ ಪ್ಲಾಸ್ಟಿಕ್‌, ಪತ್ರಿಕೆ ನಿಷೇಧ…! : ಸಾರ್ವಜನಿಕ ಧೂಮಪಾನಕ್ಕೆ ₹1000 ದಂಡ ಎಚ್ಚರಿಕೆ

ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್‌ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…

5 hours ago

ಅಡಿಕೆ ಬೆಳೆಗಾರರೇ ಗಾಬರಿ ಬೇಡ | ಮಾರುಕಟ್ಟೆಯ ‘ತಾತ್ಕಾಲಿಕ ತಿದ್ದುಪಡಿ’ಯ ಹಿಂದಿದೆ ಆರ್ಥಿಕ ಲೆಕ್ಕಾಚಾರ

ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…

7 hours ago

ಕಾಂಪೌಂಡ್ ರಬ್ಬರ್ ಆಮದು ಹೆಚ್ಚಳ : 10 ವರ್ಷಗಳ ವಿವರ ಲೋಕಸಭೆಯಲ್ಲಿ ಬಹಿರಂಗ

ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…

19 hours ago

ದಾಖಲೆಯ ಆಹಾರಧಾನ್ಯ ಉತ್ಪಾದನೆ | 10 ವರ್ಷಗಳಲ್ಲಿ 357 ಮಿಲಿಯನ್ ಟನ್

ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…

19 hours ago

ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ

ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…

1 day ago

ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ

ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…

1 day ago