MIRROR FOCUS

ಸಾವಿರ ಜನರಿಂದ ಸರಳ ಜೀವನದ ಪ್ರತಿಜ್ಞೆ…..

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪ್ರವಾಹ ಬಂದಾಗ, ರಾಜ್ಯದಲ್ಲಿ ಸಂಕಷ್ಟ ಎದುರಾದಾಗ ಸರಳ ಕಾರ್ಯಕ್ರಮ , ಸರಳ ರೀತಿಯ ಆಚರಣೆಗಳು ನಡೆಯುತ್ತವೆ. ಅಂತಹದ್ದೇ ಒಂದು ಕಾರ್ಯಕ್ಕೆ ಒಂದು ಸಾವಿರ ಮಂದಿ ನಿರ್ಧಾರ ಕೈಗೊಂಡಿದ್ದಾರೆ. ಅದ್ದೂರಿ- ಆಡಂಬರದ ಜೀವನಕ್ಕೆ ವಿದಾಯ ಹೇಳಿದ್ದಾರೆ. ದುಶ್ಚಟ- ವ್ಯಸನ, ಜೀವನಕ್ಕೆ ಅನಿವಾರ್ಯವಲ್ಲ ಎನ್ನುವ ವಸ್ತುಗಳನ್ನೂ  ತ್ಯಜಿಸಿದ್ದಾರೆ. ಈ ಮಾದರಿ ಕಾರ್ಯ ಇನ್ನಷ್ಟು ಮಂದಿಗೆ ಪ್ರೇರಣೆಯಾಗಲಿ, ಬದುಕಿನ ಪೂರ್ತಿ ಈ ಕಾರ್ಯ ಅನುಷ್ಠಾನವಾಗಲಿ ಎಂಬ ಆಶಯದೊಂದಿಗೆ ಇಂದಿನ ಫೋಕಸ್….

Advertisement

ಶ್ರೀರಾಮಚಂದ್ರಾಪುರ ಮಠದ ಸಾವಿರಕ್ಕೂ ಹೆಚ್ಚು ಶಿಷ್ಯಭಕ್ತರು ಅದ್ದೂರಿ- ಆಡಂಬರದ ಜೀವನಕ್ಕೆ ವಿದಾಯ ಹೇಳಿ  ಸರಳ ಜೀವನದ ಪ್ರತಿಜ್ಞೆ ಕೈಗೊಂಡರು.ತಕ್ಷಶಿಲಾ ವಿಶ್ವವಿದ್ಯಾನಿಲಯದ ಪುನರವತರಣದ ಮಹಾಸಂಕಲ್ಪವಾಗಿ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯವರು ಅನುಗ್ರಹಿಸುತ್ತಿರುವ ಧಾರಾ ರಾಮಾಯಣದ ಅಂಗವಾಗಿ ಬೆಂಗಳೂರಿನ ಗಿರಿನಗರ ರಾಮಾಶ್ರಮದಲ್ಲಿ ನಡೆದ ತ್ಯಾಗ ಪರ್ವದಲ್ಲಿ ನೂರಾರು ಮಂದಿ ದುಶ್ಚಟ- ವ್ಯಸನ, ಜೀವನಕ್ಕೆ ಅನಿವಾರ್ಯವಲ್ಲ ಎನ್ನುವ ವಸ್ತುಗಳನ್ನು ತ್ಯಜಿಸಿದರು.

ಧಾರಾ ರಾಮಾಯಣ ಪ್ರವಚನವು ಪಾದುಕಾ ಪಟ್ಟಾಭಿಷೇಕ ಘಟ್ಟ ತಲುಪಿದ ಹಿನ್ನೆಲೆಯಲ್ಲಿ, ಶ್ರೀರಾಮ ಹಾಗೂ ಭರತನ ರಾಜ್ಯ ತ್ಯಾಗವನ್ನು ತ್ಯಾಗಪರ್ವವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಶ್ರೀಗಳು, ಶ್ರೀರಾಮ ಹಾಗೂ ಭರತರು ಬದುಕಿ ತೋರಿಸಿದ ತ್ಯಾಗಜೀವನ ಹಾಗೂ ಸರಳ ಜೀವನ, ಸಮಾಜದ ಪ್ರತಿಯೊಬ್ಬರೂ ಅನುಸರಿಸಬಹುದಾದ ಆದರ್ಶ ಎಂದು ಹೇಳಿದರು.ಗುರುಗಳ ಜೋಳಿಗೆಗೆ ವ್ಯಸನಗಳನ್ನು ಹಾಕಿ; ಬಿಟ್ಟರೆ ನಷ್ಟವಿಲ್ಲ ಎನ್ನಬಹುದಾದ ವಸ್ತುಗಳನ್ನು ತ್ಯಜಿಸಿ, ದುಂದುವೆಚ್ಚ ಬಿಡಿ. ಅದ್ದೂರಿ- ಆಡಂಬರಕ್ಕೆ ಕಡಿವಾಣ ಹಾಕಿ ಸರಳ ಜೀವನಕ್ಕೆ ನಾಂದಿ ಹಾಡಿದಾಗ ಇಡೀ ದೇಶ ರಾಮರಾಜ್ಯವಾಗುತ್ತದೆ ಎಂದು ಬಣ್ಣಿಸಿದರು.

ನಮ್ಮ ಕಂಟಕ, ದುಃಖ, ಕ್ಲೇಶಗಳನ್ನು ಮಹಾತ್ಮರು ಆವಾಹಿಸಿಕೊಳ್ಳುವುದರಿಂದ ಅವರು ಸಂಕಷ್ಟಗಳನ್ನು ಎದುರಿಸಬೇಕಾಗುತ್ತದೆ. ರಾಮ- ಭರತರನ್ನು ಕೂಡಾ ಇಂಥ ಸಂಕಷ್ಟಗಳು ಬಿಡಲಿಲ್ಲ. ಇಷ್ಟಾಗಿಯೂ ತಮ್ಮ ಆದರ್ಶವನ್ನು ಬಿಡದೇ ಸಮಾಜಕ್ಕೆ ತ್ಯಾಗದ ದೊಡ್ಡ ಸಂದೇಶ ನೀಡಿದರು ಎಂದು ಅಭಿಪ್ರಾಯಪಟ್ಟರು.ರಾಮನಿಗೂ ತಕ್ಷಶಿಲಾ ವಿಶ್ವವಿದ್ಯಾಲಯಕ್ಕೂ ಅವಿನಾಭಾವ ಸಂಬಂಧ ಇದೆ. ತಕ್ಷಶಿಲೆ ವಿವಿ ಮೂಲಕ ಭರತ ಸಂಸ್ಕೃತಿ ಮತ್ತೆ ತಲೆ ಎತ್ತಿ ನಿಂತಿತು. ಇದೀಗ ಅಂಥ ತಕ್ಷಶಿಲಾ ವಿವಿಯ ಪುನರವತರಣದ ಕಾಲ ಮತ್ತೆ ಸನ್ನಿಹಿತವಾಗಿದೆ. ಉದ್ದೇಶಿತ ವಿವಿ ಇಂಥ ನೂರಾರು- ಸಾವಿರಾರು ಚಲಿಸುವ ವಿಶ್ವವಿದ್ಯಾನಿಲಯಗಳನ್ನು ರೂಪಿಸಿ ಭಾರತವನ್ನು ರಾಮರಾಜ್ಯವಾಗಿ ಪರಿವರ್ತಿಸಲು ನಾಂದಿ ಹಾಡಲಿದೆ ಎಂದರು.

Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17.08.2025 | ಕೆಲವು ಕಡೆ ಉತ್ತಮ ಮಳೆ | ಆ.19ರಿಂದ ಮಳೆ ಕಡಿಮೆ ನಿರೀಕ್ಷೆ

18.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

15 hours ago

ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಭಾರತಕ್ಕೆ

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ್ದ ಮೊದಲ ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್…

23 hours ago

ರಾಜ್ಯದ ಕರಾವಳಿ, ಮಲೆನಾಡು ಭಾರೀ ಮಳೆ ಸಂಭವ | ಘಟ್ಟ ಪ್ರದೇಶಗಳಲ್ಲಿ ಭೂ ಕುಸಿತ ಸಾಧ್ಯತೆ | ಹವಾಮಾನ ಇಲಾಖೆ ಎಚ್ಚರಿಕೆ

ರಾಜ್ಯದ ನೈಋತ್ಯ ಒಳನಾಡಿನಲ್ಲಿ ಸಕ್ರಿಯವಾಗಿದ್ದು ಕರಾವಳಿಯಲ್ಲಿ ಸಾಮಾನ್ಯವಾಗಿತ್ತು. ಆ.20 ರ ವರೆಗೆ ಭಾರಿ…

23 hours ago

ಬದುಕು ಪುರಾಣ | ಕೃಷ್ಣ ಬಂದ, ನೋಡಲಾಗಲಿಲ್ಲ..!

ಜೀವಿತದಲ್ಲಿ ಬದುಕಿನ ಸಾರವನ್ನೆಲ್ಲಾ ಅನುಭವಿಸಿದ ಏಕೈಕ ವ್ಯಕ್ತಿ ಶ್ರೀಕೃಷ್ಣ. ಪ್ರೀತಿ ಅಂದರೆ ಒಬ್ಬರನ್ನೊಬ್ಬರು…

23 hours ago

ಹವಾಮಾನ ವರದಿ | 16-08-2025 | ಮಲೆನಾಡು-ಕರಾವಳಿಯಲ್ಲಿ ಉತ್ತಮ ಮಳೆ | ಆ.20 ರ ನಂತರ ಮಳೆ ಹೇಗೆ..?

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಂದ್ರಾ, ಒಡಿಶಾ ಕರಾವಳಿಯಲ್ಲಿ ಇದ್ದು, ಆಗಸ್ಟ್ 20,21ರಂದು ಗುಜರಾತ್…

2 days ago

ಹೊಸರುಚಿ | ಹಲಸಿನ ಹಣ್ಣಿನ ಬಜ್ಜಿ

ಹಲಸಿನ ಹಣ್ಣಿನ ಬಜ್ಜಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :  ಹಲಸಿನ…

2 days ago