ಸಾಹಿತ್ಯ ಸಂಭ್ರಮ ಸಮಾರೋಪದಲ್ಲಿ ಗಾಯಕ ಶಶಿಧರ್ ಕೋಟೆ- ವಿದ್ಯಾರ್ಥಿಗಳು ಮೂಲಸಂಸ್ಕೃತಿ ಹಾಗೂ ಹೃದಯದ ಭಾಷೆ ಮರೆಯಬಾರದು

November 12, 2019
3:09 PM

ಬೆಳ್ಳಾರೆ: ವಿದ್ಯಾರ್ಥಿಗಳು ಮೂಲಸಂಸ್ಕೃತಿ ಹಾಗೂ ಹೃದಯದ ಭಾಷೆಯನ್ನು ಎಂದಿಗೂ ಮರೆಯಕೂಡದು. ಹಿರಿಯರ ಪರಂಪರೆಗೆ ವಿದ್ಯಾರ್ಥಿಗಳೇ ಉತ್ತರಾಧಿಕಾರಿಗಳಾಗಿದ್ದು, ಅದನ್ನು ಮುಂದುವರೆಸಿಕೊಂಡು ಹೋಗುವ ಮಹತ್ತರ ಜವಾಬ್ದಾರಿಯೂ ವಿದ್ಯಾರ್ಥಿಗಳದ್ದಾಗಿದೆ ಎಂದು ಖ್ಯಾತ ಗಾಯಕ ಶಶಿಧರ್ ಕೋಟೆ ಹೇಳಿದರು.

Advertisement
Advertisement

ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲ್‍ನಲ್ಲಿ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಸುವಿಚಾರ ಸಾಹಿತ್ಯ ವೇದಿಕೆ ಸುಳ್ಯ ಇವುಗಳ ಜಂಟಿ ಆಶ್ರಯದಲ್ಲಿ ನಡೆದ 5ನೇ ವರ್ಷದ ಕನ್ನಡ ರಾಜ್ಯೋತ್ಸವದ ಸಾಹಿತ್ಯ ಸಂಭ್ರಮ 2019 ಇದರ ಸಮಾರೋಪ ಹಾಗು ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಎಲ್ಲಾ ಭಾಷೆಗಳನ್ನು ಪ್ರೀತಿಸಿಕೊಂಡು ನಮ್ಮ ಸಂಸ್ಕೃತಿಯ ಪರಿಧಿಯಲ್ಲಿಯೇ ಒಳ್ಳೆಯದಕ್ಕೆ ಬದಲಾವಣೆಗಳನ್ನು ಮಾಡಿಕೊಂಡು ಚಲಿಸುವ ನೀರಿನಂತೆ ಮುಂದುವರಿಯಬೇಕು ಎಂದು ಹೇಳಿದರು.

Advertisement

ಸಾಹಿತ್ಯದಲ್ಲಿ ಸಾಧನೆಗೈದ ಮಣಿಕ್ಕಾರ ಗೋಪಾಲಕೃಷ್ಣ ಶ್ಯಾನುಭೋಗ್, ಕಲಾಕ್ಷೇತ್ರದ ಸಾಧಕಿ ವಾರಿಜ ಬಾಳಿಲ, ಯಕ್ಷಗಾನ ಕಲಾವಿದ ರಾಮಚಂದ್ರ ಅರ್ಬಿತ್ತಾಯ ಇವರುಗಳನ್ನು ಕನ್ನಡ ಸಾಹಿತ್ಯ ಪರಿಷತ್ ಪೂರ್ವಾಧ್ಯಕ್ಷ ಜಾಕೆ ಮಾಧವ ಗೌಡ ಸನ್ಮಾನಿಸಿ ಗೌರವಿಸಿದರು.

ಸಭಾಧ್ಯಕ್ಷತೆ ವಹಿಸಿದ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ|ಹರಿಪ್ರಸಾದ್ ತುದಿಯಡ್ಕ ಗಾಯಕ ಶಶಿಧರ್ ಕೋಟೆ ಹಾಗು ಜಾಕೆ ಮಾಧವ ಗೌಡ ಅವರನ್ನು ಸನ್ಮಾನಿಸಿ ಗೌರವಿಸಿದರು. ವೇದಿಕೆಯಲ್ಲಿ ಕಾರ್ಯದರ್ಶಿ ಗಿರಿಜಾ, ಕನ್ನಡ ಸಾಹಿತ್ಯ ಪರಿಷತ್ ಕೋಶಾಧಿಕಾರಿ ದಯಾನಂದ ಆಳ್ವ, ಕಾಲೇಜು ಪ್ರಾಂಶುಪಾಲೆ ಹಸೀನಾ ಬಾನು, ಹಿರಿಯ ಶಿಕ್ಷಕಿ ನಾಗರತ್ನ, ಪ್ರೌಢಶಾಲಾ ಅಭಿವೃದ್ದಿ ಸಮಿತಿ ಕಾರ್ಯಾಧ್ಯಕ್ಷ ಶಾಂತಾರಾಮ ಕಣಿಲೆಗುಂಡಿ ಉಪಸ್ಥಿತರಿದ್ದರು. ಸುವಿಚಾರ ಸಾಹಿತ್ಯ ವೇದಿಕೆಯ ಅಧ್ಯಕ್ಷ ಚಂದ್ರಶೇಖರ ಪೇರಾಲು ಸ್ವಾಗತಿಸಿ, ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ತೇಜಸ್ವಿ ಕಡಪಾಳ ವಂದಿಸಿದರು. ಶಿಕ್ಷಕಿ ಮಮತಾ ಮೂಡಿತ್ತಾಯ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗೋವಿಜ್ಞಾನ, ವಿಷಮುಕ್ತ ಕೃಷಿ ಹಾಗೂ ಗ್ರಾಮೋದ್ಯೋಗ ಆಧಾರಿತ ಸ್ವಾವಲಂಬಿ ಗ್ರಾಮ ನಿರ್ಮಾಣದ ಮಹಾ ಶಿಬಿರ
March 20, 2024
4:04 PM
by: The Rural Mirror ಸುದ್ದಿಜಾಲ
ಅರ್ಥಿಕ ಬೆಳೆಯಾಗಿ ಬಿದಿರು | ಬಿದಿರು ಬೆಳೆಸುವ ಕುರಿತು ವಿಚಾರ ವಿನಿಮಯ ಸಭೆ
March 18, 2024
2:05 PM
by: The Rural Mirror ಸುದ್ದಿಜಾಲ
ನಿಮಗೆ ಹಾಲು ಕರೆಯಲು ಬರುತ್ತಾ..? ಹಾಗಾದ್ರೆ ಹಾಲು ಕರೆಯಿರಿ, ಭರ್ಜರಿ ಬಹುಮಾನ ಗೆಲ್ಲಿರಿ..
February 10, 2024
12:18 PM
by: The Rural Mirror ಸುದ್ದಿಜಾಲ
ಲಾಲ್‌ಬಾಗ್‌ ಫ್ಲವರ್‌ ಶೋ | ಪ್ರವಾಸಿಗರನ್ನು ಕೈಬೀಸಿ ಕರೆದ ಸಸ್ಯಕಾಶಿ : ಭರ್ಜರಿ ರೆಸ್ಪಾನ್ಸ್, ಕೋಟಿ ಮೀರಿದ ಆದಾಯ
January 27, 2024
11:51 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror