ಬೆಳ್ಳಾರೆ: ವಿದ್ಯಾರ್ಥಿಗಳು ಮೂಲಸಂಸ್ಕೃತಿ ಹಾಗೂ ಹೃದಯದ ಭಾಷೆಯನ್ನು ಎಂದಿಗೂ ಮರೆಯಕೂಡದು. ಹಿರಿಯರ ಪರಂಪರೆಗೆ ವಿದ್ಯಾರ್ಥಿಗಳೇ ಉತ್ತರಾಧಿಕಾರಿಗಳಾಗಿದ್ದು, ಅದನ್ನು ಮುಂದುವರೆಸಿಕೊಂಡು ಹೋಗುವ ಮಹತ್ತರ ಜವಾಬ್ದಾರಿಯೂ ವಿದ್ಯಾರ್ಥಿಗಳದ್ದಾಗಿದೆ ಎಂದು ಖ್ಯಾತ ಗಾಯಕ ಶಶಿಧರ್ ಕೋಟೆ ಹೇಳಿದರು.
ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಸುವಿಚಾರ ಸಾಹಿತ್ಯ ವೇದಿಕೆ ಸುಳ್ಯ ಇವುಗಳ ಜಂಟಿ ಆಶ್ರಯದಲ್ಲಿ ನಡೆದ 5ನೇ ವರ್ಷದ ಕನ್ನಡ ರಾಜ್ಯೋತ್ಸವದ ಸಾಹಿತ್ಯ ಸಂಭ್ರಮ 2019 ಇದರ ಸಮಾರೋಪ ಹಾಗು ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಎಲ್ಲಾ ಭಾಷೆಗಳನ್ನು ಪ್ರೀತಿಸಿಕೊಂಡು ನಮ್ಮ ಸಂಸ್ಕೃತಿಯ ಪರಿಧಿಯಲ್ಲಿಯೇ ಒಳ್ಳೆಯದಕ್ಕೆ ಬದಲಾವಣೆಗಳನ್ನು ಮಾಡಿಕೊಂಡು ಚಲಿಸುವ ನೀರಿನಂತೆ ಮುಂದುವರಿಯಬೇಕು ಎಂದು ಹೇಳಿದರು.
ಸಾಹಿತ್ಯದಲ್ಲಿ ಸಾಧನೆಗೈದ ಮಣಿಕ್ಕಾರ ಗೋಪಾಲಕೃಷ್ಣ ಶ್ಯಾನುಭೋಗ್, ಕಲಾಕ್ಷೇತ್ರದ ಸಾಧಕಿ ವಾರಿಜ ಬಾಳಿಲ, ಯಕ್ಷಗಾನ ಕಲಾವಿದ ರಾಮಚಂದ್ರ ಅರ್ಬಿತ್ತಾಯ ಇವರುಗಳನ್ನು ಕನ್ನಡ ಸಾಹಿತ್ಯ ಪರಿಷತ್ ಪೂರ್ವಾಧ್ಯಕ್ಷ ಜಾಕೆ ಮಾಧವ ಗೌಡ ಸನ್ಮಾನಿಸಿ ಗೌರವಿಸಿದರು.
ಸಭಾಧ್ಯಕ್ಷತೆ ವಹಿಸಿದ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ|ಹರಿಪ್ರಸಾದ್ ತುದಿಯಡ್ಕ ಗಾಯಕ ಶಶಿಧರ್ ಕೋಟೆ ಹಾಗು ಜಾಕೆ ಮಾಧವ ಗೌಡ ಅವರನ್ನು ಸನ್ಮಾನಿಸಿ ಗೌರವಿಸಿದರು. ವೇದಿಕೆಯಲ್ಲಿ ಕಾರ್ಯದರ್ಶಿ ಗಿರಿಜಾ, ಕನ್ನಡ ಸಾಹಿತ್ಯ ಪರಿಷತ್ ಕೋಶಾಧಿಕಾರಿ ದಯಾನಂದ ಆಳ್ವ, ಕಾಲೇಜು ಪ್ರಾಂಶುಪಾಲೆ ಹಸೀನಾ ಬಾನು, ಹಿರಿಯ ಶಿಕ್ಷಕಿ ನಾಗರತ್ನ, ಪ್ರೌಢಶಾಲಾ ಅಭಿವೃದ್ದಿ ಸಮಿತಿ ಕಾರ್ಯಾಧ್ಯಕ್ಷ ಶಾಂತಾರಾಮ ಕಣಿಲೆಗುಂಡಿ ಉಪಸ್ಥಿತರಿದ್ದರು. ಸುವಿಚಾರ ಸಾಹಿತ್ಯ ವೇದಿಕೆಯ ಅಧ್ಯಕ್ಷ ಚಂದ್ರಶೇಖರ ಪೇರಾಲು ಸ್ವಾಗತಿಸಿ, ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ತೇಜಸ್ವಿ ಕಡಪಾಳ ವಂದಿಸಿದರು. ಶಿಕ್ಷಕಿ ಮಮತಾ ಮೂಡಿತ್ತಾಯ ಕಾರ್ಯಕ್ರಮ ನಿರೂಪಿಸಿದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…