ಬೆಳ್ಳಾರೆ: ವಿದ್ಯಾರ್ಥಿಗಳು ಮೂಲಸಂಸ್ಕೃತಿ ಹಾಗೂ ಹೃದಯದ ಭಾಷೆಯನ್ನು ಎಂದಿಗೂ ಮರೆಯಕೂಡದು. ಹಿರಿಯರ ಪರಂಪರೆಗೆ ವಿದ್ಯಾರ್ಥಿಗಳೇ ಉತ್ತರಾಧಿಕಾರಿಗಳಾಗಿದ್ದು, ಅದನ್ನು ಮುಂದುವರೆಸಿಕೊಂಡು ಹೋಗುವ ಮಹತ್ತರ ಜವಾಬ್ದಾರಿಯೂ ವಿದ್ಯಾರ್ಥಿಗಳದ್ದಾಗಿದೆ ಎಂದು ಖ್ಯಾತ ಗಾಯಕ ಶಶಿಧರ್ ಕೋಟೆ ಹೇಳಿದರು.
ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಸುವಿಚಾರ ಸಾಹಿತ್ಯ ವೇದಿಕೆ ಸುಳ್ಯ ಇವುಗಳ ಜಂಟಿ ಆಶ್ರಯದಲ್ಲಿ ನಡೆದ 5ನೇ ವರ್ಷದ ಕನ್ನಡ ರಾಜ್ಯೋತ್ಸವದ ಸಾಹಿತ್ಯ ಸಂಭ್ರಮ 2019 ಇದರ ಸಮಾರೋಪ ಹಾಗು ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಎಲ್ಲಾ ಭಾಷೆಗಳನ್ನು ಪ್ರೀತಿಸಿಕೊಂಡು ನಮ್ಮ ಸಂಸ್ಕೃತಿಯ ಪರಿಧಿಯಲ್ಲಿಯೇ ಒಳ್ಳೆಯದಕ್ಕೆ ಬದಲಾವಣೆಗಳನ್ನು ಮಾಡಿಕೊಂಡು ಚಲಿಸುವ ನೀರಿನಂತೆ ಮುಂದುವರಿಯಬೇಕು ಎಂದು ಹೇಳಿದರು.
ಸಾಹಿತ್ಯದಲ್ಲಿ ಸಾಧನೆಗೈದ ಮಣಿಕ್ಕಾರ ಗೋಪಾಲಕೃಷ್ಣ ಶ್ಯಾನುಭೋಗ್, ಕಲಾಕ್ಷೇತ್ರದ ಸಾಧಕಿ ವಾರಿಜ ಬಾಳಿಲ, ಯಕ್ಷಗಾನ ಕಲಾವಿದ ರಾಮಚಂದ್ರ ಅರ್ಬಿತ್ತಾಯ ಇವರುಗಳನ್ನು ಕನ್ನಡ ಸಾಹಿತ್ಯ ಪರಿಷತ್ ಪೂರ್ವಾಧ್ಯಕ್ಷ ಜಾಕೆ ಮಾಧವ ಗೌಡ ಸನ್ಮಾನಿಸಿ ಗೌರವಿಸಿದರು.
ಸಭಾಧ್ಯಕ್ಷತೆ ವಹಿಸಿದ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ|ಹರಿಪ್ರಸಾದ್ ತುದಿಯಡ್ಕ ಗಾಯಕ ಶಶಿಧರ್ ಕೋಟೆ ಹಾಗು ಜಾಕೆ ಮಾಧವ ಗೌಡ ಅವರನ್ನು ಸನ್ಮಾನಿಸಿ ಗೌರವಿಸಿದರು. ವೇದಿಕೆಯಲ್ಲಿ ಕಾರ್ಯದರ್ಶಿ ಗಿರಿಜಾ, ಕನ್ನಡ ಸಾಹಿತ್ಯ ಪರಿಷತ್ ಕೋಶಾಧಿಕಾರಿ ದಯಾನಂದ ಆಳ್ವ, ಕಾಲೇಜು ಪ್ರಾಂಶುಪಾಲೆ ಹಸೀನಾ ಬಾನು, ಹಿರಿಯ ಶಿಕ್ಷಕಿ ನಾಗರತ್ನ, ಪ್ರೌಢಶಾಲಾ ಅಭಿವೃದ್ದಿ ಸಮಿತಿ ಕಾರ್ಯಾಧ್ಯಕ್ಷ ಶಾಂತಾರಾಮ ಕಣಿಲೆಗುಂಡಿ ಉಪಸ್ಥಿತರಿದ್ದರು. ಸುವಿಚಾರ ಸಾಹಿತ್ಯ ವೇದಿಕೆಯ ಅಧ್ಯಕ್ಷ ಚಂದ್ರಶೇಖರ ಪೇರಾಲು ಸ್ವಾಗತಿಸಿ, ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ತೇಜಸ್ವಿ ಕಡಪಾಳ ವಂದಿಸಿದರು. ಶಿಕ್ಷಕಿ ಮಮತಾ ಮೂಡಿತ್ತಾಯ ಕಾರ್ಯಕ್ರಮ ನಿರೂಪಿಸಿದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…