Advertisement
ಸುದ್ದಿಗಳು

ಸಿಇಟಿ 2020 : ಅತ್ಯುತ್ತಮ ಸಾಧನೆ ಮಾಡಿದ ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು

Share

ಪುತ್ತೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಿಇಟಿ 2020 ಪರೀಕ್ಷೆಯಲ್ಲಿ ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಗೌರೀಶ್ ಕಜಂಪಾಡಿ ಇವರು ಇಂಜಿನಿಯರಿಂಗ್‌ನಲ್ಲಿ 9 ನೇ ರ್ಯಾಂಕ್ ಹಾಗೂ ಫಾರ್ಮಾದಲ್ಲಿ 10 ನೇ ರ್ಯಾಂಕ್ ಗಳಿಸಿದ್ದಾರೆ.
ಇವರು ಬಾಲರಾಜ ಕಜಂಪಾಡಿ ಹಾಗೂ ರಾಜನಂದಿನಿ ಇವರ ಪುತ್ರ.

ಪುತ್ತೂರಿನ ದಿನೇಶ್ ಪಾಂಗಾಳ್ ಹಾಗೂ ಸಂಧ್ಯಾ ಪಾಂಗಾಳ್ ಇವರ ಪುತ್ರನಾದ ಅಕ್ಷಯ್ ಪಾಂಗಾಳ್ ಇವರು ಇಂಜಿನಿಯರಿಂಗ್ ಬಿಎನ್‌ ವೈಎಸ್ ನಲ್ಲಿ 63,‌ ಇಂಜಿನಿಯರಿಂಗ್ ನಲ್ಲಿ 364 ಅಗ್ರಿ ಬಿಎಸ್ಸಿಯಲ್ಲಿ 39, ವೆಟರ್ನರಿಯಲ್ಲಿ 127 ಹಾಗೂ ಫಾರ್ಮಾದಲ್ಲಿ 217 ನೇ ರ್ಯಾಂಕ್ ಪಡೆದಿದ್ದಾರೆ.

ಅಕ್ಷಯ್‌ ಪಾಂಗಾಳ್

ಸುಳ್ಯದ ಸೂರ್ಯ ರೈ ಹಾಗೂ ಮೋಹಿನಿ ರೈ ಇವರ ಪುತ್ರಿ ನಿಶಾ ಎಮ್ ಎಸ್ ಇವರಿಗೆ ಇಂಜಿನಿಯರಿಂಗ್ ನಲ್ಲಿ 1226 ನೇ ರ್ಯಾಂಕ್ ಲಭಿಸಿದೆ.

ನಿಶಾ. ಎಮ್‌ ಎಸ್

ಡಾಕ್ಟರ್ ಸುಬ್ರಹ್ಮಣ್ಯ ಕೆ ಹಾಗೂ ರೇವತಿ ಎಮ್ ಬಿ ದಂಪತಿಗಳ ಪುತ್ರಿಯಾದ ಪುತ್ತೂರಿನ ಶಮಾ ಕೆ ಇವರಿಗೆ ಬಿಎನ್‌ ವೈಎಸ್ ನಲ್ಲಿ 1220 ಹಾಗೂ ಅಗ್ರಿ ಬಿಎಸ್ಸಿಯಲ್ಲಿ  1033 ನೇ ರ್ಯಾಂಕ್ ಲಭಿಸಿದೆ.

ಶಮಾ ಕೆ

ವೀರಕಂಬದ ನಾರಾಯಣ ಭಟ್ ಹಾಗೂ ರಜನಿ ಭಟ್ ದಂಪತಿಗಳ ಪುತ್ರನಾದ ಬಿ ಈಶ್ವರ ಪ್ರಸನ್ನ ಇವರಿಗೆ ಬಿಎನ್‌ ವೈಎಸ್ ನಲ್ಲಿ 1454 ಹಾಗೂ ಅಗ್ರಿ ಬಿಎಸ್ಸಿ ಯಲ್ಲಿ 895 ನೇ ರ್ಯಾಂಕ್ ಲಭಿಸಿದೆ.

ಈಶ್ವರ ಪ್ರಸನ್ನ 

ಬೆಟ್ಟಂಪಾಡಿ ಮಿತ್ತಡ್ಕದ ಸೀತಾರಾಮ ಗೌಡ ಹಾಗೂ ಸುಂದರಿ ಇವರ ಪುತ್ರನಾದ ಸಾಕ್ಷಾತ್ ಇವರಿಗೆ ಇಂಜಿನಿಯರಿಂಗ್ ನಲ್ಲಿ 1356 ನೇ ರ್ಯಾಂಕ್ ಲಭಿಸಿದೆ.

ಸಾಕ್ಷತ್ ಎಸ್‌ ಎಮ್

ಕೆದಿಲದ ರಾಮಚಂದ್ರ ರಾವ್ ಹಾಗೂ ಗೀತಾ ರಾವ್ ಇವರ ಪುತ್ರನಾದ ವಿಜಿತ್ ಕೃಷ್ಣ ಐತಾಳ್ ಇವರಿಗೆ ಬಿಎನ್‌ ವೈಎಸ್ನಲ್ಲಿ 1082 ನೇ ರ್ಯಾಂಕ್ ಲಭಿಸಿದೆ.

ವಿಜಿತ್‌ ಕೃಷ್ಣ ಐತಾಳ್

ಅತ್ಯುನ್ನತ ಸಾಧನೆ ಮಾಡಿ ಕಾಲೇಜಿಗೆ ಹಾಗೂ ಪುತ್ತೂರಿಗೆ ಕೀರ್ತಿಯನ್ನು ತಂದ ಎಲ್ಲಾ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಅಭಿನಂದಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

12 hours ago

ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ

ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…

18 hours ago

ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು

ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…

19 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಕಿರಿಯರ ಚೆಸ್ ಚಾಂಪಿಯನ್‌ಶಿಪ್‌ಗೆ ತೆರೆ – ಮಣಿ ಸರ್ಬರ್‌ತೋ ಚಾಂಪಿಯನ್

ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್‌ಶಿಪ್–2026ಕ್ಕೆ…

1 day ago

ಮ್ಯಾನ್ಮಾರ್‌ನಿಂದ ರೈಲಿನಲ್ಲಿ ಸಾಗಿಸುತ್ತಿದ್ದ 10 ಟನ್ ಅಡಿಕೆ ವಶ

ಮ್ಯಾನ್ಮಾರ್‌ನಿಂದ ಕಳ್ಳಸಾಗಣೆ ಮಾಡಲಾಗಿದ್ದ ಸುಮಾರು 10 ಟನ್ ವಿದೇಶಿ ಅಡಿಕೆಯನ್ನು ಅಸ್ಸಾಂನ ರಂಗಿಯಾ…

1 day ago

ಹವಾಮಾನ ವರದಿ | 08-08-2026 | ಕರಾವಳಿಯಲ್ಲಿ ಮಳೆ ಇಳಿಕೆ – ರಾಜ್ಯದಲ್ಲಿ ಹೇಗೆ..?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದ್ದು,…

2 days ago