ಸುಳ್ಯ: ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ಸುಳ್ಯ ತಾಲೂಕು ಸಮ್ಮೇಳನ ಸಿಎ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು. ಸಿಐಟಿಯು ತಾಲೂಕು ಅಧ್ಯಕ್ಷ ಬಿಜು ಅಗಸ್ಟಿಯನ್ ಅಧ್ಯಕ್ಷತೆ ವಹಿಸಿದ್ದರು. ಸಿಐಟಿಯು ರಾಜ್ಯ ಉಪಾಧ್ಯಕ್ಷ ವಸಂತ ಆಚಾರಿ ಸಮ್ಮೇಳನವನ್ನು ಉದ್ಘಾಟಿಸಿದರು. ದಕ ಜಿಲ್ಲಾ ಸಿಐಟಿಯು ಪ್ರದಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಮುಖ್ಯ ಅತಿಥಿಯಾಗಿದ್ದರು.
ಕಾರ್ಮಿಕ ಸಂಘದ ಪ್ರತಿನಿಧಿಗಳು ಭಾಗವಹಿಸಿ ಪ್ರಸ್ತುತ ಕಾರ್ಮಿಕ ವರ್ಗ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿ ನಿರ್ಣಯಗಳನ್ನು ಕೈಗೊಳ್ಳಲಾಯಿತು.
ಸುಳ್ಯದಲ್ಲಿ ಅಧಾರ್ ತಿದ್ದುಪಡಿ ಮಾಡಲು ಸರಿಯಾದ ವ್ಯವಸ್ಥೆ ಇಲ್ಲದಿರುವುದು ಬಡ ಮತ್ತು ಕಾರ್ಮಿಕ ವರ್ಗಕ್ಕೆ ತೀವ್ರ ಸಮಸ್ಯೆ ಉಂಟು ಮಾಡುತಿದೆ. ನೋಟು ಅಮಾನ್ಯೀಕರಣ ಹಾಗೂ ಅಪಕ್ವವಾದ ಜಿಎಸ್ ಟಿ ಹೇರಿಕೆಯಿಂದ ಕಾರ್ಮಿಕರು ತತ್ತರಿಸಿ ಹೋಗಿದ್ದಾರೆ ಎಂದು ಸಮ್ಮೇಳನದಲ್ಲಿ ಮಾತನಾಡಿದ ಪ್ರಮುಖರು ಹೇಳಿದರು. ಕಾರ್ಮಿಕ ವರ್ಗವನ್ನು ಕೇವಲವಾಗಿ ಕಾಣುವ ಆಢಳಿತ ವರ್ಗದ ಧೋರಣೆಗಳ ವಿರುದ್ದ ಮುಂದೆ ಹೊರಾಟ ತೀವ್ರಗೊಳಿಸಲು ನಿರ್ಧರಿಸಿ ಕಾರ್ಮಿಕರು ದೊಡ್ಡ ಸಂಖ್ಯೆಯಲ್ಲಿ ಒಂದಾಗಬೇಕೆಂದು ಕರೆ ನೀಡಲಾಯಿತು. ನೂತನ ಸಾಲಿನ ಸಮಿತಿಯನ್ನು ರಚಿಸಲಾಯಿತು.
ಸಿಐಟಿಯು ನಾಯಕ ನಾಗರಾಜ್ ಕಲ್ಲುಮುಟ್ಲು ಸ್ವಾಗತಿಸಿದರು. ಸಿಐಟಿಯು ಜಿಲ್ಲಾ ಸಮಿತಿ ಸದಸ್ಯರಾದ ಕೆ.ಪಿ.ರಾಬರ್ಟ್ ಡಿಸೋಜ ವಂದಿಸಿದರು.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…