ಸುಳ್ಯ: ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ಸುಳ್ಯ ತಾಲೂಕು ಸಮ್ಮೇಳನ ಸಿಎ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು. ಸಿಐಟಿಯು ತಾಲೂಕು ಅಧ್ಯಕ್ಷ ಬಿಜು ಅಗಸ್ಟಿಯನ್ ಅಧ್ಯಕ್ಷತೆ ವಹಿಸಿದ್ದರು. ಸಿಐಟಿಯು ರಾಜ್ಯ ಉಪಾಧ್ಯಕ್ಷ ವಸಂತ ಆಚಾರಿ ಸಮ್ಮೇಳನವನ್ನು ಉದ್ಘಾಟಿಸಿದರು. ದಕ ಜಿಲ್ಲಾ ಸಿಐಟಿಯು ಪ್ರದಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಮುಖ್ಯ ಅತಿಥಿಯಾಗಿದ್ದರು.
ಕಾರ್ಮಿಕ ಸಂಘದ ಪ್ರತಿನಿಧಿಗಳು ಭಾಗವಹಿಸಿ ಪ್ರಸ್ತುತ ಕಾರ್ಮಿಕ ವರ್ಗ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿ ನಿರ್ಣಯಗಳನ್ನು ಕೈಗೊಳ್ಳಲಾಯಿತು.
ಸುಳ್ಯದಲ್ಲಿ ಅಧಾರ್ ತಿದ್ದುಪಡಿ ಮಾಡಲು ಸರಿಯಾದ ವ್ಯವಸ್ಥೆ ಇಲ್ಲದಿರುವುದು ಬಡ ಮತ್ತು ಕಾರ್ಮಿಕ ವರ್ಗಕ್ಕೆ ತೀವ್ರ ಸಮಸ್ಯೆ ಉಂಟು ಮಾಡುತಿದೆ. ನೋಟು ಅಮಾನ್ಯೀಕರಣ ಹಾಗೂ ಅಪಕ್ವವಾದ ಜಿಎಸ್ ಟಿ ಹೇರಿಕೆಯಿಂದ ಕಾರ್ಮಿಕರು ತತ್ತರಿಸಿ ಹೋಗಿದ್ದಾರೆ ಎಂದು ಸಮ್ಮೇಳನದಲ್ಲಿ ಮಾತನಾಡಿದ ಪ್ರಮುಖರು ಹೇಳಿದರು. ಕಾರ್ಮಿಕ ವರ್ಗವನ್ನು ಕೇವಲವಾಗಿ ಕಾಣುವ ಆಢಳಿತ ವರ್ಗದ ಧೋರಣೆಗಳ ವಿರುದ್ದ ಮುಂದೆ ಹೊರಾಟ ತೀವ್ರಗೊಳಿಸಲು ನಿರ್ಧರಿಸಿ ಕಾರ್ಮಿಕರು ದೊಡ್ಡ ಸಂಖ್ಯೆಯಲ್ಲಿ ಒಂದಾಗಬೇಕೆಂದು ಕರೆ ನೀಡಲಾಯಿತು. ನೂತನ ಸಾಲಿನ ಸಮಿತಿಯನ್ನು ರಚಿಸಲಾಯಿತು.
ಸಿಐಟಿಯು ನಾಯಕ ನಾಗರಾಜ್ ಕಲ್ಲುಮುಟ್ಲು ಸ್ವಾಗತಿಸಿದರು. ಸಿಐಟಿಯು ಜಿಲ್ಲಾ ಸಮಿತಿ ಸದಸ್ಯರಾದ ಕೆ.ಪಿ.ರಾಬರ್ಟ್ ಡಿಸೋಜ ವಂದಿಸಿದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…