Advertisement
ಸುದ್ದಿಗಳು

ಸಿದ್ಧಗೊಳ್ಳುತಿದೆ ಸುಸಜ್ಜಿತ ತಾಲೂಕು ಪಂಚಾಯತ್ ಕಟ್ಟಡ

Share

ಸುಳ್ಯ: ಸುಳ್ಯ ತಾಲೂಕು ಪಂಚಾಯತ್ ಗೆ ಸುಂದರ ಮತ್ತು ಸುಸಜ್ಜಿತ ನೂತನ ಕಟ್ಟಡ ತಲೆ ಎತ್ತಿದ್ದು ಉದ್ಘಾಟನೆಗೆ ಸಿದ್ಧಗೊಳ್ಳುತ್ತಿದೆ. 2.80 ಕೋಟಿ ವೆಚ್ಚದಲ್ಲಿ ಎರಡು ಅಂತಸ್ಥಿನ ಕಟ್ಟಡ ಮತ್ತು ಸಭಾಭವನದೊಂದಿಗೆ ಕಟ್ಟಡ ನಿರ್ಮಾಣ ಮಾಡಲಾಗಿದೆ. ಜಿಲ್ಲಾ ಪಂಚಾಯತ್ ಕಟ್ಟಡ ನಿರ್ಮಾಣ ಮತ್ತು ನಿರ್ವಹಣೆ ಯೋಜನೆಯಡಿಯಲ್ಲಿ ನೂತನ ಕಟ್ಟಡಕ್ಕೆ ಅನುದಾನ ಬಿಡಿಗಡೆ ಮಾಡಲಾಗಿದೆ.

Advertisement
Advertisement

5,750 ಚದರ ಅಡಿ ವಿಸ್ತೀರ್ಣದ ಎರಡು ಅಂತಸ್ತಿನ ಕಟ್ಟಡ ಮತ್ತು ಮೇಲೆ 5,750 ಚದರ ಅಡಿ ವಿಸ್ತೀರ್ಣದ ಸಭಾ ಭವನ ನಿರ್ಮಾಣ ಮಾಡಲಾಗಿದೆ. ಕೆಳಗಿನ ಅಂತಸ್ತಿನಲ್ಲಿ ಸಾರ್ವಜನಿಕರಿಗೆ ಕುಳಿತುಕೊಳ್ಳಲು ವಿಶಾಲವಾದ ಸಭಾಂಗಣ, ತಾಲೂಕು ಪಂಚಾಯತ್ ಆಡಳಿತ ಕಚೇರಿ, ಶಾಸಕರ ಕಚೇರಿ, ತಾಲೂಕು ಪಂಚಾಯತ್ ಅಧ್ಯಕ್ಷರ ಕಚೇರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಚೇರಿ ಕಾರ್ಯನಿರ್ವಹಿಸಲಿದೆ. ಪ್ರಥಮ ಅಂತಸ್ತಿನಲ್ಲಿ ವಸತಿ ಯೋಜನೆ, ಅಕ್ಷರ ದಾಸೋಹ, ಮಹಾತ್ಮಗಾಂಧೀ ಗ್ರಾಮೀಣ ಉದ್ಯೋಗ ಖಾತರಿ ಕಚೇರಿ, ಕೈಗಾರಿಕಾ ವಿಸ್ತರಣಾಧಿಕಾರಿ ಮತ್ತಿತರ ವಿವಿಧ ಇಲಾಖೆಗಳ ಕಚೇರಿ, ತಾಲೂಕು ಪಂಚಾಯತ್ ಉಪಾಧ್ಯಕ್ಷರ ಕಚೇರಿ, ಸ್ಥಾಯಿ ಸಮಿತಿ ಅಧ್ಯಕ್ಷರ ಕಚೇರಿ, ತಾಲೂಕು ಪಂಚಾಯತ್ ಸದಸ್ಯರ ವಿಶ್ರಾಂತಿ ಕೊಠಡಿ, ಕಂಪ್ಯೂಟರ್ ನಿಯಂತ್ರಣ ಕೊಠಡಿ, ಮಿನಿ ಮೀಟಿಂಗ್ ಹಾಲ್ ಕಾರ್ಯನಿರ್ವಹಿಸಲಿದೆ. ಇದರ ಮೇಲೆ ಸಭಾ ಭವನ ನಿರ್ಮಾಣಗೊಂಡಿದೆ. ಕಟ್ಟಡ ನಿರ್ಮಾಣ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು ಅಂತಿಮ ಹಂತದ ಕಾಮಗಾರಿಗಳು ನಡೆಯುತ್ತಿದೆ. ಆಗಸ್ಟ್ 15ರ ಬಳಿಕ ಉದ್ಘಾಟನೆ ನಡೆಯಲಿದೆ.

ಸುಮಾರು ಆರ್ಧ ಶತಮಾನಕ್ಕಿಂತ ಹಿಂದೆ ನಿರ್ಮಾಣಗೊಂಡ ಹಳೆಯ ಕಟ್ಟಡದಲ್ಲಿ ತಾಲೂಕು ಪಂಚಾಯತ್ ಕಾರ್ಯಾಚರಿಸುತ್ತಿತ್ತು. ಹಳೆಯ ಕಟ್ಟಡವನ್ನು ಕೆಡವಿ ಕಳೆದ ವರ್ಷ ಹೊಸ ಕಟ್ಟಡ ನಿರ್ಮಾಣ ಆರಂಭಿಸಲಾಗಿದೆ. ಹಳೆಯ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ತಾಲೂಕು ಪಂಚಾಯತ್ ಕಚೇರಿಗಳನ್ನು ಸಮೀಪದ ಕಟ್ಟಡಗಳಿಗೆ ಸ್ಥಳಾಂತರ ಮಾಡಿ ಹೊಸ ಕಟ್ಟಡ ನಿರ್ಮಾಣ ಕಾರ್ಯ ಆರಂಭಿಸಲಾಗಿತ್ತು. ಇದೀಗ ಒಂದು ವರ್ಷದ ಒಳಗೆ ನೂತನ ಕಟ್ಟಡ ನಿರ್ಮಾಣವಾಗಿದೆ. 1965 ರಲ್ಲಿ ಸುಳ್ಯ ತಾಲೂಕು ರಚನೆಗೊಂಡಿತ್ತು. 1966ರಲ್ಲಿ ತಾಲೂಕು ಅಭಿವೃದ್ಧಿ ಮಂಡಳಿ (ತಾಲೂಕು ಬೋರ್ಡ್) ಅಸ್ತಿತ್ವಕ್ಕೆ ಬಂದಿತು. ಬಳಿಕ ತಾಲೂಕು ಪಂಚಾಯತ್ ಅಸ್ತಿತ್ವಕ್ಕೆ ಬಂದ ಬಳಿಕವೂ ಹಳೆಯ ಕಟ್ಟಡದಲ್ಲಿಯೇ ಕಾರ್ಯಾಚರಿಸುತ್ತಿತ್ತು.

ಒಂದು ಕೋಟಿಯ ಹೆಚ್ಚುವರಿ ಪ್ರಸ್ತಾವನೆ:
ಸುಸಜ್ಜಿತ ತಾಲೂಕು ಪಂಚಾಯತ್ ಕಟ್ಟಡದಕ್ಕೆ ಎಸಿ, ಲಿಪ್ಟ್ ನಿರ್ಮಾಣ, ಪೀಠೋಪಕರಣ ಮತ್ತಿತರ ಅಗತ್ಯತೆಗಳಿಗಾಗಿ ಒಂದು ಕೋಟಿ ರೂಗಳ ಹೆಚ್ಚುವರಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ತಿಳಿಸಿದ್ದಾರೆ. ತಾಲೂಕು ರಚನೆಯಾಗಿ ಸುವರ್ಣ ಮಹೋತ್ಸವ ಪೂರ್ತಿಗೊಂಡಿರುವ ಹಿನ್ನಲೆಯಲ್ಲಿ ತಾಲೂಕು ಪಂಚಾಯತ್ ಗೆ ಸುಸಜ್ಜಿತ ಕಟ್ಟಡ ನಿರ್ಮಾಣ ಆಗಬೇಕೆಂಬ ಗುರಿ ಇತ್ತು. ಅದು ಸಾಕಾರಗೊಂಡಿದೆ ಆಗಸ್ಟ್ ತಿಂಗಳ ಕೊನೆಯೊಳಗೆ ನೂತನ ಕಟ್ಟಡದ ಉದ್ಘಾಟನೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

14 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

14 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

3 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

3 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

3 days ago