( ಸಾಂದರ್ಭಿಕ ಚಿತ್ರ )
ಮಡಿಕೇರಿ : ಕೊಟ್ಟಿಗೆಯೊಳಗಿದ್ದ ಆಡು ಮತ್ತು ಮನೆಯ ಮುಂದೆ ಕಟ್ಟಿ ಹಾಕಿದ್ದ ನಾಯಿಯನ್ನು ಚಿರತೆಯೊಂದು ಭಕ್ಷಿಸಿರುವ ಘಟನೆ ಕುಶಾಲನಗರ ಸಮೀಪದ ಸಿದ್ಧಲಿಂಗಪುರದಲ್ಲಿ ನಡೆದಿದೆ.
ಸಿದ್ಧಲಿಂಗಪುರ ಮತ್ತು ಅಳಿಲುಗುಪ್ಪೆ ವ್ಯಾಪ್ತಿಯಲ್ಲಿ ಚಿರತೆ ಓಡಾಡುತ್ತಿದ್ದು, ಜನರು ಭಯಭೀತರಾಗಿದ್ದಾರೆ. ಅಳಿಲುಗುಪ್ಪೆಯ ಲೋಕೇಶ್ ಎಂಬವರ ಮನೆಯ ಮುಂದೆ ರಾತ್ರಿ ಕಟ್ಟಿದ್ದ ನಾಯಿಯನ್ನು ಚಿರತೆ ಭಕ್ಷಿಸಿದೆ.
ಕೊಡಗಿನ ಗಡಿಭಾಗದ ಮರಿಯಾನಗರಕ್ಕೆ ಹೊಂದಿಕೊಂಡಂತಿರುವ ಚಿಮ್ಮಿಯಣ್ಣ ಎಂಬವರ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಆಡನ್ನು ಎಳೆದ ತಿಂದಿದೆ. ಚಿರತೆಯನ್ನು ಪ್ರತ್ಯಕ್ಷವಾಗಿ ನೋಡಿರುವ ತೋಟದ ಕಾರ್ಮಿಕರು ಕಾಡಿನಂಚಿನ ಜಮೀನುಗಳಲ್ಲಿ ಕೆಲಸ ನಿರ್ವಹಿಸಲು ಹಿಂಜರಿಯುತ್ತಿದ್ದಾರೆ.
ಹಾಸನ ಮತ್ತು ಕೊಡಗು ಜಿಲ್ಲೆಯ ಗಡಿಭಾಗವಾಗಿರುವ ಈ ಪ್ರದೇಶದಲ್ಲಿ ಈಗಾಗಲೇ ಹಾಸನದ ಅರಣ್ಯಾಧಿಕಾರಿಗಳು ಚಿರತೆ ಸೆರೆಗೆ ಬೋನ್ನ್ನು ತಂದು ಇರಿಸಿದ್ದಾರೆಯಾದರು ಚಿರತೆ ತಮ್ಮ ಮೇಲೆರಗಬಹುದು ಎನ್ನುವ ಭೀತಿಯಲ್ಲೇ ಗ್ರಾಮಸ್ಥರು ದಿನದೂಡುತ್ತಿದ್ದಾರೆ.
ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…
ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ…
ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ ಬಗ್ಗೆ ಪುತ್ತೂರಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490