( ಸಾಂದರ್ಭಿಕ ಚಿತ್ರ )
ಮಡಿಕೇರಿ : ಕೊಟ್ಟಿಗೆಯೊಳಗಿದ್ದ ಆಡು ಮತ್ತು ಮನೆಯ ಮುಂದೆ ಕಟ್ಟಿ ಹಾಕಿದ್ದ ನಾಯಿಯನ್ನು ಚಿರತೆಯೊಂದು ಭಕ್ಷಿಸಿರುವ ಘಟನೆ ಕುಶಾಲನಗರ ಸಮೀಪದ ಸಿದ್ಧಲಿಂಗಪುರದಲ್ಲಿ ನಡೆದಿದೆ.
ಸಿದ್ಧಲಿಂಗಪುರ ಮತ್ತು ಅಳಿಲುಗುಪ್ಪೆ ವ್ಯಾಪ್ತಿಯಲ್ಲಿ ಚಿರತೆ ಓಡಾಡುತ್ತಿದ್ದು, ಜನರು ಭಯಭೀತರಾಗಿದ್ದಾರೆ. ಅಳಿಲುಗುಪ್ಪೆಯ ಲೋಕೇಶ್ ಎಂಬವರ ಮನೆಯ ಮುಂದೆ ರಾತ್ರಿ ಕಟ್ಟಿದ್ದ ನಾಯಿಯನ್ನು ಚಿರತೆ ಭಕ್ಷಿಸಿದೆ.
ಕೊಡಗಿನ ಗಡಿಭಾಗದ ಮರಿಯಾನಗರಕ್ಕೆ ಹೊಂದಿಕೊಂಡಂತಿರುವ ಚಿಮ್ಮಿಯಣ್ಣ ಎಂಬವರ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಆಡನ್ನು ಎಳೆದ ತಿಂದಿದೆ. ಚಿರತೆಯನ್ನು ಪ್ರತ್ಯಕ್ಷವಾಗಿ ನೋಡಿರುವ ತೋಟದ ಕಾರ್ಮಿಕರು ಕಾಡಿನಂಚಿನ ಜಮೀನುಗಳಲ್ಲಿ ಕೆಲಸ ನಿರ್ವಹಿಸಲು ಹಿಂಜರಿಯುತ್ತಿದ್ದಾರೆ.
ಹಾಸನ ಮತ್ತು ಕೊಡಗು ಜಿಲ್ಲೆಯ ಗಡಿಭಾಗವಾಗಿರುವ ಈ ಪ್ರದೇಶದಲ್ಲಿ ಈಗಾಗಲೇ ಹಾಸನದ ಅರಣ್ಯಾಧಿಕಾರಿಗಳು ಚಿರತೆ ಸೆರೆಗೆ ಬೋನ್ನ್ನು ತಂದು ಇರಿಸಿದ್ದಾರೆಯಾದರು ಚಿರತೆ ತಮ್ಮ ಮೇಲೆರಗಬಹುದು ಎನ್ನುವ ಭೀತಿಯಲ್ಲೇ ಗ್ರಾಮಸ್ಥರು ದಿನದೂಡುತ್ತಿದ್ದಾರೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…