( ಸಾಂದರ್ಭಿಕ ಚಿತ್ರ )
ಮಡಿಕೇರಿ : ಕೊಟ್ಟಿಗೆಯೊಳಗಿದ್ದ ಆಡು ಮತ್ತು ಮನೆಯ ಮುಂದೆ ಕಟ್ಟಿ ಹಾಕಿದ್ದ ನಾಯಿಯನ್ನು ಚಿರತೆಯೊಂದು ಭಕ್ಷಿಸಿರುವ ಘಟನೆ ಕುಶಾಲನಗರ ಸಮೀಪದ ಸಿದ್ಧಲಿಂಗಪುರದಲ್ಲಿ ನಡೆದಿದೆ.
ಸಿದ್ಧಲಿಂಗಪುರ ಮತ್ತು ಅಳಿಲುಗುಪ್ಪೆ ವ್ಯಾಪ್ತಿಯಲ್ಲಿ ಚಿರತೆ ಓಡಾಡುತ್ತಿದ್ದು, ಜನರು ಭಯಭೀತರಾಗಿದ್ದಾರೆ. ಅಳಿಲುಗುಪ್ಪೆಯ ಲೋಕೇಶ್ ಎಂಬವರ ಮನೆಯ ಮುಂದೆ ರಾತ್ರಿ ಕಟ್ಟಿದ್ದ ನಾಯಿಯನ್ನು ಚಿರತೆ ಭಕ್ಷಿಸಿದೆ.
ಕೊಡಗಿನ ಗಡಿಭಾಗದ ಮರಿಯಾನಗರಕ್ಕೆ ಹೊಂದಿಕೊಂಡಂತಿರುವ ಚಿಮ್ಮಿಯಣ್ಣ ಎಂಬವರ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಆಡನ್ನು ಎಳೆದ ತಿಂದಿದೆ. ಚಿರತೆಯನ್ನು ಪ್ರತ್ಯಕ್ಷವಾಗಿ ನೋಡಿರುವ ತೋಟದ ಕಾರ್ಮಿಕರು ಕಾಡಿನಂಚಿನ ಜಮೀನುಗಳಲ್ಲಿ ಕೆಲಸ ನಿರ್ವಹಿಸಲು ಹಿಂಜರಿಯುತ್ತಿದ್ದಾರೆ.
ಹಾಸನ ಮತ್ತು ಕೊಡಗು ಜಿಲ್ಲೆಯ ಗಡಿಭಾಗವಾಗಿರುವ ಈ ಪ್ರದೇಶದಲ್ಲಿ ಈಗಾಗಲೇ ಹಾಸನದ ಅರಣ್ಯಾಧಿಕಾರಿಗಳು ಚಿರತೆ ಸೆರೆಗೆ ಬೋನ್ನ್ನು ತಂದು ಇರಿಸಿದ್ದಾರೆಯಾದರು ಚಿರತೆ ತಮ್ಮ ಮೇಲೆರಗಬಹುದು ಎನ್ನುವ ಭೀತಿಯಲ್ಲೇ ಗ್ರಾಮಸ್ಥರು ದಿನದೂಡುತ್ತಿದ್ದಾರೆ.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…