( ಸಾಂದರ್ಭಿಕ ಚಿತ್ರ )
ಮಡಿಕೇರಿ : ಕೊಟ್ಟಿಗೆಯೊಳಗಿದ್ದ ಆಡು ಮತ್ತು ಮನೆಯ ಮುಂದೆ ಕಟ್ಟಿ ಹಾಕಿದ್ದ ನಾಯಿಯನ್ನು ಚಿರತೆಯೊಂದು ಭಕ್ಷಿಸಿರುವ ಘಟನೆ ಕುಶಾಲನಗರ ಸಮೀಪದ ಸಿದ್ಧಲಿಂಗಪುರದಲ್ಲಿ ನಡೆದಿದೆ.
ಸಿದ್ಧಲಿಂಗಪುರ ಮತ್ತು ಅಳಿಲುಗುಪ್ಪೆ ವ್ಯಾಪ್ತಿಯಲ್ಲಿ ಚಿರತೆ ಓಡಾಡುತ್ತಿದ್ದು, ಜನರು ಭಯಭೀತರಾಗಿದ್ದಾರೆ. ಅಳಿಲುಗುಪ್ಪೆಯ ಲೋಕೇಶ್ ಎಂಬವರ ಮನೆಯ ಮುಂದೆ ರಾತ್ರಿ ಕಟ್ಟಿದ್ದ ನಾಯಿಯನ್ನು ಚಿರತೆ ಭಕ್ಷಿಸಿದೆ.
ಕೊಡಗಿನ ಗಡಿಭಾಗದ ಮರಿಯಾನಗರಕ್ಕೆ ಹೊಂದಿಕೊಂಡಂತಿರುವ ಚಿಮ್ಮಿಯಣ್ಣ ಎಂಬವರ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಆಡನ್ನು ಎಳೆದ ತಿಂದಿದೆ. ಚಿರತೆಯನ್ನು ಪ್ರತ್ಯಕ್ಷವಾಗಿ ನೋಡಿರುವ ತೋಟದ ಕಾರ್ಮಿಕರು ಕಾಡಿನಂಚಿನ ಜಮೀನುಗಳಲ್ಲಿ ಕೆಲಸ ನಿರ್ವಹಿಸಲು ಹಿಂಜರಿಯುತ್ತಿದ್ದಾರೆ.
ಹಾಸನ ಮತ್ತು ಕೊಡಗು ಜಿಲ್ಲೆಯ ಗಡಿಭಾಗವಾಗಿರುವ ಈ ಪ್ರದೇಶದಲ್ಲಿ ಈಗಾಗಲೇ ಹಾಸನದ ಅರಣ್ಯಾಧಿಕಾರಿಗಳು ಚಿರತೆ ಸೆರೆಗೆ ಬೋನ್ನ್ನು ತಂದು ಇರಿಸಿದ್ದಾರೆಯಾದರು ಚಿರತೆ ತಮ್ಮ ಮೇಲೆರಗಬಹುದು ಎನ್ನುವ ಭೀತಿಯಲ್ಲೇ ಗ್ರಾಮಸ್ಥರು ದಿನದೂಡುತ್ತಿದ್ದಾರೆ.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…