( ಸಾಂದರ್ಭಿಕ ಚಿತ್ರ )
ಮಡಿಕೇರಿ : ಕೊಟ್ಟಿಗೆಯೊಳಗಿದ್ದ ಆಡು ಮತ್ತು ಮನೆಯ ಮುಂದೆ ಕಟ್ಟಿ ಹಾಕಿದ್ದ ನಾಯಿಯನ್ನು ಚಿರತೆಯೊಂದು ಭಕ್ಷಿಸಿರುವ ಘಟನೆ ಕುಶಾಲನಗರ ಸಮೀಪದ ಸಿದ್ಧಲಿಂಗಪುರದಲ್ಲಿ ನಡೆದಿದೆ.
ಸಿದ್ಧಲಿಂಗಪುರ ಮತ್ತು ಅಳಿಲುಗುಪ್ಪೆ ವ್ಯಾಪ್ತಿಯಲ್ಲಿ ಚಿರತೆ ಓಡಾಡುತ್ತಿದ್ದು, ಜನರು ಭಯಭೀತರಾಗಿದ್ದಾರೆ. ಅಳಿಲುಗುಪ್ಪೆಯ ಲೋಕೇಶ್ ಎಂಬವರ ಮನೆಯ ಮುಂದೆ ರಾತ್ರಿ ಕಟ್ಟಿದ್ದ ನಾಯಿಯನ್ನು ಚಿರತೆ ಭಕ್ಷಿಸಿದೆ.
ಕೊಡಗಿನ ಗಡಿಭಾಗದ ಮರಿಯಾನಗರಕ್ಕೆ ಹೊಂದಿಕೊಂಡಂತಿರುವ ಚಿಮ್ಮಿಯಣ್ಣ ಎಂಬವರ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಆಡನ್ನು ಎಳೆದ ತಿಂದಿದೆ. ಚಿರತೆಯನ್ನು ಪ್ರತ್ಯಕ್ಷವಾಗಿ ನೋಡಿರುವ ತೋಟದ ಕಾರ್ಮಿಕರು ಕಾಡಿನಂಚಿನ ಜಮೀನುಗಳಲ್ಲಿ ಕೆಲಸ ನಿರ್ವಹಿಸಲು ಹಿಂಜರಿಯುತ್ತಿದ್ದಾರೆ.
ಹಾಸನ ಮತ್ತು ಕೊಡಗು ಜಿಲ್ಲೆಯ ಗಡಿಭಾಗವಾಗಿರುವ ಈ ಪ್ರದೇಶದಲ್ಲಿ ಈಗಾಗಲೇ ಹಾಸನದ ಅರಣ್ಯಾಧಿಕಾರಿಗಳು ಚಿರತೆ ಸೆರೆಗೆ ಬೋನ್ನ್ನು ತಂದು ಇರಿಸಿದ್ದಾರೆಯಾದರು ಚಿರತೆ ತಮ್ಮ ಮೇಲೆರಗಬಹುದು ಎನ್ನುವ ಭೀತಿಯಲ್ಲೇ ಗ್ರಾಮಸ್ಥರು ದಿನದೂಡುತ್ತಿದ್ದಾರೆ.
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…