Advertisement
ಕಲೆ-ಸಂಸ್ಕೃತಿ

ಸಿದ್ಧವಾಗಿದೆ ಯಕ್ಷಗಾನ ಪಠ್ಯ ಪುಸ್ತಕ

Share

ಸುಳ್ಯ: ಪ್ರಪ್ರಥಮ ಯಕ್ಷಗಾನ ಪಠ್ಯಪುಸ್ತಕ ಸಿದ್ಧಗೊಂಡಿದೆ. ಯಕ್ಷಗಾನ ಮತ್ತು ಬಯಲಾಟ ಅಕಾಡೆಮಿಯ ಪ್ರಥಮ ಅವಧಿಯ ಮಹತ್ವಾಕಾಂಕ್ಷಿ ಯಕ್ಷ ಶಿಕ್ಷಣ ಯೋಜನೆ ದಶಕದ ಬಳಿಕ ಸಾಕಾರವಾಗಿದೆ ಎಂದು ಯಕ್ಷಗಾನ ಶಿಕ್ಷಣ ಪಠ್ಯಪುಸ್ತಕ ರಚನಾ ಸಮಿತಿ ಸದಸ್ಯ ಡಾ. ಸುಂದರ ಕೇನಾಜೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಈ ಪಠ್ಯಪುಸ್ತಕದ ಆಧಾರದಲ್ಲಿ ಖಾಸಗಿಯಾಗಿ ಗುರು ಮುಖೇನ ಯಕ್ಷಗಾನ ಮುಮ್ಮೇಳ ಕಲಿಯಬಹುದು. ಇದೇ ವರ್ಷ ಕರ್ನಾಟಕ ಪ್ರೌಢಶಾಲಾ ಪರೀಕ್ಷಾ ಮಂಡಳಿ ಯಕ್ಷಗಾನ ಜೂನಿಯರ್ ಸರ್ಟಿಫಿಕೆಟ್ ಪರೀಕ್ಷೆ ಆರಂಭಿಸುತ್ತಿದೆ. ಜೂನಿಯರ್ ಪರೀಕ್ಷೆ ಬರೆಯಲು ಕನಿಷ್ಠ 2 ವರ್ಷ ಕಲಿಕೆ ನಿಗದಿಪಡಿಸಲಾಗಿದೆ. ಜೂನಿಯರ್ ಪರೀಕ್ಷೆ ಮುಗಿಸುವ ಹೊತ್ತಿಗೆ ಸೀನಿಯರ್ ಪಠ್ಯ ಮುದ್ರಣಗೊಳ್ಳುವ ಸಾಧ್ಯತೆ ಇದೆ. ಸೀನಿಯರ್ ಪರೀಕ್ಷೆ ಕಲಿಕೆಗೂ 2 ವರ್ಷ ನಿಗದಿಪಡಿಸಲಾಗಿದೆ. ನಂತರ ವಿದ್ವತ್ ಎರಡು ಹಂತದಲ್ಲಿ ನಡೆಯಲಿದೆ. ಇದಕ್ಕೆ ಪಠ್ಯವಸ್ತುವಿನಿಂದ ಹಿಡಿದು ಪುಸ್ತಕ ರಚನೆ ಹಾಗೂ ಇತರ ಕಾರ್ಯಗಳು ನಡೆಯಬೇಕಾಗಿದೆ ಎಂದು ತಿಳಿಸಿದರು.

ಪಠ್ಯದ ಒಳಗೇನಿದೆ? ಪ್ರಾಥಮಿಕ ಪಠ್ಯಪುಸ್ತಕದಲ್ಲಿ ತೆಂಕು – ಬಡಗುತಿಟ್ಟು ಯಕ್ಷಗಾನದ ಕಲಿಕಾ ವಿಷಯ ಒಳಗೊಂಡಿದೆ. ಒಟ್ಟು ನಾಲ್ಕು ಪ್ರಮುಖ ಅಧ್ಯಾಯಗಳು, ಅದರೊಳಗೆ ಘಟಕಗಳಲ್ಲಿ ವಿವರಣೆ ಇದೆ. ಅಧ್ಯಾಯ ಒಂದರಲ್ಲಿ ಯಕ್ಷಗಾನ ಪರಿಚಯ, ಅದರ ಅಂಗಗಳು ಮತ್ತು ಇತಿಹಾಸ ವಿವರಿಸಲಾಗಿದೆ. ಎರಡರಲ್ಲಿ ರಂಗಸ್ಥಳ, ಚೌಕಿ, ವೇಷಭೂಷಣಗಳು, ಬಣ್ಣಗಾರಿಕೆ ಬಗ್ಗೆ ತಿಳಿಸಲಾಗಿದೆ. ಅಧ್ಯಾಯ ಮೂರರಲ್ಲಿ ಪ್ರಸಂಗಗಳು ಮತ್ತು ಅರ್ಥಗಾರಿಕೆ ಬಗ್ಗೆ ವಿವರಿಸಲಾಗಿದೆ. ಘಟಕಗಳಲ್ಲಿ ಅಭ್ಯಾಸಕ್ಕಾಗಿ ಕೆಲವು ಪ್ರಸಂಗಗಳನ್ನು ನೀಡಲಾಗಿದೆ. ಕೊನೆಯ ಹಾಗೂ ಹೆಚ್ಚು ಪ್ರಾಯೋಗಿಕ ಅಧ್ಯಾಯ ಯಕ್ಷಗಾನ ಶಿಕ್ಷಣ. ಇಲ್ಲಿ ಆರು ಘಟಕಗಳನ್ನು ರಚಿಸಲಾಗಿದೆ. ಅದರಲ್ಲಿ ಲಯ, ಕಾಲ, ತಾಳಗಳ ಪರಿಕಲ್ಪನೆ, ತೆಂಕುತಿಟ್ಟು ತಾಳಗಳು ಮತ್ತು ಹೆಜ್ಜೆಗಾರಿಕೆ, ತೆಂಕುತಿಟ್ಟಿನ ರಂಗಕ್ರಮಗಳು, ಬಡಗುತಿಟ್ಟಿನ ತಾಳಗಳು ಮತ್ತು ಹೆಜ್ಜೆಗಾರಿಕೆ, ಬಡಗುತಿಟ್ಟಿನ ರಂಗಕ್ರಮಗಳು, ಅಭಿನಯ ಮತ್ತು ರಂಗಗತಂತ್ರಗಳು ಇವುಗಳನ್ನು ಅಳವಡಿಸಿಕೊಳ್ಳಲಾಗಿದೆ.

ಆಸಕ್ತರು ಸರ್ಕಾರಿ ಮುದ್ರಣಾಲಯ ಬೆಂಗಳೂರು 080-22213474, ಮೈಸೂರು 0821-2540684, ಧಾರವಾಡ 0836-2748145ಗೆ ಸಂಪರ್ಕಿಸಬಹುದು. ಪಠ್ಯ ಪುಸ್ತಕ ಪರಿಷ್ಕರಣೆಗೆ ಪ್ರೊ.ಎಂ.ಎಲ್. ಸಾಮಗ ಅವರ ಕೊಡುಗೆ ಸ್ಮರಣೀಯ ಎಂದು ಡಾ. ಕೇನಾಜೆ ಹೇಳಿದರು.

ಸಮಿತಿ ಅಧ್ಯಕ್ಷ ಕುಂಬ್ಳೆ ಸುಂದರ ರಾವ್, ಸದಸ್ಯರಾದ ಪ್ರಕಾಶ್ ಮೂಡಿತ್ತಾಯ, ಸುಜಿಯಿಂದ್ರ ಹಂದೆ ಸುದ್ದಿಗೋಷ್ಠಿಯಲ್ಲಿದ್ದರು.

ಮೌಲ್ಯಮಾಪನಕ್ಕಾಗಿ ಅಭ್ಯಾಸ ಪ್ರಶ್ನೆ: ಎಲ್ಲ ಘಟಕಗಳ ಕೊನೆಯಲ್ಲಿ ಮೌಲ್ಯಮಾಪನಕ್ಕಾಗಿ ಅಭ್ಯಾಸ ಪ್ರಶ್ನೆಗಳನ್ನು ನೀಡಲಾಗಿದೆ. ವಿದ್ಯಾರ್ಥಿಗಳಿಗೆ ಕಲಿಕೆ ಸುಲಭವಾಗಲು ಹಲವು ಸಂಕೇತಗಳನ್ನು ನೀಡಲಾಗಿದೆ. ಈ ಸಂಕೇತಗಳ ಮೂಲಕ ಯಕ್ಷಗಾನ ಅಭ್ಯಾಸ ಮೊದಲ ಪ್ರಯೋಗ. ಈ ಪ್ರಯೋಗಕ್ಕೆ ಹೆಚ್ಚಿನ ಕಾಲಾವಕಾಶ ಹಾಗೂ ಪರಿಶ್ರಮ ಹಾಕಲಾಗಿದೆ. ಪಠ್ಯ ತಯಾರಿಯಲ್ಲಿ ಕೆಲವೊಂದು ಲೋಪವಾಗಿರುವ ಸಾಧ್ಯತೆ ಇದೆ. ಅದನ್ನು ಮುಂದಿನ ಹಂತದಲ್ಲಿ ಸರಿಪಡಿಸಿಕೊಳ್ಳಬಹುದು ಎಂದು ಕೇನಾಜೆ ತಿಳಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

5 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

11 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

23 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

23 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

1 day ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

2 days ago