Advertisement
ಸುದ್ದಿಗಳು

ಸಿದ್ಧಾಂತ ವಿರುದ್ಧ ಸ್ಪರ್ಧೆಯಲ್ಲ- ದ್ವಿಮುಖ ನೀತಿ ವಿರುದ್ಧ ಸ್ಫರ್ಧೆ – ವಿಷ್ಣು ಭಟ್ ಮೂಲೆತೋಟ ಸ್ಪಷ್ಟನೆ

Share

ಎಲಿಮಲೆ: ನೆಲ್ಲೂರು ಕೆಮ್ರಾಜೆ ಸಹಕಾರಿ ಸಂಘದ ಅಧ್ಯಕ್ಷತೆಗೆ ನಡೆದ ಚುನಾವಣೆಯಲ್ಲಿ ವಿಷ್ಣು ಭಟ್ ಮೂಲೆತೋಟ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅನಿರೀಕ್ಷಿತ ಬೆಳವಣಿಗೆಯಲ್ಲಿ ಒಂದೇ ಸಂಘಟನೆಯಲ್ಲಿ ನಡೆದ  ಈ ಬೆಳವಣಿಗೆ ಬಗ್ಗೆ  ಸುಳ್ಯನ್ಯೂಸ್.ಕಾಂ  ವಿಷ್ಣು ಭಟ್ ಅವರನ್ನು ಮಾತನಾಡಿಸಿದಾಗ, ಪಕ್ಷದ, ಸಂಘಟನೆಯ ಸಿದ್ಧಾಂತದ ವಿರುದ್ಧ ಸ್ಫರ್ಧೆ ಮಾಡಿಲ್ಲ, ದ್ವಿಮುಖ ನೀತಿ ವಿರುದ್ಧ ಸ್ಫರ್ಧೆ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಡಿಸಿಸಿ ಚುನಾವಣೆ ಬಳಿಕ ಅಡ್ಡಮತದಾನ ಪ್ರಕ್ರಿಯೆ ಚರ್ಚೆ ನಡೆಯಿತು. ಸುಳ್ಯ ತಾಲೂಕಿನ 17 ಸಹಕಾರ ಭಾರತಿ ಹಾಗೂ ಬಿಜೆಪಿ ಮತಗಳಲ್ಲಿ  7 ಮತಗಳು ಅಡ್ಡಮತದಾನವಾಗಿತ್ತು.  ಸಂಘಟನೆಯಲ್ಲಿ ಇಂತಹ ಬೆಳವಣಿಗೆ ಸರಿಯಲ್ಲ. ಹೀಗಾಗಿ ಕ್ರಮ ಆಗಬೇಕಾದ್ದೂ ನಿಜವೇ. ಹೀಗಾಗಿ ಸಂಘಟನೆಯ ಪ್ರಮುಖರು ಹೇಳಿದಂತೆ ಕಾನತ್ತೂರು ದೈವಸ್ಥಾನದಲ್ಲಿ ಪ್ರಮಾಣ ಮಾಡಿದ್ದೂ ಆಗಿದೆ. ಅದಾದ ನಂತರ 17 ಮಂದಿಯೂ ರಾಜೀನಾಮೆ ನೀಡಬೇಕು ಎಂದು ಹೇಳಿದಾಗಲೂ ಕ್ರಮಬದ್ಧವಾಗಿಯೇ ರಾಜೀನಾಮೆ ನೀಡಿದ್ದೂ ಆಗಿದೆ. ಆದರೆ ಆ ನಂತರ ಎಲ್ಲಾ 17 ಮಂದಿಗೂ ಈ ನೀತಿ ಅನ್ವಯ ಆಗಲಿಲ್ಲ. ಈ ಬಗ್ಗೆ ಸಂಘಟನೆಯ ಪ್ರಮುಖರಲ್ಲಿ  ಕೇಳಿದಾಗಲೂ ಯಾವುದೇ ಸ್ಪಷ್ಟ ಉತ್ತರವೂ ಬಂದಿರಲಿಲ್ಲ. ಕಳೆದ ಅನೇಕ ವರ್ಷಗಳಿಂದ ಪ್ರಾಮಾಣಿಕವಾಗಿ ಸಂಘಟನೆಗಾಗಿಯೇ ಕೆಲಸ ಮಾಡಲಾಗಿದೆ. ರಾಜೀನಾಮೆ ಬಳಿಕ  ಪ್ರಮುಖರ ಜೊತೆ ಮಾತುಕತೆಯನ್ನೂ ಮಾಡಲಾಗಿದ್ದರೂ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಲಿಲ್ಲ. ಸದ್ಯದದಲ್ಲೇ ಎಲ್ಲರ ವಿರುದ್ಧ ಕ್ರಮ ಎಂದು ಹೇಳಲಾಗಿತ್ತು. ಇಂದಿನವರೆಗೆ ಯಾವುದೇ ಕ್ರಮವಾಗಲಿಲ್ಲ.ಹಾಗಾದರೆ  ರಾಜೀನಾಮೆ ನೀಡಿದ ನಮ್ಮ ಪ್ರಾಮಾಣಿಕತೆಗೆ ಬೆಲೆ ಇಲ್ಲವೇ ಎಂದು ಪ್ರಶ್ನಿಸುವ ವಿಷ್ಣು ಭಟ್ ನಿನ್ನೆ ಕೂಡಾ ಸಂಘಟನೆಯು ಅಧ್ಯಕ್ಷತೆ ಸ್ಥಾನದ ಬಗ್ಗೆಯೂ ಯಾವುದೇ ಮಾತುಕತೆ ಮಾಡಲಿಲ್ಲ. ಆದರೆ ಸಂಘದ ಯಾವುದೇ ನಿರ್ದೇಶಕರ ಮೇಲೆ ಅಸಮಾಧಾನ , ಬೇಸರವಿಲ್ಲ. ಪ್ರಾಮಾಣಿಕವಾಗಿ ರಾಜೀನಾಮೆ ನೀಡಿದ ಬಳಿಕವೂ ನೂತನ ಅಧ್ಯಕ್ಷರ ಆಯ್ಕೆ ಸಂದರ್ಭದಲ್ಲಿ ಕೂಡಾ ಮಾತುಕತೆ ನಡೆಸಿಲ್ಲ ಎಂದರೆ ನಮ್ಮ ಪ್ರಾಮಾಣಿಕತೆಗೆ ಬೆಲೆ ಏನಿದೆ ? ಎಂದು ಪ್ರಶ್ನಿಸುತ್ತಾರೆ ವಿಷ್ಣು ಭಟ್.

ಈ ಸಂದರ್ಭ ಸಹಕಾರಿ ಸಂಘದ ಅನೇಕ ಸದಸ್ಯರು ಹಾಗೂ ಕೆಲವು ನಿರ್ದೇಶಕರು ನಿಮಗೆ ಅನ್ಯಾಯವಾಗಿದೆ ಹೀಗಾಗಿ  ಸ್ಫರ್ಧೆ ಮಾಡಲು ಸೂಚಿಸಿದರು. ಆದ್ದರಿಂದ ಸಂಘಟನೆಯ ದ್ವಿಮುಖ ನೀತಿ ವಿರುದ್ಧ ಸ್ಪರ್ಧೆ ಮಾಡಲಾಗಿದೆ. ಸಂಘಟನೆಯ ವಿರುದ್ಧ ಯಾವತ್ತೂ ಇಲ್ಲ. ಮುಂದೆಯೂ ಯಾರೇ ಏನೇ ಹೇಳಿದರೂ ಸಂಘಟನೆಯ ವಿರುದ್ಧ ಇರುವುದಿಲ್ಲ.  ನ್ಯಾಯದ ಪರ   ಇರುತ್ತೇನೆ ಎನ್ನುವ ವಿಷ್ಣು ಭಟ್, ಸಂಘಟನೆ ಹೇಳಿದಂತೆ ಕ್ರಮಬದ್ಧವಾಗಿ ಅಂದೇ ಸಹಕಾರಿ ಸಂಘದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾಗಿತ್ತು ಅದರ ಜೊತೆಗೆ ನೈತಿಕವಾಗಿ  ಸಹಕಾರ ಭಾರತಿಯ ಹುದ್ದೆಗೆ  ರಾಜೀನಾಮೆಯನ್ನು ಅಂದೇ ನೀಡಲಾಗಿದೆ. ಬಿಜೆಪಿ ಸದಸ್ಯನೂ ಅಲ್ಲ ಈಗ ಸಕ್ರಿಯ ಕಾರ್ಯಕರ್ತ ಮಾತ್ರಾ  ಎಂದೂ ಅವರು ಇದೇ ವೇಳೆ ಹೇಳಿದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

3 hours ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

11 hours ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

1 day ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

1 day ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

1 day ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

1 day ago