(ಕಡತ ಚಿತ್ರ )
ಸುಬ್ರಹ್ಮಣ್ಯ: ಮಂಗಳೂರು ಬೆಂಗಳೂರು ರೈಲು ಮಾರ್ಗದಲ್ಲಿ ಮತ್ತೆ ಹಳಿಯ ಮೇಲೆ ಮಣ್ಣು ಕುಸಿತಗೊಂಡು ಸೋಮವಾರ ಬೆಳಗ್ಗೆ ರೈಲು ಸಂಚಾರದಲ್ಲಿ ಕೊಂಚ ವ್ಯತ್ಯಯವಾಗಿದ್ದು ಬಳಿಕ ಸಂಚಾರ ಸುಗಮಗೊಂಡಿದೆ. ಶಿರಾಡಿ ಘಾಟಿ ಪ್ರದೇಶದಲ್ಲಿ ಪ್ರತೀ ವರ್ಷವೂ ಮಣ್ಣು ಹಳಿಯ ಮೇಲೆ ಕುಸಿತವಾಗಿ ಸಂಚಾರ ಸ್ಥಗಿತಗೊಳ್ಳುತ್ತದೆ. ಈ ಬಾರಿಯೂ ಪುನರಾವರ್ತನೆಯಾಗಿದೆ.
ಸೋಮವಾರ ಬೆಳಗ್ಗೆ ರೈಲು ಹಳಿಯ ಮೇಲೆ ಮಣ್ಣು ಕುಸಿತವಾದ ಮಾಹಿತಿ ಲಭ್ಯವಾದ ತಕ್ಷಣವೇ ತೆರವು ಕಾರ್ಯಾಚರಣೆ ನಡೆದಿದೆ. ಹೀಗಾಗಿ ಯಾವುದೇ ಸಮಸ್ಯೆಯಾಗಲಿಲ್ಲ. ಗೂಡ್ಸ್ ರೈಲು ಸಂಚಾರದಲ್ಲಿ ಕೊಂಚ ವ್ಯತ್ಯಯ ಉಂಟಾಯಿತು.
ಕಳೆದ ವಾರ ಶಿರಾಡಿ ಘಾಟ್ ಮೂಲಕ ರೈಲು ಓಡಾಟಕ್ಕೆ ಮಳೆಗಾಲ ಸುರಕ್ಷಿತವೇ ಎಂದು ರೈಲ್ವೇ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು ಇದೀಗ ಕಳೆದ ಎರಡು ವರ್ಷಗಳಿಂದ ಶಿರಾಡಿ ಘಾಟ್ ರೈಲು ಹಳಿಯ ಕಡೆಗೆ ವಿಶೇಷ ಗಮನ ನೀಡಲಾಗುತ್ತಿದ್ದು ಮಳೆಗಾಲ ಹೆಚ್ಚುವರಿಯಾಗಿ ಸುರಕ್ಷತೆಯ ಕಡೆಗೆ ಗಮನನೀಡಲಾಗುತ್ತಿದೆ. ಮಣ್ಣು ಕುಸಿತದ ಸಂದರ್ಭ ತಕ್ಷಣವೇ ಕಾರ್ಯಾಚರಣೆ ಮಾಡಲು ವಿಶೇಷ ತಂಡ ರಚನೆಯಾಗಿದೆ.
ಇದೀಗ ಶಿರಾಡಿ ಘಾಟ್ ಪ್ರದೇಶದಲ್ಲಿ ಮಳೆ ಹೆಚ್ಚಾಗಿದ್ದು ಮತ್ತೆ ಕುಸಿತದ ಭೀತಿ ಇದೆ.
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…