(ಕಡತ ಚಿತ್ರ )
ಸುಬ್ರಹ್ಮಣ್ಯ: ಮಂಗಳೂರು ಬೆಂಗಳೂರು ರೈಲು ಮಾರ್ಗದಲ್ಲಿ ಮತ್ತೆ ಹಳಿಯ ಮೇಲೆ ಮಣ್ಣು ಕುಸಿತಗೊಂಡು ಸೋಮವಾರ ಬೆಳಗ್ಗೆ ರೈಲು ಸಂಚಾರದಲ್ಲಿ ಕೊಂಚ ವ್ಯತ್ಯಯವಾಗಿದ್ದು ಬಳಿಕ ಸಂಚಾರ ಸುಗಮಗೊಂಡಿದೆ. ಶಿರಾಡಿ ಘಾಟಿ ಪ್ರದೇಶದಲ್ಲಿ ಪ್ರತೀ ವರ್ಷವೂ ಮಣ್ಣು ಹಳಿಯ ಮೇಲೆ ಕುಸಿತವಾಗಿ ಸಂಚಾರ ಸ್ಥಗಿತಗೊಳ್ಳುತ್ತದೆ. ಈ ಬಾರಿಯೂ ಪುನರಾವರ್ತನೆಯಾಗಿದೆ.
ಸೋಮವಾರ ಬೆಳಗ್ಗೆ ರೈಲು ಹಳಿಯ ಮೇಲೆ ಮಣ್ಣು ಕುಸಿತವಾದ ಮಾಹಿತಿ ಲಭ್ಯವಾದ ತಕ್ಷಣವೇ ತೆರವು ಕಾರ್ಯಾಚರಣೆ ನಡೆದಿದೆ. ಹೀಗಾಗಿ ಯಾವುದೇ ಸಮಸ್ಯೆಯಾಗಲಿಲ್ಲ. ಗೂಡ್ಸ್ ರೈಲು ಸಂಚಾರದಲ್ಲಿ ಕೊಂಚ ವ್ಯತ್ಯಯ ಉಂಟಾಯಿತು.
ಕಳೆದ ವಾರ ಶಿರಾಡಿ ಘಾಟ್ ಮೂಲಕ ರೈಲು ಓಡಾಟಕ್ಕೆ ಮಳೆಗಾಲ ಸುರಕ್ಷಿತವೇ ಎಂದು ರೈಲ್ವೇ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು ಇದೀಗ ಕಳೆದ ಎರಡು ವರ್ಷಗಳಿಂದ ಶಿರಾಡಿ ಘಾಟ್ ರೈಲು ಹಳಿಯ ಕಡೆಗೆ ವಿಶೇಷ ಗಮನ ನೀಡಲಾಗುತ್ತಿದ್ದು ಮಳೆಗಾಲ ಹೆಚ್ಚುವರಿಯಾಗಿ ಸುರಕ್ಷತೆಯ ಕಡೆಗೆ ಗಮನನೀಡಲಾಗುತ್ತಿದೆ. ಮಣ್ಣು ಕುಸಿತದ ಸಂದರ್ಭ ತಕ್ಷಣವೇ ಕಾರ್ಯಾಚರಣೆ ಮಾಡಲು ವಿಶೇಷ ತಂಡ ರಚನೆಯಾಗಿದೆ.
ಇದೀಗ ಶಿರಾಡಿ ಘಾಟ್ ಪ್ರದೇಶದಲ್ಲಿ ಮಳೆ ಹೆಚ್ಚಾಗಿದ್ದು ಮತ್ತೆ ಕುಸಿತದ ಭೀತಿ ಇದೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…