(ಕಡತ ಚಿತ್ರ )
ಸುಬ್ರಹ್ಮಣ್ಯ: ಮಂಗಳೂರು ಬೆಂಗಳೂರು ರೈಲು ಮಾರ್ಗದಲ್ಲಿ ಮತ್ತೆ ಹಳಿಯ ಮೇಲೆ ಮಣ್ಣು ಕುಸಿತಗೊಂಡು ಸೋಮವಾರ ಬೆಳಗ್ಗೆ ರೈಲು ಸಂಚಾರದಲ್ಲಿ ಕೊಂಚ ವ್ಯತ್ಯಯವಾಗಿದ್ದು ಬಳಿಕ ಸಂಚಾರ ಸುಗಮಗೊಂಡಿದೆ. ಶಿರಾಡಿ ಘಾಟಿ ಪ್ರದೇಶದಲ್ಲಿ ಪ್ರತೀ ವರ್ಷವೂ ಮಣ್ಣು ಹಳಿಯ ಮೇಲೆ ಕುಸಿತವಾಗಿ ಸಂಚಾರ ಸ್ಥಗಿತಗೊಳ್ಳುತ್ತದೆ. ಈ ಬಾರಿಯೂ ಪುನರಾವರ್ತನೆಯಾಗಿದೆ.
ಸೋಮವಾರ ಬೆಳಗ್ಗೆ ರೈಲು ಹಳಿಯ ಮೇಲೆ ಮಣ್ಣು ಕುಸಿತವಾದ ಮಾಹಿತಿ ಲಭ್ಯವಾದ ತಕ್ಷಣವೇ ತೆರವು ಕಾರ್ಯಾಚರಣೆ ನಡೆದಿದೆ. ಹೀಗಾಗಿ ಯಾವುದೇ ಸಮಸ್ಯೆಯಾಗಲಿಲ್ಲ. ಗೂಡ್ಸ್ ರೈಲು ಸಂಚಾರದಲ್ಲಿ ಕೊಂಚ ವ್ಯತ್ಯಯ ಉಂಟಾಯಿತು.
ಕಳೆದ ವಾರ ಶಿರಾಡಿ ಘಾಟ್ ಮೂಲಕ ರೈಲು ಓಡಾಟಕ್ಕೆ ಮಳೆಗಾಲ ಸುರಕ್ಷಿತವೇ ಎಂದು ರೈಲ್ವೇ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು ಇದೀಗ ಕಳೆದ ಎರಡು ವರ್ಷಗಳಿಂದ ಶಿರಾಡಿ ಘಾಟ್ ರೈಲು ಹಳಿಯ ಕಡೆಗೆ ವಿಶೇಷ ಗಮನ ನೀಡಲಾಗುತ್ತಿದ್ದು ಮಳೆಗಾಲ ಹೆಚ್ಚುವರಿಯಾಗಿ ಸುರಕ್ಷತೆಯ ಕಡೆಗೆ ಗಮನನೀಡಲಾಗುತ್ತಿದೆ. ಮಣ್ಣು ಕುಸಿತದ ಸಂದರ್ಭ ತಕ್ಷಣವೇ ಕಾರ್ಯಾಚರಣೆ ಮಾಡಲು ವಿಶೇಷ ತಂಡ ರಚನೆಯಾಗಿದೆ.
ಇದೀಗ ಶಿರಾಡಿ ಘಾಟ್ ಪ್ರದೇಶದಲ್ಲಿ ಮಳೆ ಹೆಚ್ಚಾಗಿದ್ದು ಮತ್ತೆ ಕುಸಿತದ ಭೀತಿ ಇದೆ.
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್ನಲ್ಲಿ ಪ್ರಧಾನಿ…
ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ…
ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪಾಕ್ ಪ್ರೇರಿತ ಭಯೋತ್ಪಾದಕರು ದಾಳಿ ನಡೆಸಿರುವ…
ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು…